No Result
View All Result
Malnad is a Cultural ‘Gharana’ of Great Minds: Dr. Jayamala at Sahyadri Utsava
English Articles

Malnad is a Cultural ‘Gharana’ of Great Minds: Dr. Jayamala at Sahyadri Utsava

by ಕಲ್ಪ ನ್ಯೂಸ್
March 13, 2026
0

Kalpa Media House  |  Shimoga | Invoking the poetic essence of the Malnad landscape, veteran actor, former minister, and Chairperson...

Read moreDetails
ABB deepens Karnataka footprint with new investments to serve high growth emerging sectors

ABB deepens Karnataka footprint with new investments to serve high growth emerging sectors

March 12, 2026
“Rasamum Rasayanamum- Artistry meets Chemistry”

“Rasamum Rasayanamum- Artistry meets Chemistry”

March 11, 2026
ಕಾನಹಳ್ಳಿಯಲ್ಲಿ ಹಾನಗಲ್ಲಿನ ಕದಂಬ ಹೆಮ್ಮಾಡಿದೇವನ ಅವಧಿಯ ವೀರಗಲ್ಲು ಪತ್ತೆ

T20 World Cup Stars Suryakumar Yadav & Tilak Varma Make Strategic Investment in TRUZON Solar

March 11, 2026
ಸಾಂಕ್ರಾಮಿಕವಲ್ಲದ ಕಾಯಿಲೆಗಳ ಬಗ್ಗೆ ಎಚ್ಚರ ಅವಶ್ಯ : ಡಾ. ಸುಶ್ರುತ ಗೌಡ

Post-COVID Surge: Lifestyle Diseases Now Striking People in Their 40s, Warns Neurologist  Dr. Sushrutha Gowda

March 9, 2026
  • Advertise With Us
  • Grievances
  • About Us
  • Contact Us
Monday, March 16, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಫೆ.28ರಿಂದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ: ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
February 24, 2026
in ಶಿವಮೊಗ್ಗ
0
ಫೆ.28ರಿಂದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ: ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಪ್ರಸಕ್ತ ಶೈಕ್ಷಣಿಕ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗಳು #Second PUC annual examination ಫೆ.28- ಮಾ.17ರ ವರೆಗೆ ಜಿಲ್ಲೆಯ 41ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದ್ದು, ಪರೀಕ್ಷೆಗಳು ಸುಗಮವಾಗಿ ನಡೆಸಲು ಜಿಲ್ಲಾಡಳಿತ ಅಗತ್ಯ ಕ್ರಮಗಳನ್ನು ಕೈಗೊಂಡಿದೆ ಎಂದು ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಅವರು ಹೇಳಿದರು.

ಅವರು ಇಂದು ತಮ್ಮ ಕಚೇರಿ ಸಭಾಂಗಣದಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಮಾಧ್ಯಮಗಳಿಗೆ ವಿವರ ನೀಡಿದರು.

ಜಿಲ್ಲೆಯ ವಿದ್ಯಾರ್ಥಿಗಳು ಭವಿಷ್ಯದಲ್ಲಿ ಸಮಾಜದಲ್ಲಿ ಉತ್ತಮ ಸ್ಥಾನಮಾನ ಹೊಂದುವ ಮೂಲಕ ಸಮಾಜದ ಮುಖ್ಯವಾಹಿನಿಯಲ್ಲಿ ಗುರುತಿಸಿಕೊಳ್ಳುವಂತಾಗಬೇಕು ಎಂದ ಅವರು, ಪ್ರತಿ ವಿದ್ಯಾರ್ಥಿಯ ಕಲಿಕೆಯಲ್ಲಿ ಹಿನ್ನೆಡೆಗೆ ಇರುವ ಸೂಕ್ಷ್ಮ ಕಾರಣಗಳನ್ನು ಗಮನಿಸಿ ಅಗತ್ಯ ಕ್ರಮವಹಿಸಲಾಗಿದೆ. ಅಲ್ಲದೇ ಮುಂದಿನ ಶೈಕ್ಷಣಿಕ ಸಾಲಿನಿಂದ ಅನ್ವಯಗೊಳ್ಳುವಂತೆ ಸಿ.ಇ.ಟಿ. ತರಬೇತಿ ತರಗತಿಗಳನ್ನು ನಡೆಸಲು ಉದ್ದೇಶಿಸಲಾಗಿದ್ದು, ಯಾವುದೇ ವಿದ್ಯಾರ್ಥಿ ಅನುತ್ತೀರ್ಣರಾಗದಂತೆ ನೋಡಿಕೊಳ್ಳುವ ಸದಾಶಯ ಹೊಂದಲಾಗಿದೆ.
-ಪ್ರಭುಲಿಂಗ ಕವಳಿಕಟ್ಟಿ, ಜಿಲ್ಲಾಧಿಕಾರಿ

ಶಿವಮೊಗ್ಗದಲ್ಲಿ 17, ಭದ್ರಾವತಿಯಲ್ಲಿ 06, ತೀರ್ಥಹಳ್ಳಿ ಮತ್ತು ಹೊಸನಗರದಲ್ಲಿ ತಲಾ 03, ಸಾಗರ ಮತ್ತು ಶಿಕಾರಿಪುರದಲ್ಲಿ ತಲಾ 05 ಮತ್ತು ಸೊರಬದಲ್ಲಿ 02 ಪರೀಕ್ಷಾ ಕೇಂದ್ರಗಳು ಸೇರಿ ಜಿಲ್ಲೆಯಲ್ಲಿ ಒಟ್ಟು 41ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆಗಳು ನಡೆಯಲಿವೆ. 19009 ವಿದ್ಯಾರ್ಥಿಗಳು ಸದರಿ ಪರೀಕ್ಷೆಗೆ ಹಾಜರಾಗಲಿದ್ದಾರೆ. 7188ಬಾಲಕರು ಹಾಗೂ 10567ವಿದ್ಯಾರ್ಥಿನಿಯರು ಸೇರಿದಂತೆ ಒಟ್ಟು 17,755 ರೆಗ್ಯೂಲರ್ ವಿದ್ಯಾರ್ಥಿಗಳು, 871 ಪುನರಾವರ್ತಿತ ಅಭ್ಯರ್ಥಿಗಳು, 380 ಖಾಸಗಿ ಅಭ್ಯರ್ಥಿಗಳು ಹಾಗೂ ಫಲಿತಾಂಶ ಸುಧಾರಣೆಗಾಗಿ 03 ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ಭಾಗವಹಿಸಲಿದ್ದಾರೆ ಎಂದರು.

ಪತ್ರಿಕೆಗಳನ್ನು ಸಕಾಲದಲ್ಲಿ ಪರೀಕ್ಷಾ ಕೇಂದ್ರಗಳಿಗೆ ತಲುಪಿಸಲು ತಲಾ ಮೂರು ಜನರ ಅಧಿಕಾರಿಗಳ 12 ತಂಡವನ್ನು ರಚಿಸಲಾಗಿದ್ದು, ಅಗತ್ಯ ಪೊಲೀಸ್ ಭದ್ರತೆ ಒದಗಿಸಲಾಗಿದೆ. ಪರೀಕ್ಷೆ ನಡೆಯುವ ದಿನಗಳಂದು ಪರೀಕ್ಷಾ ಕೇಂದ್ರಗಳ ಸುತ್ತ-ಮುತ್ತಲಿನ 200ಮೀ. ಪ್ರದೇಶದ ವ್ಯಾಪ್ತಿಯಲ್ಲಿ ಭಾರತೀಯ ನ್ಯಾಯಸಂಹಿತೆ 163ಪ್ರಕಾರ ನಿಷೇದಾಜ್ಞೆ ಜಾರಿಗೊಳಿಸಿ ಆದೇಶ ಹೊರಡಿಸಲಾಗಿದೆ. ಪರೀಕ್ಷಾ ಸಮಯದಲ್ಲಿ ವಿದ್ಯಾರ್ಥಿಗಳಿಗೆ ಹಾಗೂ ಪರೀಕ್ಷಾ ಕೇಂದ್ರಗಳಿಗೆ ವಿದ್ಯುತ್ವ್ಯತ್ಯಯವಾಗದಂತೆ ನೋಡಿಕೊಳ್ಳಲು ಮೆಸ್ಕಾಂ ಅಧೀಕ್ಷಕ ಅಭಿಯಂತರರಿಗೆ ಸೂಚಿಸಲಾಗಿದೆ. ಅಲ್ಲದೇ ವಿಶೇಷವಾಗಿ ಪರೀಕ್ಷಾರ್ಥಿಗಳು ಪರೀಕ್ಷಾ ಕೇಂದ್ರಗಳಿಗೆ ತೆರಳಲು ಅನುಕೂಲವಾಗುವಂತೆ ಉಚಿತ ಬಸ್ಸೌಲಭ್ಯವನ್ನು ಒದಗಿಸಲಾಗಿದ್ದು, ಬಸ್ ಸಂಚರಿಸುವ ಮಾರ್ಗದಲ್ಲಿನ ವಿದ್ಯಾರ್ಥಿಗಳು ತಮ್ಮ ಪರೀಕ್ಷಾ ಕೇಂದ್ರದ ಪ್ರವೇಶಪತ್ರವನ್ನು ತೋರಿಸಿ, ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣಿಸಬಹುದಾಗಿದೆ ಎಂದರು.
ಪರೀಕ್ಷಾರ್ಥಿಗಳು ಯಾವುದೇ ಒತ್ತಡಕ್ಕೆ ಒಳಗಾಗದೇ ಆತಂಕವಿಲ್ಲದೇ ಸಮಾಧಾನಚಿತ್ತರಾಗಿ ಪರೀಕ್ಷೆಯಲ್ಲಿ ಭಾಗವಹಿಸಿ, ಈವರೆಗಿನ ಅವಧಿಯಲ್ಲಿ ತಾವು ಓದಿದ ವಿಷಯವನ್ನು ಅರಿತು ಸಕಾಲಿಕವಾಗಿ ಉತ್ತರಿಸುವ ಮೂಲಕ ಉತ್ತಮ ಫಲಿತಾಂಶದೊಂದಿಗೆ ಉತ್ತೀರ್ಣರಾಗುವಂತೆ ಸೂಚಿಸಿದ ಅವರು, ಕಲಿಕೆಯಿಂದ ಹಿಂದುಳಿದ ಜಿಲ್ಲೆಯ ವಿದ್ಯಾರ್ಥಿಗಳಿಗಾಗಿ ಈಗಾಗಲೇ ವಿಶೇಷ ತರಗತಿಗಳ ಮೂಲಕ ಬೋಧನೆ ನಡೆಸಲಾಗಿದೆ ಎಂದವರು ನುಡಿದರು.
ಈ ಸಂದರ್ಭದಲ್ಲಿ ಉಪಸ್ಥಿತರಿದ್ದ ಜಿಲ್ಲಾ ಪಂಚಾಯಿತಿ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಎನ್.ಹೇಮಂತ್‍ಅವರು ಮಾತನಾಡಿ, ಪೋಷಕರ ಕೋರಿಕೆಯ ಮೇರೆಗೆ ಪ್ರತಿನಿತ್ಯ ಸಂಜೆ ವಿಶೇಷ ಕಲಿಕಾ ತರಗತಿಗಳನ್ನು ನಡೆಸಲಾಗಿದೆ. ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಯಾವುದೇ ಒತ್ತಡವಿಲ್ಲದೆ ಜಿಲ್ಲೆಗೆ ಉತ್ತಮ ಫಲಿತಾಂಶ ದೊರಕಿಸಿಕೊಡುವ ನಿಟ್ಟಿನಲ್ಲಿ ಪ್ರಾಮಾಣಿಕವಾಗಿ ಪ್ರಯತ್ನಿಸಿದ್ದಾರೆ. ಇದರಿಂದಾಗಿ ಜಿಲ್ಲೆಗೆ ಉತ್ತಮ ಫಲಿತಾಂಶ ಬರುವ ನಿರೀಕ್ಷೆ ಇದೆ ಎಂದರು.

ಪ್ರಶ್ನೆ ಪತ್ರಿಕೆಗಳು ಸೋರಿಕೆಯಾಗುವುದಿಲ್ಲ ಎಂದು ಸ್ಪಷ್ಟಪಡಿಸಿದ ಅವರು, ಪೆÇೀಷಕರು ತಮ್ಮ ಮಕ್ಕಳನ್ನು ಯಾವುದೇ ಆತಂಕವಿಲ್ಲದೆ ಪರೀಕ್ಷೆ ಬರೆಯುವಂತೆ ಪ್ರೇರೇಪಿಸಬೇಕು ಎಂದ ಅವರು, ಸಾಮಾಜಿಕ ಜಾಲತಾಣಗಳನ್ನು ಸೋರಿಕೆಯಾಗುವ ಪ್ರಶ್ನೆಪತ್ರಿಕೆಗಳು ನಕಲಿ ಹಾಗೂ ನಂಬಲರ್ಹವಾದುವುಗಳಲ್ಲ. ಇದರಿಂದಾಗಿ ವಿಚಲಿತರಾಗದಂತೆ ಅವರು ಮನವಿ ಮಾಡಿದರು.

ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ವಿ.ಅಭಿಷೇಕ್ ಮತ್ತು ಪದವಿಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಚಂದ್ರಪ್ಪ ಗುಂಡಪಲ್ಲಿ ಅವರು ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2024/04/VID-20240426-WA0008.mp4

Tags: Kannada NewsKannada News LiveKannada News Online ShivamoggaKannada WebsiteKannadaNewsWebsiteLatestNewsKannadaLocalNewsMalnadNewsNews in KannadaNews KannadaSecond PUC annual examinationShimogaShivamoggaNewsದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ವೇಳಾಪಟ್ಟಿಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share197Tweet123Send
Previous Post

ಕಾಂಪ್ಲೆಕ್ಸ್ ರಿ-ಸರ್ಜರಿ ಟು ರೋಬೋಟಿಕ್ ಸ್ಪೈನಲ್ ಸರ್ಜರಿ | ನಾರಾಯಣ ಹೆಲ್ತ್ ಸಿಟಿಯಿಂದ 10 ಸಾವಿರ ಸರ್ಜರಿ

Next Post

ಪುರಾಣ ಪ್ರಸಿದ್ಧ ಕೋಟೆ ಶ್ರೀ ಮಾರಿಕಾಂಬ ಜಾತ್ರಾ ಮಹೋತ್ಸವಕ್ಕೆ ಚಾಲನೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಪುರಾಣ ಪ್ರಸಿದ್ಧ ಕೋಟೆ ಶ್ರೀ ಮಾರಿಕಾಂಬ ಜಾತ್ರಾ ಮಹೋತ್ಸವಕ್ಕೆ ಚಾಲನೆ

ಪುರಾಣ ಪ್ರಸಿದ್ಧ ಕೋಟೆ ಶ್ರೀ ಮಾರಿಕಾಂಬ ಜಾತ್ರಾ ಮಹೋತ್ಸವಕ್ಕೆ ಚಾಲನೆ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ಯುಗಾದಿ | ಯಶವಂತಪುರ-ಹೊಸಪೇಟೆ ನಡುವೆ ವಿಶೇಷ ಎಕ್ಸ್’ಪ್ರೆಸ್ ರೈಲು

ಯುಗಾದಿ | ಯಶವಂತಪುರ-ಹೊಸಪೇಟೆ ನಡುವೆ ವಿಶೇಷ ಎಕ್ಸ್’ಪ್ರೆಸ್ ರೈಲು

March 16, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

ಬೆಂಗಳೂರು-ಕಣ್ಣೂರು ಎಕ್ಸ್’ಪ್ರೆಸ್ ಕೋಜಿಕೋಡ್’ವರೆಗೆ ವಿಸ್ತರಣೆ

March 16, 2026
ಕುಂದಾಪುರ ಕನ್ನಡದ ಅಪ್ಪಟ ಕಲಾ ರತ್ನ: ನಗುವಿನ ಸರದಾರ ‘ನ್ಯೆಗಿ ನಾಗಣ್ಣ’

ಕುಂದಾಪುರ ಕನ್ನಡದ ಅಪ್ಪಟ ಕಲಾ ರತ್ನ: ನಗುವಿನ ಸರದಾರ ‘ನ್ಯೆಗಿ ನಾಗಣ್ಣ’

March 16, 2026
ಪರಿಶಿಷ್ಟ ಜಾತಿಗಳಲ್ಲಿ ಒಳ ಮೀಸಲಾತಿ ಜಾರಿಗೊಳಿಸುವಂತೆ ಆಗ್ರಹಿಸಿ ಪ್ರತಿಭಟನೆ

ಪರಿಶಿಷ್ಟ ಜಾತಿಗಳಲ್ಲಿ ಒಳ ಮೀಸಲಾತಿ ಜಾರಿಗೊಳಿಸುವಂತೆ ಆಗ್ರಹಿಸಿ ಪ್ರತಿಭಟನೆ

March 16, 2026
ಘೋಷಿತ ಕೊಳಚೆ ಪ್ರದೇಶಗಳ ಹಕ್ಕುಪತ್ರ ವಿತರಣೆಗೆ ತಾಂತ್ರಿಕ ಅಡೆತಡೆ ನಿವಾರಿಸಿ: ಸಚಿವರಿಗೆ ಶಾಸಕ ಚನ್ನಬಸಪ್ಪ ಒತ್ತಾಯ

ಘೋಷಿತ ಕೊಳಚೆ ಪ್ರದೇಶಗಳ ಹಕ್ಕುಪತ್ರ ವಿತರಣೆಗೆ ತಾಂತ್ರಿಕ ಅಡೆತಡೆ ನಿವಾರಿಸಿ: ಸಚಿವರಿಗೆ ಶಾಸಕ ಚನ್ನಬಸಪ್ಪ ಒತ್ತಾಯ

March 16, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL