No Result
View All Result
ಡಾರ್ಲಿಂಗ್ ಕೃಷ್ಣ, ಮಿಲನಾ ನಾಗರಾಜ್ ಅಭಿನಯದ ‘ಲವ್ ಮಾಕ್‌ಟೇಲ್ 3’ ಜೂ.21ರಂದು ಜೀ ಕನ್ನಡದಲ್ಲಿ
English Articles

Darling Krishna, Milana Nagaraj ’s Love Mocktail 3 Premieres This 21st on Zee Kannada

by ಕಲ್ಪ ನ್ಯೂಸ್
June 19, 2026
0

Kalpa Media House  |  Bengaluru  | Staying committed to showcasing stories that connect with viewers of all generations, Zee Kannada...

Read moreDetails
ಬೇಸಿಗೆ ದಟ್ಟಣೆ ನಿರ್ವಹಣೆ: ಹುಬ್ಬಳ್ಳಿ–ಗಾಜಿಪುರ ವಿಶೇಷ ರೈಲುಗಳ ಸಂಚಾರ ಅವಧಿ ವಿಸ್ತರಣೆ

Periodicity of Bhubaneswar–Yesvantpur Special Train Extended

June 19, 2026
Blood Donation Camp Successfully Organised at Mysuru Division

Blood Donation Camp Successfully Organised at Mysuru Division

June 16, 2026
yoga | Participate online

India Launches Worldwide Campaign for International Day of Yoga 2026

June 13, 2026
Elderly Woman Found Dead

Elderly Woman Found Dead in Decomposed State in Shivamogga

June 13, 2026
  • Advertise With Us
  • Grievances
  • About Us
  • Contact Us
Saturday, June 20, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಸೆ.26 ಕೃಷಿ, ತೋಟಗಾರಿಕೆ ವಿವಿ ಸಂಸ್ಥಾಪನಾ ದಿನಾಚರಣೆ: 28ರಂದು ಘಟಿಕೋತ್ಸವ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
September 24, 2022
in ಶಿವಮೊಗ್ಗ
0
ಸೆ.26 ಕೃಷಿ, ತೋಟಗಾರಿಕೆ ವಿವಿ ಸಂಸ್ಥಾಪನಾ ದಿನಾಚರಣೆ: 28ರಂದು ಘಟಿಕೋತ್ಸವ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ   |

ಸಾಗರ ತಾಲ್ಲೂಕಿನ ಇರುವಕ್ಕಿಯಲ್ಲಿರುವ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯದ 10 ನೇ ಸಂಸ್ಥಾಪನಾ ದಿನಾಚರಣೆಯನ್ನು ಸೆ. 26 ರಂದು ಹಾಗೂ 7ನೇ ಘಟಿಕೋತ್ಸವವನ್ನು ಸೆ. 28ರಂದು ಇರುವಕ್ಕಿಯ ಮುಖ್ಯ ಆವರಣದಲ್ಲಿ ಆಯೋಜಿಸಲಾಗಿದೆ ಎಂದು ವಿವಿ ಕುಲಪತಿಗಳಾದ ಡಾ.ಆರ್.ಸಿ. ಜಗದೀಶ್ ತಿಳಿಸಿದರು.

ಇಂದು ನವುಲೆ ಕೃಷಿ ಮತ್ತು ತೋಟಗಾರಿಕೆ ಮಹಾವಿದ್ಯಾಲಯದಲ್ಲಿ ಕರೆಯಲಾಗಿದ್ದ ಪತ್ರಿಕಾಗೋಷ್ಟಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಅವರು, ಹತ್ತನೆಯ ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ಮುರುಘಾಮಠದ ಡಾ.ಮಲ್ಲಿಕಾರ್ಜುನ ಮುರುಘರಾಜೇಂದ್ರಸ್ವಾಮಿಗಳು ವಹಿಸುವರು. ಸಂಸದರಾದ ಬಿ.ವೈ.ರಾಘವೇಂದ್ರ ಕಾರ್ಯಕ್ರಮದ ಉದ್ಘಾಟನೆ ನೆರವೇರಿಸುವರು.
ಮುಖ್ಯ ಅತಿಥಿಗಳಾಗಿ ಶಾಸಕರಾದ ಹೆಚ್.ಹಾಲಪ್ಪ ಇವರು ಪಾಲ್ಗೊಂಡು ಪ್ರಶಸ್ತಿ ವಿತರಣೆ ಮಾಡುವರು. ಕೆಳದಿ ಶಿವಪ್ಪನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಕುಲಪತಿಗಳಾದ ಡಾ.ಆರ್.ಸಿ.ಜಗದೀಶ್ ಅಧ್ಯಕ್ಷತೆ ವಹಿಸುವರು. ವಿಶ್ವವಿದ್ಯಾಲಯದ ವ್ಯವಸ್ಥಾಪನಾ ಮಂಡಳಿ ಸದಸ್ಯರುಗಳು ಮತ್ತು ಅಧಿಕಾರಿ ವರ್ಗದವರು ಭಾಗವಹಿಸುವರು.

ಅಂದು ನಮ್ಮ ವಿಶ್ವವಿದ್ಯಾಲಯದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ನೌಕರರನ್ನು ಗುರುತಿಸಿ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ, ಅತ್ಯುತ್ತಮ ಸಂಶೋಧಕ ಪ್ರಶಸ್ತಿ, ಅತ್ಯುತ್ತಮ ವಿಸ್ತರಣಾ ವಿಜ್ಞಾನಿ ಪ್ರಶಸ್ತಿ, ಅತ್ಯುತ್ತಮ ಕ್ಷೇತ್ರ ಅಧೀಕ್ಷಕ ಪ್ರಶಸ್ತಿ, ಅತ್ಯುತ್ತಮ ಸೇವಾ ಸಿಬ್ಬಂದಿ ಪ್ರಶಸ್ತಿ (ಎ ಬಿ ಸಿ ಮತ್ತು ಡಿ), ವಿಶ್ವವಿದ್ಯಾಲಯದಲ್ಲಿ ಸಂಶೋಧನೆ ಕೈಗೊಳ್ಳಲು ಬಾಹ್ಯ ಸಂಸ್ಥೆಗಳ ಅನುದಾನ ಪಡೆದವರಿಗೆ ಪ್ರಶಂಸನಾ ಪತ್ರ, ಅತ್ಯುತ್ತಮ ಸಂಶೋಧನಾ ಪ್ರಬಂಧ ರಚನೆ ಮಾಡಿದ ವಿಜ್ಞಾನಿಗಳಿಗೆ ಪ್ರಶಸ್ತಿ/ಪ್ರಶಂಸನಾ ಪತ್ರ ನೀಡಿ ಗೌರವಿಸಲಾಗುವುದು ಎಂದರು.
ಘಟಿಕೋತ್ಸವ:
ಶಿವಮೊಗ್ಗ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಏಳನೆಯ ಘಟಿಕೋತ್ಸವವನ್ನು ಸೆ. 28 ರಂದು ಬೆಳಿಗ್ಗೆ 11ಗಂಟೆಗೆ ಇರುವಕ್ಕಿ ಮುಖ್ಯ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ. ರಾಜ್ಯಪಾಲರು ಹಾಗೂ ವಿಶ್ವವಿದ್ಯಾಲಯದ ಕುಲಾಧಿಪತಿಗಳಾದ ಥಾವರ್‌ಚಂದ್ ಗೆಹ್ಲೋಟ್ ಘಟಿಕೋತ್ಸವದ ಅಧ್ಯಕ್ಷತೆ ವಹಿಸಿ, ಪದವಿ ಪ್ರದಾನ ಮಾಡಿ ಮಾತನಾಡುವರು ಎಂದರು.

ಕೃಷಿ ಸಚಿವ ಹಾಗೂ ವಿಶ್ವವಿದ್ಯಾಲಯದ ಸಹ ಕುಲಾಧಿಪತಿ ಬಿ.ಸಿ. ಪಾಟೀಲ್ ಘಟಿಕೋತ್ಸವ ಸಮಾರಂಭದಲ್ಲಿ ಉಪಸ್ಥಿತರಿರುತ್ತಾರೆ. ಟ್ರಸ್ಟ್ ಫಾರ್ ಅಡ್ವಾನ್ಸ್ಮೆಂಟ್ ಆಫ್ ಅಗ್ರಿಕಲ್ಚರಲ್ ಸೈನ್ಸಸ್ ಅಧ್ಯಕ್ಷರು ಮತ್ತು ಹರಿಯಾಣದ ರೈತರ ಆಯೋಗದ ಅಧ್ಯಕ್ಷ ಡಾ. ಆರ್. ಎಸ್. ಪರೋಡ ಮುಖ್ಯ ಅತಿಥಿಗಳಾಗಿ ಭಾಗವಹಿಸಿ, ಏಳನೆಯ ಘಟಿಕೋತ್ಸವ ಭಾಷಣವನ್ನು ಮಾಡುವರು ಎಂದು ಮಾಹಿತಿ ನೀಡಿದರು.
ಸಮಾರಂಭದಲ್ಲಿ 355 ವಿದ್ಯಾರ್ಥಿಗಳಿಗೆ ಸ್ನಾತಕ ಪದವಿ, 79 ಎಂ.ಎಸ್ಸಿ ಪದವಿ, 10 ಪಿ ಎಚ್ ಡಿ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಲಾಗುವುದು. ಈ ಸಂದರ್ಭದಲ್ಲಿ 7 ಬಿ.ಎಸ್ಸಿ ವಿದ್ಯಾರ್ಥಿಗಳಿಗೆ 14 ಚಿನ್ನದ ಪದಕಗಳು, 13ಎಂ.ಎಸ್ಸಿ ವಿದ್ಯಾರ್ಥಿಗಳಿಗೆ 14 ಚಿನ್ನದ ಪದಕಗಳು ಮತ್ತು 4 ಪಿಹೆಚ್‌ಡಿ ವಿದ್ಯಾರ್ಥಿಗಳಿಗೆ 5 ಚಿನ್ನದ ಪದಕಗಳು ಸೇರಿ ಒಟ್ಟಾರೆ 33 ಚಿನ್ನದ ಪದಕಗಳನ್ನು 24 ವಿದ್ಯಾರ್ಥಿಗಳಿಗೆ ಪ್ರದಾನ ಮಾಡಲಾಗುವುದು.

Also read: ಶಿವಮೊಗ್ಗ ವಿಮಾನ ನಿಲ್ದಾಣ ಲೋಕಾರ್ಪಣೆ ಸನ್ನಿಹಿತ: ಸಂಸದ ರಾಘವೇಂದ್ರ ಹೇಳಿದ್ದೇನು?

2020-21ನೇ ಶೈಕ್ಷಣಿಕ ವರ್ಷದಲ್ಲಿ ನಡೆದ ಐಸಿಎಆರ್-ಜೆಆರ್‌ಎಫ್ ಪರೀಕ್ಷೆಯಲ್ಲಿ ನಮ್ಮ ವಿವಿ ಯ ಒಟ್ಟು 14 ವಿದ್ಯಾರ್ಥಿಗಳು ರ‍್ಯಾಂಕ್ ಪಡೆದಿದ್ದಾರೆ. ಹಾಗೂ ಅಖಿಲ ಭಾರತ ಐಸಿಎಆರ್ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ 2 ವಿದ್ಯಾರ್ಥಿಗಳು ಎಸ್‌ಆರ್‌ಎಫ್ ಗಳಾಗಿ ಆಯ್ಕೆಯಾಗಿದ್ದಾರೆ. 15 ವಿದ್ಯಾರ್ಥಿಗಳು ಎನ್‌ಟಿಎಸ್(ಸ್ನಾತಕೋತ್ತರ) ಪ್ರವೇಶ ಪಡೆದುಕೊಂಡಿದ್ದಾರೆ.
ಐಸಿಎಆರ್ ವತಿಯಿಂದ ಮಂಜೂರಾಗಿ ಅನುಷ್ಟಾನಗೊಂಡಿರುವ 3 ಅನುಭವ ಕಲಿಕೆ ಯೋಜನೆಗಳಾದ ಬೀಜೋತ್ಪಾದನೆ ತಂತ್ರಜ್ಞಾನ, ಜೈವಿಕ ಶಿಲೀಂದ್ರನಾಶಕಗಳು, ಪುಷ್ಪಕೃಷಿಯಲ್ಲಿ ವಿದ್ಯಾರ್ಥಿಗಳನ್ನು ತೊಡಗಿಸಿಕೊಳ್ಳಲಾಗಿದೆ. ವಿವಿಧ ಸ್ಪರ್ಧೆಗಳು, ಕ್ರೀಡಾಕೂಟದಲ್ಲಿ ನಮ್ಮ ವಿವಿ ವಿದ್ಯಾರ್ಥಿಗಳು ಉತ್ತಮ ಸಾಧನೆಗೈದಿದ್ದಾರೆ.

ಪ್ರಸಕ್ತ ಸಾಲಿನಲ್ಲಿ ಸರ್ಕಾರ ಮತ್ತು ಸರ್ಕಾರೇತರ ಸಂಸ್ಥೆಗಳಿಂದ ಸುಮಾರು 525.63 ಲಕ್ಷ ಅನುದಾನ ದೊರೆತಿದ್ದು 32 ಯೋಜನೆಗಳು ಅನುಷ್ಟಾನಗೊಳ್ಳಲಿವೆ. ಒಂದು ಜಿಲ್ಲೆ ಒಂದು ಉತ್ಪನ್ನ ಯೋಜನೆಯಡಿಯಲ್ಲಿ ಶಿವಮೊಗ್ಗ ಜಿಲ್ಲೆಯ ಇರುವಕ್ಕಿಯಲ್ಲಿ ಅನಾನಸ್ ಹಾಗೂ ಇತರ ಹಣ್ಣುಗಳು ಮತ್ತು ಶುಂಠಿಯನ್ನು ಸಂಸ್ಕರಣೆ ಮಾಡಿ ಅಭಿವೃದ್ದಿಪಡಿಸಲಾಗುತ್ತಿದೆ. ವಿಶ್ವವಿದ್ಯಾಲಯದ ಬೀಜ ಘಟಕದಿಂದ ಎಲ್ಲಾ ಸಂಶೋಧನಾ ಕೇಂದ್ರಗಳು ಮತ್ತು ಪ್ರಗತಿಪರ ರೈತರ ಕ್ಷೇತ್ರಗಳಲ್ಲಿ ಬೀಜೋತ್ಪಾದನೆ ಮತ್ತು ಸಸ್ಯೋತ್ಪಾದನೆ ಕಾರ್ಯಕ್ರಮಗಳ ಚಟುವಟಿಕೆಗಳನ್ನು ನಡೆಸಲಾಗುತ್ತಿದೆ.

ಶಿಲೀಂದ್ರ ರೋಗ(ಎಲೆ ಚುಕ್ಕಿ ಇತರೆ) ನಿಯಂತ್ರಣ, ಆದಾಯಕ್ಕೆ ಪೂರಕವಾದ ಅಡಿಕೆ ಪರ್ಯಾಯ ಬೆಳೆ ಪದ್ದತಿ ಸೇರಿದಂತೆ ಅನೇಕ ಪ್ರಯೋಗ ಮತ್ತು ಸಂಶೋಧನೆಗಳ ಮುಖಾಂತರ ಕೃಷಿಕರ ಬದುಕನ್ನು ಹಸನುಗೊಳಿಸುವಂತಹ ಹಾಗೂ ಅದಕ್ಕೆ ತಕ್ಕಂತೆ ಮಾನವ ಸಂಪನ್ಮೂಲ ಮತ್ತು ತಂತ್ರಜ್ಞಾನ ಅಭಿವೃದ್ದಿಪಡಿಸಿ ಕೃಷಿಕರ ಸರ್ವತೋಮುಖ ಅಭಿವೃದ್ದಿಗಾಗಿ ವಿಶ್ವವಿದ್ಯಾಲಯ ಶ್ರಮಿಸುತ್ತಿದೆ ಎಂದರು.
ಪತ್ರಿಕಾಗೋಷ್ಟಿಯಲ್ಲಿ ವಿವಿ ಕುಲಸಚಿವರಾದ ಡಾ.ಲೋಕೇಶ್ ಹಾಜರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Kannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaLocal NewsMalnad NewsNewsinKannadaNewsKannadaShimogaShivamoggaShivamogga Newsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share210Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಶಿವಮೊಗ್ಗ ವಿಮಾನ ನಿಲ್ದಾಣ ಲೋಕಾರ್ಪಣೆ ಸನ್ನಿಹಿತ: ಸಂಸದ ರಾಘವೇಂದ್ರ ಹೇಳಿದ್ದೇನು?

Next Post

ರಾಜ್ಯದ ಜನರು ಜೆಸಿಬಿ ಪಕ್ಷಗಳನ್ನು ತಿರಸ್ಕಾರ ಮಾಡಿ ಎಎಪಿಯನ್ನು ಬೆಂಬಲಿಸಿ: ಮುಖ್ಯಮಂತ್ರಿ ಚಂದ್ರು ಮನವಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ರಾಜ್ಯದ ಜನರು ಜೆಸಿಬಿ ಪಕ್ಷಗಳನ್ನು ತಿರಸ್ಕಾರ ಮಾಡಿ ಎಎಪಿಯನ್ನು ಬೆಂಬಲಿಸಿ: ಮುಖ್ಯಮಂತ್ರಿ ಚಂದ್ರು ಮನವಿ

ರಾಜ್ಯದ ಜನರು ಜೆಸಿಬಿ ಪಕ್ಷಗಳನ್ನು ತಿರಸ್ಕಾರ ಮಾಡಿ ಎಎಪಿಯನ್ನು ಬೆಂಬಲಿಸಿ: ಮುಖ್ಯಮಂತ್ರಿ ಚಂದ್ರು ಮನವಿ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಮೇ 20ರಿಂದ KSRTC ನೌಕರರ ಮುಷ್ಕರ | ಶಿವಮೊಗ್ಗದಲ್ಲೂ ತಟ್ಟಲಿದೆ ಬಿಸಿ | ಬೇಡಿಕೆಗಳೇನು?

ಇನ್ಮುಂದೆ ಈ ಕಾರ್ಡ್ ಇದ್ದರೆ ಮಾತ್ರ ಬಸ್’ನಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ

June 20, 2026
Crowd in Shivamogga Taluk Office

ಶಿವಮೊಗ್ಗ ತಾಲ್ಲೂಕು ಕಚೇರಿ ಪಡಸಾಲೆಯಲ್ಲಿ ಜನವೋ… ಜನ..! ಪ್ರಮಾಣಪತ್ರಕ್ಕಾಗಿ ಜನರ ಪರದಾಟ

June 20, 2026
Indian Railway Special Trains

ಮೈಸೂರು – ಮದಾರ್ ಜಂಕ್ಷನ್ ರೈಲು ಪ್ರಯಾಣಿಕರಿಗೆ ಬಿಗ್ ಗುಡ್ ನ್ಯೂಸ್

June 20, 2026
ಅಭಯಾರಣ್ಯದಲ್ಲಿ ರೀಲ್ಸ್ ಚಿತ್ರೀಕರಣ: ಆರು ಯುವಕರ ವಿರುದ್ಧ ವನ್ಯಜೀವಿ ಇಲಾಖೆ ಕ್ರಮ

ಅಭಯಾರಣ್ಯದಲ್ಲಿ ರೀಲ್ಸ್ ಚಿತ್ರೀಕರಣ: ಆರು ಯುವಕರ ವಿರುದ್ಧ ವನ್ಯಜೀವಿ ಇಲಾಖೆ ಕ್ರಮ

June 20, 2026
Youth Brutally Murdered Inside House in Shivamogga Village

ಶಿವಮೊಗ್ಗ | ಸುತ್ತುಕೋಟೆ ಗ್ರಾಮದ ಮನೆಯಲ್ಲೇ ಯುವಕನ ಭೀಕರ ಹತ್ಯೆ

June 20, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL