ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಶಿವಮೊಗ್ಗದಲ್ಲಿ #Shivamogga 15 ವರ್ಷಗಳನ್ನು ಪೂರೈಸಿರುವ ಶಂಕರ ಕಣ್ಣಿನ ಆಸ್ಪತ್ರೆಯು #ShankaraEyeHospital ಸಾರ್ವಜನಿಕರ ಸೇವೆಗೆ ಸಿದ್ಧವಾಗಿದ್ದು, ಸಾರ್ವಜನಿಕ ವಲಯದ ಸುಮಾರು 15 ಇಲಾಖೆಯ ಸಿಬ್ಬಂದಿಗಳಿಗೆ ಉಚಿತ ನೇತ್ರಾ ತಪಾಸಣೆ ಮಾಡಲಾಗುವುದು ಎಂದು ಆಸ್ಪತ್ರೆಯ ಪೋಷಕ ಡಾ. ನರೇಂದ್ರ ಭಟ್ ಹೇಳಿದರು.
ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಶಂಕರ ಕಣ್ಣಿನ ಆಸ್ಪತ್ರೆ ಶಿವಮೊಗ್ಗದಲ್ಲಿ 2008ರಲ್ಲಿ ಸ್ಥಾಪನೆಗೊಂಡಿತು. ಆ ಮೂಲಕ ಸೇವೆಯನ್ನೇ ಪ್ರಧಾನವಾಗಿಟ್ಟುಕೊಂಡು ಸುಮಾರು 13 ಜಿಲ್ಲೆಗಳ ನಾಗರೀಕರಿಗೆ ಕೈಗೆಟುಕುವ ವೆಚ್ಚದಲ್ಲಿ ಮತ್ತು ಹಲವರಿಗೆ ಉಚಿತವಾಗಿ ಶಸ್ತ್ರಚಿಕಿತ್ಸೆಯನ್ನು #Surgery ಮಾಡುತ್ತಾ ಬಂದಿದ್ದೇವೆ. ಈ ಸಂದರ್ಭದಲ್ಲಿ ನಾವು ಧನ್ಯವಾದಗಳು ಮಲೆನಾಡು ಎಂದು ಹೇಳುತ್ತೇವೆ ಎಂದರು.

ನಾಳೆ ಜಿಲ್ಲಾಧಿಕಾರಿಗಳು ಈ ಕಾರ್ಯಕ್ಕೆ ಚಾಲನೆ ನೀಡುವರು. ಇವರೊಂದಿಗೆ ಜಿಲ್ಲಾ ರಕ್ಷಣಾಧಿಕಾರಿ, ಸಿಇಓ, ಪಾಲಿಕೆಯ ಆಯುಕ್ತರು, ಜಿಲ್ಲಾ ಆರೋಗ್ಯ ಅಧಿಕಾರಿಗಳು ಮತ್ತು ಇತರ ಅಧಿಕಾರಿಗಳು ಸಹಕಾರ ನೀಡಲಿದ್ದಾರೆ. ಜಿಲ್ಲಾಧಿಕಾರಿಗಳ ಕಚೇರಿ ಸಿಬ್ಬಂದಿಗಳ ತಪಾಸಣೆ ಮಾಡುವ ಮೂಲಕ ಈ ವರ್ಷದ ನಮ್ಮ ಸೇವೆಯನ್ನು ವಿಸ್ತಾರ ಮಾಡುತ್ತಿದ್ದೇವೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಆಸ್ಪತ್ರೆಯ ಮುಖ್ಯ ಆಡಳಿತಾಧಿಕಾರಿ ಗಾಯಿತ್ರಿ ಶಾಂತರಾಮ್, ಡಾ.ಕವಿತಾ, ಡಾ.ಕಮಲಾ, ಡಾ.ರವಿಶಂಕರರ್, ಡಾ.ಮಲ್ಲಿಕಾರ್ಜುನ, ಅನಿತಾ, ಪ್ರದೀಪ್, ರಂಜಿತಾ ಮುಂತಾದವರು ಇದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news








Discussion about this post