ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಕನ್ನಡ ಚಿತ್ರರಂಗದ ಸುಮಧುರ ಕೋಗಿಲೆ ಎಂದೇ ಖ್ಯಾತರಾಗಿರುವ ಎಸ್. ಜಾನಕಿ ಅವರ ನೆನಪಿನಲ್ಲಿ ರಾಗ ರಂಜನಿ ಟ್ರಸ್ಟ್ ವತಿಯಿಂದ ‘ಕಂಗಳು ವಂದನೆ ಹೇಳುವೆ’ ಶೀರ್ಷಿಕೆಯಡಿ ವಿಶೇಷ ಚಲನಚಿತ್ರ ಗೀತೆಗಳ ಗಾಯನ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ನಿರ್ದೇಶಕ ಹಾಗೂ ಖ್ಯಾತ ಗಾಯಕ ಪ್ರಹ್ಲಾದ್ ದೀಕ್ಷಿತ್ ತಿಳಿಸಿದರು.
ನಗರದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಎಸ್. ಜಾನಕಿ ಅವರ ಹಾಡುಗಳು ಜನರ ಬದುಕಿನ ಅವಿಭಾಜ್ಯ ಭಾಗವಾಗಿವೆ. ಅವರ ಸ್ಮರಣಾರ್ಥ ಈ ಕಾರ್ಯಕ್ರಮವನ್ನು ವಂದನೆಯ ರೂಪದಲ್ಲಿ ಆಯೋಜಿಸಲಾಗುತ್ತಿದೆ ಎಂದರು.
ಕಳೆದ 10 ವರ್ಷಗಳಿಂದ ರಾಗ ರಂಜನಿ ಟ್ರಸ್ಟ್ ವತಿಯಿಂದ ಶೈಕ್ಷಣಿಕ, ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಿರಂತರವಾಗಿ ನಡೆಸಿಕೊಂಡು ಬರಲಾಗುತ್ತಿದೆ. ಈ ಕಾರ್ಯಕ್ರಮದಲ್ಲಿ ತಮ್ಮ ಮತ್ತು ಶಿಷ್ಯವೃಂದದವರಿಂದ ಎಸ್. ಜಾನಕಿ ಅವರು ಹಾಡಿರುವ ಸುಮಧುರ ಕನ್ನಡ ಚಲನಚಿತ್ರ ಗೀತೆಗಳನ್ನು ಪ್ರಸ್ತುತಪಡಿಸಲಾಗುವುದು ಎಂದು ಹೇಳಿದರು.
Also read>> ಅಂತಾರಾಜ್ಯ ಜಲ ವಿವಾದ | ಕೋರ್ಟ್ ತೀರ್ಪು ಪರಿಹಾರವಲ್ಲ, ಸಹಕಾರಿ ಆಡಳಿತವೇ ಶಾಶ್ವತ ಮಾರ್ಗ
ಕಾರ್ಯಕ್ರಮವು ಆಗಸ್ಟ್ 7ರಂದು ಸಂಜೆ 5.45ಕ್ಕೆ ನಗರದ ಕುವೆಂಪು ರಂಗಮಂದಿರದಲ್ಲಿ ನಡೆಯಲಿದೆ.
ಗಣ್ಯರು ಭಾಗಿ
ಕಾರ್ಯಕ್ರಮವನ್ನು ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಉದ್ಘಾಟಿಸಲಿದ್ದಾರೆ. ಶಾಸಕ ಎಸ್.ಎನ್. ಚನ್ನಬಸಪ್ಪ, ಸಂಗೀತ ವಿದ್ವಾಂಸ ಡಾ. ಎಸ್.ಆರ್. ನಾಗರಾಜ್ ಹಾಗೂ ಉದ್ಯಮಿ ಕೆ.ಕೆ. ಕಾಂತೇಶ್ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.
ರಾಗ ರಂಜನಿ ಟ್ರಸ್ಟ್ ಅಧ್ಯಕ್ಷ ಮಾನವೇಂದ್ರ ದೀಕ್ಷಿತ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.
ಕಾರ್ಯಕ್ರಮಕ್ಕೆ ಪ್ರವೇಶ ಉಚಿತವಾಗಿದ್ದು, ಸಂಗೀತಾಸಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಪ್ರಹ್ಲಾದ್ ದೀಕ್ಷಿತ್ ಮನವಿ ಮಾಡಿದರು.
ಹೆಚ್ಚಿನ ಮಾಹಿತಿಗಾಗಿ 9611427586, 8147501974 ಸಂಪರ್ಕಿಸಬಹುದು.
ಸುದ್ದಿಗೋಷ್ಠಿಯಲ್ಲಿ ಸಾಕ್ಷಿ, ಅನುಷಾ, ತುಷಾರಿ, ಸುಷ್ಮಾ, ಪ್ರಶಾಂತ್, ಸುಮ ಹಾಗೂ ಶಾರದ ಉಪಸ್ಥಿತರಿದ್ದರು
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 








