ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಆಕಾಶ್ ಬೈಜೂಸ್ #Akash Byjus ಏಪ್ರಿಲ್ 2024 ರಲ್ಲಿ ಆರಂಭವಾಗಲಿರುವ ವೈದ್ಯರು ಮತ್ತು ಎಂಜಿನಿಯರ್ಗಳಾಗಬೇಕೆಂದು ಹೊತ್ತಿರುವ ಹಲವಾರು ವಿದ್ಯಾರ್ಥಿಗಳ ಕನಸನ್ನು ನನಸು ಮಾಡುವ ಉದ್ದೇಶದಿಂದ ವಿವಿಧ ವಿದ್ಯಾರ್ಥಿ ವೇತನಗಳನ್ನು ಪ್ರಕಟಿಸಿದೆ ಎಂದು ಆಕಾಶ್ ಬೈಜೂಸ್ ನ ಚೀಫ್ ಬ್ಯುಸಿನೆಸ್ ಆಫೀಸರ್ ಅನೂಪ್ ಅಗರ್ವಾಲ್ ಹೇಳಿದರು.
ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ವಿದ್ಯಾರ್ಥಿ ವೇತನವೆಂದರೆ ಇನ್ ಸ್ಟಂಟ್ ಅಡ್ಮಿಶನ್ ಕಮ್ ಸ್ಕಾಲರ್ ಶಿಪ್ ಟೆಸ್ಟ್ ಆಗಿದೆ. ವೈದ್ಯಕೀಯ, ಎಂಜಿನಿಯರಿಂಗ್ ಮತ್ತು ಫೌಂಡೇಶನ್ ಕೋರ್ಸ್ಗಳ ಪ್ರವೇಶಕ್ಕೆ ಶೇ.90 ರವರೆಗೆ ವಿದ್ಯಾರ್ಥಿವೇತನ ದೊರೆಯಲಿದೆ. ಇದಲ್ಲದೇ, ಆಕಾಶ್ ಬೈಜೂಸ್ ಹುತಾತ್ಮರಾದ ಯೋಧರು, ಸೇನಾ ಸಿಬ್ಬಂದಿ ಮತ್ತು ಭಯೋತ್ಪಾದಕ ದಾಳಿಗೆ ತುತ್ತಾದವರ ಮಕ್ಕಳಿಗೆ ವಿಶೇಷ ರಿಯಾಯ್ತಿಯನ್ನು ನೀಡುತ್ತಿದೆ ಎಂದರು.
ದೇಶಾದ್ಯಂತ ವಿದ್ಯಾರ್ಥಿಗಳಿಗೆ ಸುಲಭವಾಗಿ ಪ್ರವೇಶಿಸಬಹುದಾದ ಮತ್ತು ಪರಿಣಾಮಕಾರಿ ಶೈಕ್ಷಣಿಕ ಅವಕಾಶಗಳನ್ನು ಒದಗಿಸುವ ನಿಟ್ಟಿನಲ್ಲಿ ನಾವು ಬದ್ಧರಾಗಿದ್ದೇವೆ. NEET ಮತ್ತು ನಮ್ಮ ವಿದ್ಯಾರ್ಥಿ ವೇತನ ಕಾರ್ಯಕ್ರಮಗಳಂತಹ ಉಪಕ್ರಮಗಳ ಮೂಲಕ ಅರ್ಹ ವಿದ್ಯಾರ್ಥಿಗಳಿಗೆ ಅವರ ಶೈಕ್ಷಣಿಕ ಮತ್ತು ವೃತ್ತಿ ಆಕಾಂಕ್ಷೆಗಳನ್ನು ಪೂರೈಸಿಕೊಳ್ಳಲು ಅವಕಾಶ ಕಲ್ಪಿಸುವ ಗುರಿಯನ್ನು ನಾವು ಹೊಂದಿದ್ದೇವೆ ಎಂದು ತಿಳಿಸಿದರು.
ಇನ್ ಸ್ಟಂಟ್ ಅಡ್ಮಿಶನ್ ಕಮ್ ಸ್ಕಾಲರ್ ಶಿಪ್ ಟೆಸ್ಟ್ 60 ನಿಮಿಷಗಳ ಪರೀಕ್ಷೆಯಾಗಿದ್ದು, ನಿಗದಿತ ದಿನಗಳಂದು ಬೆಳಗ್ಗೆ 10 ಗಂಟೆಯಿಂದ ರಾತ್ರಿ 8 ಗಂಟೆಯೊಳಗೆ ಪರೀಕ್ಷೆಯನ್ನು ಬರೆಯಲು ಅವಕಾಶವಿದೆ. 8 ರಿಂದ 12 ನೇ ತರಗತಿಯ ವಿದ್ಯಾರ್ಥಿಗಳನ್ನು ಗಮನದಲ್ಲಿಟ್ಟುಕೊಂಡು ವೈದ್ಯಕೀಯ ಅಥವಾ ಎಂಜಿನಿಯರಿಂಗ್ ನಲ್ಲಿ ತಮ್ಮ ವೃತ್ತಿಜೀವನದ ಸಾಮಥ್ರ್ಯವನ್ನು ಪ್ರದರ್ಶಿಸಲು NEET ಒಂದು ವೇದಿಕೆಯಾಗಿ ಕಾರ್ಯ ನಿರ್ವಹಿಸುತ್ತದೆ ಎಂದು ಹೇಳಿದರು.
2024 ರಿಂದ ಇದುವರೆಗೆ ಈ ವಿದ್ಯಾರ್ಥಿವೇತನದಿಂದ 75.000 ಕ್ಕೂ ಅಧಿಕ ವಿದ್ಯಾರ್ಥಿಗಳು ಪ್ರಯೋಜನ ಪಡೆದಿದ್ದಾರೆ. ಇತ್ತೀಚೆಗೆ ನಡೆದ ಜೆಇಇ ಮೇನ್ಸ್ 2024 ಪರೀಕ್ಷೆಯಲ್ಲಿ ಆಕಾಶ್ ಬೈಜೂಸ್ ನ 41.263 ವಿದ್ಯಾರ್ಥಿಗಳು ಅರ್ಹತೆ ಪಡೆಯುವ ಮೂಲಕ ಸಂಸ್ಥೆಯು ಯಶಸ್ಸಿನ ಮತ್ತೊಂದು ಮೆಟ್ಟಿಲೇರಿದೆ ಎಂದರು.
Also read: ಚೊಂಬು ಚಿತ್ರದ ಜಾಹಿರಾತು ಪ್ರದರ್ಶಿಸಿ ಬಿಜೆಪಿ ವಿರುದ್ಧ ಸುರ್ಜೇವಾಲಾ ಟೀಕೆ
ಆಕಾಶ್ ಬೈಜೂಸ್ ನ ಡಿಜಿಟಲ್ ಪ್ರೋಗ್ರಾಂನ ವಿದ್ಯಾರ್ಥಿಗಳು ಜೆಇಇ ಮೇನ್ಸ್ 2024 (ಸೆಶನ್ -01)ರಲ್ಲಿ ಉತ್ತಮ ಸಾಧನೆ ತೋರಿದ್ದಾರೆ. ಗಣಿತದಲ್ಲಿ 100 ಅಂಕಗಳೊಂದಿಗೆ ರೀತಂ ಬ್ಯಾನರ್ಜಿ ಒಟ್ಟಾರೆ ಶೇ.99.96 ಅಂಕ ಪಡೆಯುವುದರೊಂದಿಗೆ ಈ ವಿಭಾಗದಲ್ಲಿ ಟಾಪರ್ ಆಗಿದ್ದಾರೆ.
ಇನ್ನು NEET-UG ಪರೀಕ್ಷೆ 2023 ರಲ್ಲಿ ಆಕಾಶ್ ಬೈಜೂಸ್ ನ 1.06.870 ವಿದ್ಯಾರ್ಥಿಗಳು ಅರ್ಹತೆ ಪಡೆದಿರುವುದು ಒಂದು ಮೈಲಿಗಲ್ಲಾಗಿದೆ. ಇವರಲ್ಲಿ 17 ಮಂದಿ ವಿದ್ಯಾರ್ಥಿಗಳು ರಾಜ್ಯಗಳು/ಕೇಂದ್ರಾಡಳಿತ ಪ್ರದೇಶಗಳಿಗೆ ಟಾಪರ್ ಗಳಾಗಿ ಹೊರಹೊಮ್ಮಿದ್ದಾರೆ. ಆಲ್ ಇಂಡಿಯಾ ಯಾರ್ಂಕಿಂಗ್ ಅಂದರೆ UGನಲ್ಲಿ ಮೂರನೇ ಟಾಪರ್, ಕೌಸ್ತುಭ್ ಬೌರಿ, ಧೃವ್ ಅಡ್ವಾಣಿ 5 ನೇ ಟಾಪರ್, ಸೂರ್ಯ ಸಿದ್ಧಾರ್ಥ್ ನಾಗರಾಜನ್ 6 ನೇ ಟಾಪರ್, ಸ್ವಯಂ ಶಕ್ತಿ ತ್ರಿಪಾಠಿ 8 ನೇ ಟಾಪರ್ ಮತ್ತು ಪಾರ್ಥ್ ಖಂಡೇಲ್ವಾಲ್ 10 ನೇ ಟಾಪರ್ ಆಗಿ ಹೊರಹೊಮ್ಮಿದ್ದಾರೆ ಎಂದರು.
ಗೋಷ್ಠಿಯಲ್ಲಿ ಹರೀಶ್ ಟ,ಸ್, ಬ್ರಾಂಚ್ ಮೆನೇಜರ್, ವರುಣ ಸೋನಿ, ನಿತೀನ್ ಆರ್, ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news



















