No Result
View All Result
Sagara Engulfed In The Ocean of Music
English Articles

Sagara Engulfed In The Ocean of Music

by ಕಲ್ಪ ನ್ಯೂಸ್
March 23, 2026
0

Kalpa Media House  |  Special Article by Rasikapriya  | An invigorating music festival held recently at Sagara, Shimoga Dist., took...

Read moreDetails
MAHE Introduces ‘MAGIC’ to Power AI-Driven Academic and Administrative Transformation

MAHE Introduces ‘MAGIC’ to Power AI-Driven Academic and Administrative Transformation

March 23, 2026
Manipal Institute of Technology, Manipal Concludes NCIIPC–AICTE Pentathon 2026 Advanced Cybersecurity Bootcamp

Manipal Institute of Technology, Manipal Concludes NCIIPC–AICTE Pentathon 2026 Advanced Cybersecurity Bootcamp

March 18, 2026
Bengaluru Gets a World-Class Electronics Co-Innovation Hub as Henkel Launches Advanced Application Center

Bengaluru Gets a World-Class Electronics Co-Innovation Hub as Henkel Launches Advanced Application Center

March 17, 2026
Malnad is a Cultural ‘Gharana’ of Great Minds: Dr. Jayamala at Sahyadri Utsava

Malnad is a Cultural ‘Gharana’ of Great Minds: Dr. Jayamala at Sahyadri Utsava

March 13, 2026
  • Advertise With Us
  • Grievances
  • About Us
  • Contact Us
Tuesday, March 24, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಜ.27 ರಂದು ಎಸ್‌. ರುದ್ರೇಗೌಡ-ದಿ ಐರನ್‌ ಮ್ಯಾನ್‌ ಪುಸ್ತಕ ಬಿಡುಗಡೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
January 25, 2024
in ಶಿವಮೊಗ್ಗ
0
ಜ.27 ರಂದು ಎಸ್‌. ರುದ್ರೇಗೌಡ-ದಿ ಐರನ್‌ ಮ್ಯಾನ್‌ ಪುಸ್ತಕ ಬಿಡುಗಡೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಖ್ಯಾತ ಕೈಗಾರಿಕೋದ್ಯಮಿಗಳು ಹಾಗೂ ವಿಧಾನ ಪರಿಷತ್‌ ಸದಸ್ಯರಾದ ಎಸ್‌.ರುದ್ರೇಗೌಡರಿಗೆ ಇದೇ ಜ.27 ರಂದು ಅಮೃತಮಯಿ ಶೀರ್ಷಿಕೆಯಡಿ ಅಭಿನಂದನಾ ಕಾರ್ಯಕ್ರಮ ಹಾಗೂ ಅವರ ಬದುಕು-ಸಾಧನೆ ಕುರಿತ ದಿ ಐರನ್‌ ಮ್ಯಾನ್‌ ಪುಸ್ತಕ ಬಿಡುಗಡೆ ಸಮಾರಂಭವನ್ನು ನಗರದ ಸವಳಂಗ ರಸ್ತೆಯ ಸರ್ಜಿ ಕನ್ವೆನ್ಶನ್‌ ಹಾಲ್‌ ಪಕ್ಕದ ಮೈದಾನದಲ್ಲಿ ಸಂಜೆ 5:30ಕ್ಕೆ ಹಮ್ಮಿಕೊಳ್ಳಲಾಗಿದೆ ಎಂದು ಸಮಿತಿಯ ಗೌರವಾಧ್ಯಕ್ಷರು ಹಾಗೂ ಸಂಸದ ಬಿ.ವೈ. ರಾಘವೇಂದ್ರ MP Raghavendra ತಿಳಿಸಿದರು.

ಅವರು ನಗರದ ಮಥುರಾ ಪ್ಯಾರಡೈಸ್‌ನಲ್ಲಿ ಗುರುವಾರ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿ, ರಾಜ್ಯ ಕಂಡಂತಹ ಅಪರೂಪದ ಮೌಲ್ಯಾಧಾರಿತ ರಾಜಕಾರಣಿ, ಶ್ರಮಿಕರ ಉದ್ಯೋಗದಾತರಾಗಿ, ಕೈಗಾರಿಕಾ ಕ್ಷೇತ್ರದ ರೂವಾರಿಗಳಾಗಿ, ವ್ಯಾಪಾರ ಮತ್ತು ವಾಣಿಜ್ಯ ಚಟುವಟಿಕೆಗಳಿಗೆ ಜೀವ ತುಂಬಿದವರು ಎಸ್‌. ರುದ್ರೇಗೌಡರು. S Rudregowda ಅವರಿಗೆ ಅಭಿನಂದನೆ ಹಮ್ಮಿಕೊಳ್ಳಲಾಗಿದೆ.
ಅಂದು ಕಾರ್ಯಕ್ರಮದಲ್ಲಿ ಸುಪ್ರೀಂಕೋರ್ಟ್‌ನ ವಿಶ್ರಾಂತ ನ್ಯಾಯಮೂರ್ತಿ ಶಿವರಾಜ್‌ ವಿ. ಪಾಟೀಲ್‌ ಗೌರವ ಸಮರ್ಪಣೆ ಮಾಡುವರು. ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್‌. ಯಡಿಯೂರಪ್ಪ ಕಾರ್ಯಕ್ರಮ ಉದ್ಘಾಟಿಸುವರು, ಗೌಡರ ಬದುಕು-ಸಾಧನೆ ಕುರಿತ “ಎಸ್‌. ರುದ್ರೇಗೌಡ-ದಿ ಐರನ್‌ ಮ್ಯಾನ್‌” ಪುಸ್ತಕವನ್ನು ವಿಧಾನ ಪರಿಷತ್‌ ಸಭಾಪತಿ ಬಸವರಾಜ್‌ ಹೊರಟ್ಟಿ ಅವರು ಬಿಡುಗಡೆ ಮಾಡಲಿದ್ದಾರೆ. ವಿಧಾನ ಪರಿಷತ್‌ ಮಾಜಿ ಸಭಾಪತಿಗಳಾದ ಬಿ.ಎಲ್‌. ಶಂಕರ್‌ ಅವರು ಗೌಡರ ಕುರಿತು ಅಭಿನಂದನಾ ನುಡಿಗಳನ್ನಾಡಲಿದ್ದಾರೆ, ಎಸ್‌. ರುದ್ರೇಗೌಡರನ್ನು ಕುರಿತ ಕಿರುಚಿತ್ರ ಕೂಡ ಲೋಕಾರ್ಪಣೆಗೊಳ್ಳಲಿದೆ ಎಂದು ತಿಳಿಸಿದರು.

ಅಭಿನಂದನಾ ಸಮಿತಿಯ ಅಧ್ಯಕ್ಷರು ಹಾಗೂ ನಂಜಪ್ಪ ಗ್ರೂಫ್‌ ಆಫ್‌ ಹಾಸ್ಪಿಟಲ್‌ನ ಮ್ಯಾನೇಜಿಂಗ್‌ ಟ್ರಸ್ಟಿ ಡಿ.ಜಿ. ಬೆನಕಪ್ಪ ಮಾತನಾಡಿ, ಕಾರ್ಯಕ್ರಮದ ಪೂರ್ವಭಾವಿಯಾಗಿ ಸಾಕಷ್ಟು ಸಿದ್ಧತೆಗಳನ್ನು ಕೈಗೊಳ್ಳಲಾಗಿದೆ. ಸರ್ಜಿ ಕನ್ವೆನ್ಷನ್‌ ಹಾಲ್‌ನಲ್ಲಿ ವಿವಿಧ ವಿಚಾರ ಗೋಷ್ಠಿಗಳು ನಡೆಯಲಿವೆ, ಪಕ್ಕದ ಮೈದಾನದಲ್ಲಿ ಅಭಿನಂದನಾ ಕಾರ್ಯಕ್ರಮ ನಡೆಯಲಿದೆ, ಈಗಾಗಲೇ ಅಭಿಮಾನಿಗಳು, ಹಿತೈಷಿಗಳು, ಬಂಧುಗಳು, ಎಲ್ಲ ಸಮಾಜದ ಗಣ್ಯರು, ಎಲ್ಲರಿಗೂ ಆಹ್ವಾನ ಪತ್ರಿಕೆಯನ್ನು ನೀಡಿ ಆಮಂತ್ರಿಸಲಾಗಿದೆ. ಒಂದು ವೇಳೆ ಆಹ್ವಾನ ಪತ್ರಿಕೆ ತಲುಪದವರು ಇದನ್ನೇ ವೈಯಕ್ತಿಕ ಆಹ್ವಾನವೆಂದು ತಿಳಿದು ನಮ್ಮ ಹೆಮ್ಮೆಯ ಈ ಸಂಭ್ರಮದಲ್ಲಿ ಭಾಗವಹಿಸುವಂತೆ ಅವರು ಮನವಿ ಮಾಡಿದರು. ಆಗಮಿಸುವ ಸರ್ವರಿಗೂ ಮಧ್ಯಾಹ್ನ ಹಾಗೂ ರಾತ್ರಿ ಊಟ ಮತ್ತು ಉಪಾಹಾರದ ವ್ಯವಸ್ಥೆ ಮಾಡಲಾಗಿದೆ ಎಂದು ತಿಳಿಸಿದರು.

Kalahamsa Infotech private limitedಸಮಿತಿಯ ಪ್ರಧಾನ ಕಾರ್ಯದರ್ಶಿ ಡಾ. ಧನಂಜಯ ಸರ್ಜಿ Dr. Dhananjaya Sarji ಮಾತನಾಡಿ, ಅಂದು ಬೆಳಗ್ಗೆ 10.30ರಿಂದ ಶ್ರಮದಿಂದ ಸಾರ್ಥಕತೆಯೆಡೆಗೆ ಶೀರ್ಷಿಕೆಯಡಿ ಯವಕರಿಗೆ ಮಾರ್ಗದರ್ಶಿ ವಿಚಾರಗೋಷ್ಠಿ ನಡೆಯಲಿದೆ. ರುದ್ರೇಗೌಡರ ವ್ಯಕ್ತಿತ್ವದ ಭಾಗವಾದ ರಾಜಕಾರಣ, ಸಮಾಜಸೇವೆ, ಕೈಗಾರಿಕೆಗಳ ಕುರಿತು ಚರ್ಚೆಗಳನ್ನು ಯುವಕರಿಗಾಗಿ ಹಮ್ಮಿಕೊಳ್ಳಲಾಗಿದೆ. ವಿಶೇಷವಾಗಿ ಮೂವರು ಹೆಸರಾಂತ ಸಂಪನ್ಮೂಲ ವ್ಯಕ್ತಿಗಳು ಯುವಕ-ಯುವತಿಯರೊಂದಿಗೆ ಸಾಕಷ್ಟು ವಿಚಾರಗಳನ್ನು ವಿನಿಮಯ ಮಾಡಿಕೊಳ್ಳಲಿದ್ದಾರೆ.

ಕಾರ್ಕಳ ಶಾಸಕ ವಿ. ಸುನಿಲ್‌ ಕುಮಾರ್‌ ಅವರು ಮೌಲ್ಯಾಧಾರಿತ ರಾಜಕಾರಣ ಕುರಿತು, ಬೆಂಗಳೂರು ಅದಮ್ಯ ಚೇತನ ಫೌಂಡೇಷನ್‌ನ ಶ್ರೀಮತಿ ತೇಜ್ವಸಿನಿ ಅನಂತಕುಮಾರ್‌ ಅವರು ಪರಿಸರ ಪ್ರಜ್ಞೆಯೇ ಸಮಾಜ ಸೇವೆ ಕುರಿತು ಹಾಗೂ ಕಿರ್ಲೋಸ್ಕರ್‌ ಫೆರುಸ್‌ ಇಂಡಸ್ಟ್ರೀಸ್‌ ಲಿಮಿಟೆಡ್‌ನ ಮ್ಯಾನೇಜ್‌ಮೆಂಟ್‌ ಆಂಡ್‌ ಟೆಕ್ನಿಕಲ್‌ ಅಡ್ವೈಜರ್‌ ಬಿ.ಎಸ್‌.ಗೋವಿಂದ್‌ ಅವರು ಸಾಧನೆಗೊಂದು ಗುರಿ ವಿಷಯ ಕುರಿತು ವಿಚಾರ ಗೋಷ್ಟಿ ನಡೆಸಿಕೊಡಲಿದ್ದಾರೆ. ವಿಚಾರಗೋಷ್ಟಿಯ ಅಧ್ಯಕ್ಷತೆಯನ್ನು ಬೆಂಗಳೂರು ರಮಣಶ್ರೀ ಫೌಂಡೇಷನ್‌ನ ಅಧ್ಯಕ್ಷರಾದ ನಾಡೋಜ ಎಸ್‌.ಷಡಕ್ಷರಿ ಅವರು ವಹಿಸಲಿದ್ದಾರೆ.

ವಿವಿಧ ಕ್ಷೇತ್ರಗಳ ಆಯ್ದ ಯುವಕರೊಂದಿಗೆ ರುದ್ರೇಗೌಡರ ಬದುಕು-ಸಾಧನೆ ಕುರಿತು “ಅಂತರಂಗ-ಬಹಿರಂಗ” ಸಂವಾದ ಕಾರ್ಯಕ್ರಮವನ್ನು ಆಯೋಜಿಸಿದ್ದು, ಅವರ ಬೆಳವಣಿಗೆ, ಕಷ್ಟಗಳನ್ನು ಅವಕಾಶಗಳನ್ನಾಗಿಸಿಕೊಂಡು ಸಾಧಿಸಿದ ರೀತಿ, ಉದ್ಯಮಗಳನ್ನು ಕಟ್ಟಿದ ಶ್ರಮ, ಎಲ್ಲರನ್ನೂ ಜೊತೆಯಾಗಿ ಬೆಳೆಸಿದ ಪರಿ, ಈ ಎಲ್ಲ ವಿಚಾರಗಳನ್ನೂ ಅವರೊಂದಿಗಿನ ಆತ್ಮೀಯ ಸಂವಾದದಲ್ಲಿ ಅವರ ಪುತ್ರಿ ಚೈತ್ರ ಅರುಣ್‌ ನಿರ್ವಹಿಸಲಿದ್ದಾರೆ ಎಂದರು.

ಈ ವಿಚಾರಗೋಷ್ಟಿಗಳನ್ನು ಯುವ ಜನಾಂಗದ ಭವಿಷ್ಯಕ್ಕೆ ಮಾರ್ಗದರ್ಶಿಯಾಗಿರುವಂತೆ ರೂಪಿಸಲಾಗಿದೆ. ಯುವ ಸಮೂಹದಲ್ಲಿ ಹೊಸ ಬದಲಾವಣೆ ತರುವ, ಪರಿಸರಾಸಕ್ತರು, ಹೊಸದಾಗಿ ಯಾವುದೇ ಉದ್ಯಮವನ್ನು ಆರಂಭಿಸಬೇಕು ಎಂಬ ಚಿಂತನೆ ಹೊಂದಿದವರು, ಈಗಾಗಲೇ ಸಣ್ಣ ಉದ್ಯಮಗಳನ್ನು ನಡೆಸುತ್ತಿರುವವರು, ಪದವಿ ವಿದ್ಯಾಭ್ಯಾಸ ಮಾಡುತ್ತಿರುವವರು, ಸ್ವಾವಲಂಬಿ ಜೀವನ ನಡೆಸಬೇಕು ಎಂಬ ಆಲೋಚನೆ ಇಟ್ಟುಕೊಂಡವರು, ಈಗಾಗಲೇ ವಿವಿಧ ಸಂಸ್ಥೆಗಳಲ್ಲಿ ಆಡಳಿತಾಧಿಕಾರಿಗಳಾಗಿ ಹಾಗೂ ಎಚ್‌ಆರ್‌ ಆಗಿ ಕೆಲಸ ಮಾಡುತ್ತಿರುವವರು ಈ ವಿಚಾರ ಗೋಷ್ಠಿಗಳಿಗೆ ಭಾಗವಹಿಸಲು ಅರ್ಹರು. ಭಾಗವಹಿಸಬಹುದು, 850 ಜನರಿಗೆ ಈಗಾಗಲೇ ಆನ್‌ಲೈನ್‌ನಲ್ಲಿ ನೋಂದಣಿ ಮಾಡಿಕೊಂಡಿದ್ದಾರೆ. 20 ಯುವಕರು ಎಸ್‌.ರುದ್ರೇಗೌಡರು ಬೆಳೆದು ಬಂದ ದಾರಿ ಬಗ್ಗೆ ಸಮಾಲೋಚನೆ ಮಾಡಲಿದ್ದಾರೆ. ಕಾರ್ಯಕ್ರಮಕ್ಕೆ ಆಗಮಿಸುವವರು ಕಾರು ಹಾಗೂ ದ್ವಿಚಕ್ರ ವಾಹನ ಪಾರ್ಕಿಂಗ್‌ ಮಾಡಲು ಸೂಕ್ತ ವ್ಯವಸ್ಥೆ ಮಾಡಲಾಗಿದೆ, ಅಲ್ಲದೇ ಪೋಲೀಸ್‌ ಇಲಾಖೆ ಸಿಬ್ಬಂದಿ ಭದ್ರತೆ ಸೇರಿದಂತೆ ಸುಗಮ ಸಂಚಾರ ವ್ಯವಸ್ಥೆಗೆ ಸಹಕರಿಸಲಿದ್ದಾರೆ ಎಂದರು.

ಪತ್ರಿಕಾಗೋಷ್ಟಿಯಲ್ಲಿ ಸಮಿತಿಯ ಪ್ರಮುಖರಾದ ಎಸ್‌.ಎಸ್‌. ಜ್ಯೋತಿಪ್ರಕಾಶ್‌, ಸಮಾಜ ಹಿರಿಯ ಮುಖಂಡರಾ ಎನ್‌.ಜೆ. ರಾಜಶೇಖರ್‌, ತಮ್ಮಡಿಹಳ್ಳಿ ನಗಾರಾಜ್‌, ಬಳ್ಳೆಕೆರೆ ಸಂತೋಷ್‌, ಉದ್ಯಮಿ ಬಾಳೆಕಾಯಿ ಮೋಹನ್‌ ಮತ್ತಿತರರು ಹಾಜರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Dr. Dhananjaya SarjiKannada NewsKannada News LiveKannada News Online ShivamoggaKannada News WebsiteKannada WebsiteLatest News KannadaLocal NewsMalnad NewsMP RaghavendraNews in KannadaNews KannadaS RudregowdaShimogaShivamogga Newsಎಸ್. ರುದ್ರೇಗೌಡಡಾ. ಧನಂಜಯ ಸರ್ಜಿಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್ಸಂಸದ ಬಿ.ವೈ. ರಾಘವೇಂದ್ರ
Share218Tweet123Send
Previous Post

ಕಾಂಗ್ರೆಸ್’ಗೆ ಕೈ ಕೊಟ್ಟು ಬಿಜೆಪಿಗೆ ಘರ್ ವಾಪ್ಸಿ ಆದ ಜಗದೀಶ್ ಶೆಟ್ಟರ್

Next Post

ಎಲ್ಲ ಅಧಿಕೃತ ಕಾರ್ಯಕ್ರಮ ರದ್ದು, ಪಕ್ಷದ ಶಾಸಕರೊಂದಿಗೆ ಸಭೆ: ಕುತೂಹಲ ಮೂಡಿಸಿದ ನಿತೀಶ್ ಕುಮಾರ್ ನಡೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಎಲ್ಲ ಅಧಿಕೃತ ಕಾರ್ಯಕ್ರಮ ರದ್ದು, ಪಕ್ಷದ ಶಾಸಕರೊಂದಿಗೆ ಸಭೆ: ಕುತೂಹಲ ಮೂಡಿಸಿದ ನಿತೀಶ್ ಕುಮಾರ್ ನಡೆ

ಎಲ್ಲ ಅಧಿಕೃತ ಕಾರ್ಯಕ್ರಮ ರದ್ದು, ಪಕ್ಷದ ಶಾಸಕರೊಂದಿಗೆ ಸಭೆ: ಕುತೂಹಲ ಮೂಡಿಸಿದ ನಿತೀಶ್ ಕುಮಾರ್ ನಡೆ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ಶಿವಮೊಗ್ಗದಲ್ಲಿ ಅರಳಿದ ಮೊಗ್ಗುಗಳು-5 | 80 ವಸಂತಗಳನ್ನು ಸಾರ್ಥಕವಾಗಿ ಕಳೆದ ಸಜ್ಜನಿಕೆಯ ಸೀತಾರಾಮ

ಶಿವಮೊಗ್ಗದಲ್ಲಿ ಅರಳಿದ ಮೊಗ್ಗುಗಳು-5 | 80 ವಸಂತಗಳನ್ನು ಸಾರ್ಥಕವಾಗಿ ಕಳೆದ ಸಜ್ಜನಿಕೆಯ ಸೀತಾರಾಮ

March 24, 2026
ತೀರ್ಥಹಳ್ಳಿ-ಮಂಗಳೂರು ಸೇರಿ 3 ರೈಲ್ವೆ ಮಾರ್ಗದ ಒಪ್ಪಿಗೆಗೆ ಎಂಪಿ ರಾಘವೇಂದ್ರ ಆಗ್ರಹ

ಸ್ವಾಭಿಮಾನದ ಬದುಕಿಗೆ ವಿಶ್ವಕರ್ಮ ಯೋಜನೆ ಶಕ್ತಿ ತುಂಬಿದೆ: ಸಂಸದ ರಾಘವೇಂದ್ರ

March 24, 2026
ಗಮನಿಸಿ! ಈ ಎರಡು ದಿನ ಮೈಸೂರು-ಶಿವಮೊಗ್ಗ ರೈಲು ಸಂಚಾರದಲ್ಲಿ ಬದಲಾವಣೆ

ಗುಡ್ ನ್ಯೂಸ್ | ಹುಬ್ಬಳ್ಳಿ – ರಾಮೇಶ್ವರಂ ನಡುವೆ ವಿಶೇಷ ರೈಲು | ಇಲ್ಲಿದೆ ಡೀಟೇಲ್ಸ್

March 24, 2026
ರಸ್ತೆ ಸಂಚಾರ ನಿಯಮಗಳನ್ನು ಪ್ರತಿಯೊಬ್ಬರೂ ಪಾಲಿಸಿ: ಸುರೇಶ್ ಕುಮಾರ್

ರಸ್ತೆ ಸಂಚಾರ ನಿಯಮಗಳನ್ನು ಪ್ರತಿಯೊಬ್ಬರೂ ಪಾಲಿಸಿ: ಸುರೇಶ್ ಕುಮಾರ್

March 24, 2026
ಘನತ್ಯಾಜ್ಯ ವಿಲೇವಾರಿ ಪರಿಣಾಮಕಾರಿ ಅನುಷ್ಠಾನಗೊಳಿಸುವಲ್ಲಿ ಸರ್ಕಾರ ವಿಫಲ: ಶಾಸಕ ಡಿ.ಎಸ್. ಅರುಣ್ ಟೀಕೆ

ಘನತ್ಯಾಜ್ಯ ವಿಲೇವಾರಿ ಪರಿಣಾಮಕಾರಿ ಅನುಷ್ಠಾನಗೊಳಿಸುವಲ್ಲಿ ಸರ್ಕಾರ ವಿಫಲ: ಶಾಸಕ ಡಿ.ಎಸ್. ಅರುಣ್ ಟೀಕೆ

March 24, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL