ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಸರ್ಕಾರ ಏಳನೇ ವೇತನ ಆಯೋಗ ಜಾರಿಯಲ್ಲಿ ವಿಳಂಬ ನೀತಿ ಅನುಸರಿಸುತ್ತಿರುವುದಕ್ಕೆ ರಾಜ್ಯ ಸರ್ಕಾರಿ ನೌಕರರ ಸಂಘ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ.
ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್. ಷಡಕ್ಷರಿ #C S Shadakshari ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ ಆಯೋಗದ ವರದಿ ಅನುಷ್ಟಾನದ ಕುರಿತು ಬರುವ ಸಚಿವ ಸಂಪುಟದ ಸಭೆಯಲ್ಲಿ ತೀರ್ಮಾನ ಕೈಗೊಳ್ಳುವ ವಿಶ್ವಾಸವಿದೆ ಎಂದರು.

ಪ್ರಶ್ನೆಯೊಂದಕ್ಕೆ ಉತ್ತರಿಸಿದ ಅವರು ಇದೇ ಜೂನ್ ಅಂತ್ಯದ ಒಳಗಾಗಿ ಸರ್ಕಾರ ಆಯೋಗದ ವರದಿಯನ್ನು ಜಾರಿಗೊಳಿಸುವ ವಿಶ್ವಾಸವಿದೆ. ಒಂದು ವೇಳೆ ಜಾರಿಯಾಗದಿದ್ದರೆ ಮುಂದೇನು ಮಾಡಬೇಕು ಎಂಬುದರ ಬಗ್ಗೆ ಸಂಘದ ಕಾರ್ಯಕಾರಿ ಮಂಡಳಿಯಲ್ಲಿ ಕಾರ್ಯತಂತ್ರ ನಡೆಯುತ್ತಿದೆ ಎಂದು ಹೇಳಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news









Discussion about this post