ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಸರ್ಜಿ ಫೌಂಡೇಶನ್ #Sarji Foundation ಮತ್ತು ಸ್ಪರ್ಧಾ ಲೈನ್ಸ್ ಸಂಸ್ಥೆಗಳು ಜಂಟಿಯಾಗಿ ನೈಋತ್ಯ ಪದವೀಧರರ ಕ್ಷೇತ್ರಗಳಾದ ಶಿವಮೊಗ್ಗ, ಚಿಕ್ಕಮಗಳೂರು, ದಕ್ಷಿಣಕನ್ನಡ, ಕೊಡಗು, ಉಡುಪಿ ಮತ್ತು ದಾವಣಗೆರೆ ಜಿಲ್ಲೆಗಳಲ್ಲಿ ಮೇ 11ರಂದು “ಸರ್ಜಿ ಸ್ಕಾಲರ್ಶಿಪ್ ಟೆಸ್ಟ್” #Sarji Scholarship Test ಎಂಬ ಶೀರ್ಷಿಕೆಯ ಅಡಿಯಲ್ಲಿ ಸ್ಕಾಲರ್ಶಿಪ್ ಟೆಸ್ಟ್ # ನಡೆಸಲಾಗುವುದು ಎಂದು ವಿಧಾನಪರಿಷತ್ ಸದಸ್ಯ ಡಾ.ಧನಂಜಯ ಸರ್ಜಿ ಹೇಳಿದರು.
ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಕರ್ನಾಟಕ ಲೋಕಸೇವಾ ಆಯೋಗ ನಡೆಸುವ ಕೆಎಎಸ್ ಪರೀಕ್ಷೆ ಬರೆದು ರಾಜ್ಯ ಸೇವೆಗೆ ಸೇರಬೇಕು. ಅಥವಾ ಬ್ಯಾಂಕಿಂಗ್ ಪರೀಕ್ಷೆ ಬರೆದು ಉತ್ತಮ ಸಂಬಳದ ಜಾಬ್ ಪಡೆಯಬೇಕು. ಇನ್ನಷ್ಟು ಶ್ರಮ ಪಡೆದು ಆರ್ಆರ್ಬಿ, ಎಸ್ಎಸ್ಸಿ ಪರೀಕ್ಷೆ ಬರೆದು ಯಾವುದಾದರೂ ಕೇಂದ್ರ ಸರ್ಕಾರಿ ಉದ್ಯೋಗ ಪಡೆಯಬೇಕು. ಇಂತಹ ಕನಸು ಹೊತ್ತ ಮನಸ್ಸುಗಳ ಸಂಖ್ಯೆ ರಾಜ್ಯದಲ್ಲಿ ಕಡಿಮೆ ಏನಿಲ್ಲ. ಪ್ರತಿ ಸ್ಪರ್ಧಾತ್ಮಕ ಪರೀಕ್ಷೆ ತರಬೇತಿ ಕೇಂದ್ರಗಳಲ್ಲಿ ಸರ್ಕಾರಿ ಉದ್ಯೋಗ ಆಕಾಂಕ್ಷಿಗಳ ದಂಡು ರಾಜ್ಯದ ಪ್ರತಿ ಕೇಂದ್ರಗಳಲ್ಲೂ ತುಂಬಿಯೇ ಇರುತ್ತವೆ. ಆದರೆ ಕೆಲವರಿಗೆ, ಬಡತನ ಹಿನ್ನೆಲೆಯ ಉದ್ಯೋಗ ಆಕಾಂಕ್ಷಿಗಳಿಗೆ ಪರೀಕ್ಷೆ ತರಬೇತಿ ಕೇಂದ್ರಗಳು ಕೇಳುವ ಶುಲ್ಕ ಬರಿಸಲು ಸಾಧ್ಯವಾಗದೇ, ಇತ್ತ ಸ್ವಯಂ ಮಾರ್ಗದರ್ಶನವು ಸಾಲದೇ ಸಮಸ್ಯೆ ಎದುರಿಸುವ ಅಭ್ಯರ್ಥಿಗಳಿಗೆ ಇದೊಂದು ಉತ್ತಮ ಅವಕಾಶ ಎಂದರು.
ಕರ್ನಾಟಕದಲ್ಲಿ 4,430 ಪದವಿ ಕಾಲೇಜುಗಳು ಹಾಗೂ 26 ವಿಶ್ವ ವಿದ್ಯಾಲಯಗಳಿವೆ, 26 ವಿಶ್ವ ವಿದ್ಯಾಲಯದಿಂದ ಪ್ರತಿ ವರ್ಷ ಸರಿ ಸುಮಾರು 3 ಲಕ್ಷ ವಿದ್ಯಾರ್ಥಿಗಳು ಪದವಿ ಮುಗಿಸಿ ಹೊರಬರುತ್ತಾರೆ. ವರದಿಗಳ ಪ್ರಕಾರ ಪ್ರತಿ ವರ್ಷ ಸುಮಾರು 1,50,000 ದಿಂದ 2,00,000 ಅಭ್ಯರ್ಥಿಗಳು ಕೆ.ಪಿ.ಎಸ್.ಸಿ ಪರೀಕ್ಷೆಗೆ ಅರ್ಜಿ ಹಾಕುತ್ತಾರೆ ಇದರಲ್ಲಿ 10,000 ದಿಂದ 12,000 ಅಭ್ಯರ್ಥಿಗಳು ಪ್ರಿಲಿಮ್ಸ್ ಪರೀಕ್ಷೆ ಕ್ಲಿಯರ್ ಮಾಡಿದರೆ 1,500 ದಿಂದ 2,000 ಅಭ್ಯರ್ಥಿಗಳು ಮೈನ್ಸ್ ಕ್ಲಿಯರ್ ಮಾಡಿ 300 ರಿಂದ 400 ಅಭ್ಯರ್ಥಿಗಳು ಆಯ್ಕೆಯಾಗುತ್ತಾರೆ. ಇದರಲ್ಲಿ ಒಂದುವರೆ ಲಕ್ಷ ಅಭ್ಯರ್ಥಿಗಳು ಸರಿಯಾದ ಮಾರ್ಗದರ್ಶನ ಇಲ್ಲದೆ, ಗುಣಮಟ್ಟದ ತರಬೇತಿ ಇಲ್ಲದೆ ಪರೀಕ್ಷೆಗೆ ಸರಿಯಾದ ಪೂರ್ವಸಿದ್ಧತೆ ಇಲ್ಲದೆ ಹಲವಾರು ಅಭ್ಯರ್ಥಿಗಳು ವಿಫಲರಾಗುತ್ತಾರೆ ಎಂದರು.
ಯು.ಪಿ.ಎಸ್.ಸಿ ಮತ್ತು ಕೆ.ಪಿ.ಎಸ್.ಸಿ #UPSC/KPSC ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ತೇರ್ಗಡೆಯಾಗಬೇಕು ಅಂದರೆ ಸುಮಾರು 11 ರಿಂದ 18 ತಿಂಗಳ ಸಮಗ್ರ ಅಧ್ಯಯನ ಅಗತ್ಯವಾಗಿರುತ್ತದೆ. ಪರೀಕ್ಷೆಗೆ ಬೇಕಾದ ಸ್ಟಾರ್ಟರ್ಜಿ ಇರಬೇಕು, ತಜ್ಞರಿಂದ ನಿಖರ ಮಾರ್ಗದರ್ಶನ ಬೇಕಾಗುತ್ತದೆ ಇವುಗಳಿಗೆ ಅಭ್ಯರ್ಥಿಗಳು ತರಬೇತಿ ಪಡೆಯಲು ಹೋದರೆ 2 ರಿಂದ 3 ಲಕ್ಷ ಫೀಸ್ ಕಟ್ಟಬೇಕಾಗುತ್ತದೆ, ಅದರಲ್ಲಿ ಅವರ ಸ್ಟಡಿ ಮೆಟಿರಿಯಲ್ ನಿಯತಕಾಲಿಕೆಗಳಿಗೆ ಅಂತ 50 ಸಾವಿರದಿಂದ 1 ಲಕ್ಷ ಖರ್ಚಾಗುತ್ತದೆ. ಹಾಗಾಗಿ ನಮ್ಮ ಸರ್ಜಿ ಫೌಂಡೇಶನ್ ಈ ಸ್ಕಾಲರ್ಶಿಪ್ ಟೆಸ್ಟ್ ನಡೆಸಿ ಇದರಲ್ಲಿ ಆಯ್ಕೆಯಾಗುವ ಪ್ರತಿಭೆ ಇರುವ ಪ್ರತಿಭಾವಂತ ಅಭ್ಯರ್ಥಿಗಳನ್ನು ಆಯ್ಕೆ ಮಾಡಿ ಅವರಿಗೆ ಸೂಕ್ತವಾದ ಮಾರ್ಗದರ್ಶನ ಮಾಡುವಲ್ಲಿ ಈ ಸ್ಕಾಲರ್ಶಿಪ್ ಟೆಸ್ಟ್ ಉಪಯುಕ್ತವಾಗುತ್ತದೆ.
ಈ ಪರೀಕ್ಷೆ ಬರೆಯಲು ರಾಜ್ಯದ ಯಾವುದೇ ವಿಶ್ವವಿದ್ಯಾಲಯದಿಂದ ಪದವಿ ಪಡೆದವರಾಗಿರಬೇಕು. ಅಂತಿಮ ಪದವಿಯಲ್ಲಿ ವ್ಯಾಸಂಗ ಮಾಡುತ್ತಿರುವವರು. ( ಪ್ರಸ್ತುತ ಕೊನೆಯ ವರ್ಷ/ಸೆಮಿಸ್ಟರ್ ನಲ್ಲಿ ಓದುತ್ತಿರುವ ವಿದ್ಯಾರ್ಥಿಗಳು )ಶಿವಮೊಗ್ಗ, ಚಿಕ್ಕಮಗಳೂರು, ದಕ್ಷಿಣಕನ್ನಡ, ಕೊಡಗು, ಉಡುಪಿ ಮತ್ತು ದಾವಣಗೆರೆ ಜಿಲ್ಲೆಯವರಾಗಿರಬೇಕು ಎಂದರು.
ಸ್ಕಾಲರ್ಶಿಪ್ ಟೆಸ್ಟ್ ನಿಂದ ಹಲವು ಲಾಭಗಳಿದ್ದು, : IAS/IPS ಪರೀಕ್ಷಾ ಪೂರ್ವ ಸಿದ್ದತಾ ತಯಾರಿಕೆಗೆ 11 ತಿಂಗಳು ನಿರಂತರ ಆನ್ಲೈನ್ ಕೋರ್ಸ್. ಉಚಿತವಾಗಿ ನೀಡಲಾಗುವುದು. NCERT ಪಠ್ಯಧಾರಿತ ಪ್ರಮುಖ ವಿಷಯಗಳ ಆನ್ಲೈನ್ ಫೌಂಡೇಶನ್ ತರಗತಿಗಳು ನಡೆಸಲಾಗುವುದು. ಕನ್ನಡ ಮತ್ತು ಇಂಗ್ಲಿ? ಎರಡು ಭಾ?ಗಳಲ್ಲಿಯೂ ತರಗತಿಗಳು ನಡೆಯಲಿದೆ. ನುರಿತ ಮಾರ್ಗದರ್ಶಕರಿಂದ ಪರಿಕ್ಷೆಯ ಕುರಿತು ಮಾರ್ಗದರ್ಶನ ದೊರೆಯಲಿದೆ. ವಾರಕ್ಕೊಮ್ಮೆ ಟೆಸ್ಟ್ ಸರಣಿ ನಡೆಸಲಾಗುತ್ತದೆ. ಐ.ಎ.ಎಸ್, ಕೆ.ಎ.ಎಸ್ ಮತ್ತು ಐ.ಪಿ.ಎಸ್ ಅಧಿಕಾರಿಗಳಿಂದ ಮೋಟಿವೇ?ನ್ ಸೆಶನ್, ಕಲಿಯುವ ಕಾರ್ಯ ತಂತ್ರಗಳು ಪ್ರಮುಖ ವಿ?ಯಗಳ ಪ್ರಚಲಿತ ಘಟನೆ ಮತ್ತು ಮಾಸಿಕ ನಿಯತಕಾಲಿಕೆಗಳ ಉಪನ್ಯಾಸ ನೀಡಲಾಗುವುದು ಎಂದರು.
ಒಬ್ಬ ವಿದ್ಯಾರ್ಥಿಗೆ ಈ ತರಬೇತಿ ನೀಡಲು ಸುಮಾರು 1,25,000 ಖರ್ಚಾಗಲಿದ್ದು, ಸುಮಾರು 100 ವಿದ್ಯಾರ್ಥಿಗಳಿಗೆ ಅವಕಾಶ ಕಲ್ಪಿಸಲಾಗಿದೆ.ಇದರ ಸಂಪೂರ್ಣ ವೆಚ್ಚವನ್ನು ಸರ್ಜಿ ಪೌಂಡೇಶನ್ ಭರಿಸಲಿದ್ದೆ. ನೈರುತ್ಯ ಪದವೀಧರ ಕ್ಷೇತ್ರದ ವ್ಯಾಪ್ತಿಯಲ್ಲಿ ಇರುವ ಎಲ್ಲಾ ಅರ್ಹ ಫಲಾನುಭವಿಗಳು ಇದರ ಸದುಪಯೋಗ ಪಡೆದುಕೊಳ್ಳುವಂತೆ ಅವರು ತಿಳಿಸಿದರು.
ಪರೀಕ್ಷಾ ನೋಂದಣಿಗೆ 9 ಮೇ 2025 ಕೊನೆಯ ದಿನಾಂಕವಾಗಿದ್ದು, ಪರೀಕ್ಷಾ ಸಮಯ : ಬೆಳಿಗ್ಗೆ 10:30 ರಿಂದ ಮದ್ಯಾಹ್ನ 12 : 30ರ ವರೆಗೆ. ಹೆಚ್ಚಿನ ಮಾಹಿತಿಗಾಗಿ ಅಥವಾ ಪರೀಕ್ಷಾ ನೋಂದಣಿಗೆ 7204747789 ಈ ನಂಬರ್ ಗೆ ಸಂಪರ್ಕಿಸಬಹುದು ಎಂದರು.
ಪತ್ರಿಕಾಗೋಷ್ಠಿಯಲ್ಲಿ ನಿರ್ದೇಶಕಿ ನಮಿತಾ ಧನಂಜಯ ಸರ್ಜಿ, ಸ್ಪರ್ಧಾ ಲೈನ್ಸ್ ನ ರಿಜಿನಲ್ ಔಟ್ ರೀಚ್ ಹೆಡ್ ಗೌರಿ ಶಂಕರ್, ಸರ್ಜಿ ತಾಯಿ ಮತ್ತು ಮಕ್ಕಳ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕರಾದ ವಿಜಯ್ ಮಾಯೆರ್, ಆಡಳಿತ ಅಧಿಕಾರಿಗಳಾದ ಮುರುಳಿಧರ್ ರಾವ್ ಕುಲಕರ್ಣಿ, ಪ್ರಮುಖರಾದ ಅನಿಲ್ ಕುಮಾರ್ ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post