ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಶರಾವತಿ ಹಿನ್ನೀರಿನಲ್ಲಿ #Sharathi Backwater ತೆಪ್ಪ ಮುಳುಗಿ ಮೂವರು ನಾಪತ್ತೆ ಆದ ಪ್ರಕರಣಕ್ಕೆ ಸಂಬಂಧಿಸಿದಂತೆ ಯುವಕರ ಮೃತದೇಹ ಪತ್ತೆಯಾಗಿದೆ.
ಸಾಗರ ತಾಲೂಕು ಕಳಸವಳ್ಳಿ ಸಮೀಪ ಶರಾವತಿ ಹಿನ್ನೀರಿನಲ್ಲಿ ಹೊಳೆ ಊಟಕ್ಕಾಗಿ ತೆರಳಿದ್ದ ವೇಳೆ ನಿನ್ನೆ ಸಂಜೆ ತೆಪ್ಪ ಮಗುಚಿ ನೀರಲ್ಲಿ ಮುಳುಗಿ ಯುವಕರು ನಾಪತ್ತೆಯಾಗಿದ್ದರು.
ಚೇತನ್ (28), ಸಂದೀಪ್ (30) ಹಾಗೂ ರಾಜೀವ್ (34) ನೀರಿನಲ್ಲಿ ಮುಳುಗಿ ನಾಪತ್ತೆಯಾಗಿದ್ದರು. ಈ ಹಿನ್ನೆಲೆಯಲ್ಲಿ ನಿನ್ನೆ ರಾತ್ರಿ ಪೊಲೀಸ್ ಹಾಗೂ ಆಗ್ನಿಶಾಮಕ ದಳದಿಂದ ಶೋಧ ಕಾರ್ಯ ನಡೆಸಲಾಗಿತ್ತು. ರಾತ್ರಿಯಾದ್ದರಿಂದ ಕಾರ್ಯಾಚರಣೆಗೆ ಹಿನ್ನಡೆಯಾಗಿತ್ತು.
ಇಂದು ಬೆಳಿಗ್ಗೆಯಿಂದಲೇ ಕಾರ್ಯಾಚರಣೆ ಆರಂಭಿಸಿ ಮುಳುಗು ತಜ್ಞ ಈಶ್ವರ್ ಮಲ್ಪೆ ನೇತೃತ್ವದ ತಂಡ ಯುವಕರ ಮೃತದೇಹವನ್ನ ಮೇಲಕ್ಕೆತ್ತಿದ್ದಾರೆ. ಸುಮಾರು 40 ಅಡಿ ಆಳದಲ್ಲಿ ಮೂವರು ಯುವಕರ ಶವ ಪತ್ತೆಯಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 
















