ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಆರ್. ಎಸ್. ಎಸ್. ಸ್ವಯಂ ಸೇವಕ, ವಿಧಾನಪರಿಷತ್ ಮಾಜಿ ಸದಸ್ಯ ಎಂ. ಬಿ. ಭಾನುಪ್ರಕಾಶ್ #M B Bhanuprakash ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವುದರ ಮೂಲಕ ಜಿಲ್ಲಾ ಬಿಜೆಪಿ ಕಾರ್ಯಾಲಯದಲ್ಲಿ ಇಂದು ಸಂಜೆ ಶೃದ್ದಾoಜಲಿ ಅರ್ಪಿಸಲಾಯಿತು.
ಎಂ. ಬಿ. ಭಾನುಪ್ರಕಾಶ್ ಅವರು, ಆರ್. ಎಸ್. ಎಸ್. ಸ್ವಯಂ ಸೇವಕರು, #RSS ಗ್ರಾಮ ಪಂಚಾಯತ್ ಸದಸ್ಯರು, ಜಿಲ್ಲಾ ಪಂಚಾಯತ್ ಸದಸ್ಯರು, ವಿಧಾನಪರಿಷತ್ ಮಾಜಿ ಸದಸ್ಯರು, ರಾಜ್ಯ ಬಿಜೆಪಿ ಉಪಾಧ್ಯಕ್ಷರು, ರಾಜ್ಯ ಬಿಜೆಪಿ ಪ್ರಕೋಷ್ಟಗಳ ಸಂಯೋಜಕರು, ಈ ಲೋಕಸಭಾ ಚುನಾವಣೆ ಬಿಜೆಪಿ ಕ್ಲಸ್ಟರ್, ಹಿಂದೆ ಶಿವಮೊಗ್ಗ ಲೋಕಸಭಾ ಬಿಜೆಪಿ ಅಭ್ಯರ್ಥಿ ಯಾಗಿ ಸ್ಪರ್ಧೆ ಕೂಡ ಮಾಡಿದ್ದರು. ಹಾಗೂ ಬಿಜೆಪಿಯಲ್ಲಿ ಸಂಘಟನೆಯ ಮಾರ್ಗಧರ್ಶಕರಾಗಿ ಪ್ರಮುಖ ಪಾತ್ರ ವಹಿಸಿದ್ದರು ಎಂದು ಸ್ಮರಿಸಲಾಯಿತು.
Also read: ಸ್ಟೈಲ್ ಡ್ಯಾನ್ಸ್ ಗ್ರೂಪ್ ವಿದ್ಯಾರ್ಥಿಗಳಿಂದ ಹೊಸ ದಾಖಲೆ: ಕಾಂತೇಶ್
ಈ ಸಂದರ್ಭದಲ್ಲಿ ಜಿಲ್ಲಾ ಬಿಜೆಪಿ ಅಧ್ಯಕ್ಷರಾದ ಟಿ ಡಿ ಮೇಘರಾಜ್, ಮಾಜಿ ಶಾಸಕರಾದ ಆರ್ ಕೆ ಸಿದ್ದರಾಮಣ್ಣ, ಜಿಲ್ಲಾ ಪ್ರದಾನ ಕಾರ್ಯದರ್ಶಿ ಶಿವರಾಜ್, ಪಕ್ಷದ ಪ್ರಮುಖರು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post