No Result
View All Result
ಡಯಾಲಿಸಿಸ್ ಅಂತಿಮವಲ್ಲ | ಮೃತ ದಾನಿದಾರ ಕಿಡ್ನಿಯಿಂದ ರೋಗಿಗೆ ಹೊಸ ಬದುಕು
English Articles

A Second Chance at Life Through Deceased Organ Donation

by ಕಲ್ಪ ನ್ಯೂಸ್
February 3, 2026
0

Kalpa Media House  |  Bengaluru, Whitefield  | For 48-year-old Unnikrishnan, life for several years revolved around dialysis sessions, medications, and...

Read moreDetails
Bhaskara Parva: Generations of Journalism Students Reunite to Honour a Teacher Who Shaped Their Lives

Bhaskara Parva: Generations of Journalism Students Reunite to Honour a Teacher Who Shaped Their Lives

February 2, 2026
NITK Surathkal Inaugurates First Annual Sports Festival- ‘Endeavor 2026’

NITK Surathkal Inaugurates First Annual Sports Festival- ‘Endeavor 2026’

February 1, 2026
Samsung Sets Two Guinness World Records with its India

Samsung Sets Two Guinness World Records with its India

January 31, 2026
ಮೈಸೂರು | ಮಹಾರಾಣಿ ಮಹಿಳಾ ವಿದ್ಯಾರ್ಥಿನಿಯರಿಗೆ ಆಹಾರ ಹಾಗು ಆತಿಥ್ಯೋದ್ಯಮ ಕೌಶಲ್ಯ ತರಬೇತಿ

Maharani’s Science College Collaboration Empowers Students with Industry-Ready Skills

January 31, 2026
  • Advertise With Us
  • Grievances
  • About Us
  • Contact Us
Thursday, February 5, 2026
Follow Us
kalpa.news
">
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಶರಾವತಿ ಪಂಪ್ಡ್ ಸ್ಟೋರೇಜ್ ಬೇಡವೇ ಬೇಡ | ಸೋಂದಾ ಸ್ವರ್ಣವಲ್ಲೀ ಶ್ರೀ ತಾಕೀತು

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
October 16, 2025
in ಶಿವಮೊಗ್ಗ
0
ಶರಾವತಿ ಪಂಪ್ಡ್ ಸ್ಟೋರೇಜ್ ಬೇಡವೇ ಬೇಡ | ಸೋಂದಾ ಸ್ವರ್ಣವಲ್ಲೀ ಶ್ರೀ ತಾಕೀತು
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಈಗಾಗಲೇ ಹತ್ತು-ಹಲವಾರು ಮಾರಕ ಯೋಜನೆಗಳಿಂದ ತತ್ತರಿಸಿ ಹೋಗಿರುವ ಪಶ್ಚಿಮಘಟ್ಟದಲ್ಲಿ ಪ್ರಸ್ತಾವಿತ ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆಯಂತಹ ಪರಿಸರ ಮಾರಕ ಯೋಜನೆಗಳು ಬೇಡವೇ ಬೇಡ ಎಂದು ಶ್ರೀ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನದ ಜಗದ್ಗುರು ಶ್ರೀ ಗಂಗಾಧರೇಂದ್ರ ಸರಸ್ವತೀ ಮಹಾಸ್ವಾಮಿಗಳು #Swarnavalli Shri ತಾಕೀತು ಮಾಡಿದರು.

ಅವರು ಇಂದು ನಗರದ ಶ್ರೀ ಶೃಂಗೇರಿ ಶಂಕರಮಠದಲ್ಲಿ #Shringeri Shankaramutt ಪರ್ಯಾವರಣ ಟ್ರಸ್ಟ್, ರಾಷ್ಟ್ರೀಯ ಸ್ವಾಭಿಮಾನಿ ಆಂದೋಲನ ಮತ್ತು ನಿರ್ಮಲ ತುಂಗಾಭದ್ರಾ ಅಭಿಯಾನದ ಪದಾಧಿಕಾರಿಗಳೊಡನೆ ಶರಾವತಿ ಪಂಪ್ಡ್ ಸ್ಟೋರೇಜ್ #Sharavathi Pumped Storage ವಿರುದ್ಧದ ಚಿಂತನಾ ಸಭೆಯ ಸಾನಿಧ್ಯ ವಹಿಸಿ ಮಾತನಾಡುತ್ತಿದ್ದರು.
ಈಗಾಗಲೇ ಸರ್ಕಾರಗಳು ಲೆಕ್ಕಾಚಾರಗಳಿಲ್ಲದೆ ಜಾರಿಗೆ ತಂದಿರುವ ವಿನಾಶಕಾರಿ ಯೋಜನೆಯಿಂದ  ಪಶ್ಚಿಮಘಟ್ಟದಲ್ಲಿ ಭೂಕುಸಿತ, ಅರಣ್ಯನಾಶಗಳಂತಹ ಅಪಾಯಕಾರಿ ಘಟನೆಗಳು ಜರುಗುತ್ತಿವೆ. ಉತ್ತರಕನ್ನಡ, ಮಡಿಕೇರಿ, ಮೊದಲಾದ ಪಶ್ಚಿಮಘಟ್ಟಗಳ ಸೆರಗಿನಲ್ಲಿರುವ ಪ್ರದೇಶಗಳಲ್ಲಿ ಹಲವೆಡೆ ಸರಣಿ ಭೂಕುಸಿತಗಳಾಗಿವೆ. ಈಗ ಮತ್ತೆ ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ಜಾರಿಯಾದರೆ ನೆಲದೊಳಗೆ ಸುರಂಗಮಾರ್ಗ ತೋಡುವುದರಿಂದ ಅಪಾಯ ತಪ್ಪಿದ್ದಲ್ಲ ಎಂದ ಅವರು, ಈ ಯೋಜನೆಗಳಿಂದ   ಅಗತ್ಯ ಇದ್ದವರಿಗೆ ಪ್ರಯೋಜನವಾಗುತ್ತಿಲ್ಲ. ಬದಲಾಗಿ ಈ ಯೋಜನೆಗಳ ಜಾರಿಯಲ್ಲಿ ಬೇರೆ ಯಾವುದೋ ಆರ್ಥಿಕ ಯೋಚನೆಗಳೂ ಇರುತ್ತವೆ. ಲೆಕ್ಕಾಚಾರಗಳಿಲ್ಲದ ಯೋಜನೆಗಳು ಇವಾಗಿವೆ ಎಂದರು.

ವಿಶೇಷವಾಗಿ ಬೇಡ್ತಿ-ಅಘನಾಶಿನಿ, ಅಘನಾಶಿನಿ-ವೇದಾವತಿ ಯೋಜನೆಗಳಲ್ಲಿ ಈ ಲೆಕ್ಕಾಚಾರಗಳಿಲ್ಲದ ಯೋಚನೆಯನ್ನು ಕಾಣಬಹುದು. ಉದಾಹರಣೆಗೆ ಮಹತ್ವಾಕಾಂಕ್ಷಿ ಎತ್ತಿನಹೊಳೆ ಯೋಜನೆಯಲ್ಲಿ ಇಂತಹುದೇ ಲೆಕ್ಕಾಚಾರಗಳಿಲ್ಲದ ಕೆಲಸಗಳು ನಡೆದಿದ್ದು, ಯಾರಿಗೆ ನೀರು ಮುಟ್ಟಬೇಕಾಗಿತ್ತೋ ಅವರಿಗೆ ನೀರು ಮುಟ್ಟಿಲ್ಲ ಎಂದು ವಿಷಾಧ ವ್ಯಕ್ತಪಡಿಸಿದ ಅವರು, ಅಡಿಕೆ ಬೆಳೆಯುವಲ್ಲಿಯೂ ಈಗ ಆಯಾ ತಪ್ಪಲಾಗಿದೆ. ಆಹಾರ ಬೆಳೆ ಬೆಳೆಯುವ ಜಾಗದಲ್ಲಿ ಅಡಿಕೆ ಬೆಳೆಯಲಾಗುತ್ತಿದೆ. ಭವಿಷ್ಯದಲ್ಲಿ ಇದು ಮನುಕುಲದ ಆಹಾರ ವ್ಯವಸ್ಥೆಗೆ ಪೆಟ್ಟುಬೀಳುವ ಸಂಭವವಿದೆ. ಅಡಿಕೆ ಆಹಾರಬೆಳೆಯಲ್ಲ, ಅದಕ್ಕೆ ನೀರಿನ ಬಳಕೆ ಹೆಚ್ಚಿದೆ. ಈ ಹಿನ್ನಲೆಯಲ್ಲಿಯೂ ಅಂತರ್‍ಜಲಮಟ್ಟ ಕುಸಿಯುತ್ತಿದೆ ಎಂದರು.
ಪಂಪ್ಡ್ ಸ್ಟೋರೇಜ್, ನದಿ ಜೋಡಣೆಗಳಿಂದ ಸಹಸ್ರಾರು ಮೀನುಗಾರರಿಗೆ ತೊಂದರೆಯಾಗಲಿದೆ. ಘಜನಿ ಭೂಮಿಗೆ ಹೊಡೆತ ಬೀಳಲಿದೆ. ಭೂಕುಸಿತದಂತಹ ದುಷ್ಪರಿಣಾಮಗಳು ಎದುರಾಗಲಿವೆ. ಪಶ್ಚಿಮಘಟ್ಟದಲ್ಲಿ ಈ ಯೋಜನೆಗಳನ್ನು ಜಾರಿ ಮಾಡಲೇಬೇಡಿ. ನವೆಂಬರ್ 23ರಂದು ಶಿರಸಿಯಲ್ಲಿ, ನ.25ರಂದು ಅಘನಾಶಿನಿ ಮೂಲದ ಮಂಜಗುಣಿಯಲ್ಲಿ, ಜನವರಿ 11ರಂದು ಶಿರಸಿಯಲ್ಲಿ ಯುವ ಪ್ರತಿಭಟನಾ ಸಮಾವೇಶ ಹಮ್ಮಿಕೊಳ್ಳಲಾಗಿದೆ. ಪರಸರ ಮನುಷ್ಯನ ಆದ್ಯತೆಯ ವಿಷಯವಾಗಿದೆ. ಸರ್ಕಾರಗಳು ಈ ನಿಟ್ಟಿನಲ್ಲಿ ಗಂಭೀರವಾಗಿ ಗಮನಹರಿಸಬೇಕು ಎಂದು ಸಲಹೆ ನೀಡಿದರು.

ಇದಕ್ಕೂ ಮುನ್ನ ಪ್ರಾಸ್ತಾವಿಕವಾಗಿ ಮಾತನಾಡಿದ ಪರಿಸರ ಹೋರಾಟಗಾರ ಡಾ.ಶ್ರೀಪತಿ ಎಲ್.ಕೆ. ಮಾತನಾಡಿ, ವಿಜ್ಞಾನಿಗಳ ಪ್ರಕಾರ ಶರಾವತಿ ಕಣಿವೆಯಲ್ಲಿ ಪಂಪ್ಡ್ ಸ್ಟೋರೇಜ್ ಯೋಜನೆ ಪರಿಸರಕ್ಕೆ ಮಾರಕವಾಗಿದೆ. ಇಂತಹ 2000 ಮೇಗಾವ್ಯಾಟ್ ವಿದ್ಯತ್ ಶಕ್ತಿಯ ಉತ್ಪಾದನೆ ಜಗತ್ತಿನ ಬೇರ್ಯಾವ ಭಾಗದಲ್ಲೂ ಸ್ಥಾಪನೆಯಾಗಿಲ್ಲ. ಈಗಾಗಲೇ ಈ ಮಾರಕ ಯೋಜನೆಗೆ ಟೆಂಡರ್ ಕರೆಯಲಾಗಿದೆ. ಆದರೆ ಕೇಂದ್ರ ಸರ್ಕಾರ ಇನ್ನೂ ಅನುಮತಿ ನೀಡಿಲ್ಲ. ಇತ್ತೀಚೆಗೆ ಸಮೀಕ್ಷೆಗೆ ಬಂದವರನ್ನು ಬಂಗಾರಮಕ್ಕಿಯ ಶ್ರೀಮಾರುತಿ ಗುರೂಜಿ ಮತ್ತಿತರರು ವಿರೋಧ ಮಾಡಿ, ಅವರನ್ನು ವಾಪಾಸ್ ಕಳುಹಿಸಿದ್ದಾರೆ. ಈ ಯೋಜನೆಯಿಂದ ಉತ್ಪಾದನೆಯಾಗುವ ವಿದ್ಯುತ್‍ಗಿಂತ ಶೇ.25ರಷ್ಟು ಹೆಚ್ಚಿನ ವಿದ್ಯುತ್ ಈ ಉತ್ಪಾದನೆಗೆ ಬೇಕಾಗಿದೆ ಎಂದರು.
ಈ ಯೋಜನೆಯ ಮಾಹಿತಿ ಕೇಳಿದರೆ ರಾಷ್ಟ್ರೀಯ ಹಿತಾಸಕ್ತಿಯ ಹಿನ್ನಲೆಯಲ್ಲಿ ಮಾಹಿತಿ ನೀಡಲಾಗುವುದಿಲ್ಲ ಎಂಬ ಉಡಾಫೆ ಉತ್ತರ ಇಲಾಖೆಯಿಂದ ಬರುತ್ತಿದೆ. ಫ್ರೀಫೀಜಿಬಿಲಿಟಿ ವರದಿಯಲ್ಲಿ ವಿದ್ಯುತ್ ಉತ್ಪಾದನೆಗೆ ತಗುಲುವ ವೆಚ್ಚದ ಬಗ್ಗೆ ಯಾವ ಮಾಹಿತಿಯೂ ಇಲ್ಲ. ಆರ್ಥಿಕವಾಗಿಯೂ ಈ ಯೋಜನೆಯಿಂದ ಯಾವ ಪ್ರಯೋಜನವೂ ಇಲ್ಲ. ಜಗತ್ತಿನ ಜೀವವೈವಿಧ್ಯ ತಾಣಗಳಲ್ಲಿ ಒಂದಾದ ಶರಾವತಿ ಕೊಳ್ಳದಲ್ಲಿ ಅಳಿವಿನಂಚಿಗಿರುವ ಸಿಂಗಳಿಕ, ಮಂಗಟ್ಟೆ ಹಕ್ಕಿಗಳ ಆವಾಸಸ್ಥಾನ ಬರಿದಾಗಲಿದೆ. ಇಲಾಖೆಯ ವರದಿ ಸುಳ್ಳಿನ ಕಂತೆಯಾಗಿದೆ. ಸಂಪೂರ್ಣ ವಿರೋಧಾಭಾಸದಿಂದ ತುಂಬಿದೆ. ರಾಜಸ್ತಾನ, ಮಹಾರಾಷ್ಟ್ರ, ಗುಜರಾತ್ ಮತ್ತು ತಮಿಳುನಾಡುಗಳಲ್ಲಿ ಪರಿಸರ ಸ್ನೇಹಿಯಾಗಿರುವ ಬ್ಯಾಟರಿ ಎನರ್ಜಿ ಸ್ಟೋರೇಜ್ ಪದ್ಧತಿ ಜಾರಿಯಲ್ಲಿದೆ. ಅಂತಹುಗಳನ್ನು ಕರ್ನಾಟಕದಲ್ಲಿ ಜಾರಿಗೆ ತರಲು ಸರ್ಕಾರ ಮುಂದಾಗಬೇಕು ಎಂದು ಆಗ್ರಹಿಸಿದರು.

ಈ ಸಂದರ್ಭದಲ್ಲಿ ನಿರ್ಮಲತುಂಗಾಭದ್ರಾ ಅಭಿಯಾನ ಸಂಚಾಲಕ ಎಂ. ಶಂಕರ್, ರಾಷ್ಟ್ರೀಯ ಸ್ವಾಭಿಮಾನಿ ಆಂದೋಲನದ  ದಕ್ಷಿಣ ಭಾರತದ ಪ್ರಮುಖ ವಿ.ಪಿ. ಮಾಧವನ್, ಪರ್ಯಾವರಣ ಟ್ರಸ್ಟಿನ ಬಾಲಕೃಷ್ಣ ನಾಯ್ಡು, ಡಾ.ಬಾಲಕೃಷ್ಣ ಹೆಗಡೆ, ಮಹಿಮಾ ಪಟೇಲ್, ಡಾ. ವರದರಾಜ್, ದಿನೇಶ್‍ಕುಮಾರ್, ಲೋಕೇಶ್ವರಪ್ಪ, ಭಾಗೀರಥಿಬಾಯಿ, ಭಾರತೀಯ ಕೃಷಿಕ ಸಮಾಜದ ವಾಸುದೇವ್,  ಮೊದಲಾದವರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2025/09/Vedic-Maths-New.mp4
http://kalpa.news/wp-content/uploads/2024/04/VID-20240426-WA0008.mp4

Tags: Kannada NewsKannada News LiveKannada News Online ShivamoggaKannada WebsiteKannadaNewsWebsiteLatestNewsKannadaLocalNewsMalnadNewsNews in KannadaNews KannadaSharavathi Pumped StorageShimogaShivamoggaNewsShringeri ShankaramuttSwarnavalli Shriಮಲೆನಾಡು_ಸುದ್ಧಿಶರಾವತಿ ಪಂಪ್ಡ್ ಸ್ಟೋರೇಜ್ಶಿವಮೊಗ್ಗಶಿವಮೊಗ್ಗ_ನ್ಯೂಸ್ಶ್ರೀ ಗಂಗಾಧರೇಂದ್ರ ಸರಸ್ವತೀ ಮಹಾಸ್ವಾಮಿಗಳುಶ್ರೀ ಶೃಂಗೇರಿ ಶಂಕರಮಠ
Share196Tweet123Send
Previous Post

ನೈಋತ್ಯ ರೈಲ್ವೆಯ ನೂತನ ಹೆಚ್ಚುವರಿ ಪ್ರಧಾನ ವ್ಯವಸ್ಥಾಪಕರಾಗಿ ಪಿ. ಅನಂತ್ ಪದಗ್ರಹಣ

Next Post

ರೈತರ ಉತ್ಪನ್ನ ಮಾಲ್, ಸೂಪರ್ ಮಾರ್ಕೆಟ್‌ನಲ್ಲಿ ಸ್ಥಾನ ಪಡೆಯಬೇಕು: ವೆಂಕಟ ಸುಬ್ರಮಣಿಯನ್

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ರೈತರ ಉತ್ಪನ್ನ ಮಾಲ್, ಸೂಪರ್ ಮಾರ್ಕೆಟ್‌ನಲ್ಲಿ ಸ್ಥಾನ ಪಡೆಯಬೇಕು: ವೆಂಕಟ ಸುಬ್ರಮಣಿಯನ್

ರೈತರ ಉತ್ಪನ್ನ ಮಾಲ್, ಸೂಪರ್ ಮಾರ್ಕೆಟ್‌ನಲ್ಲಿ ಸ್ಥಾನ ಪಡೆಯಬೇಕು: ವೆಂಕಟ ಸುಬ್ರಮಣಿಯನ್

Leave a Reply Cancel reply

Your email address will not be published. Required fields are marked *

  • Trending
  • Latest
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ಶಿವಮೊಗ್ಗ | ಮೈಮೇಲೆ ಹರಿದ ಲಾರಿ | ಯುವಕ ಸ್ಥಳದಲ್ಲೇ ಸಾವು

ಶಿವಮೊಗ್ಗ | ಮೈಮೇಲೆ ಹರಿದ ಲಾರಿ | ಯುವಕ ಸ್ಥಳದಲ್ಲೇ ಸಾವು

January 12, 2026
ಗದಗ-ಧಾರವಾಡ ಪ್ಯಾಸೆಂಜರ್ ರೈಲು ಪುನಾರಂಭ? ಕೇಂದ್ರ ಸಚಿವ ಜೋಶಿ ಹೇಳಿದ್ದೇನು?

ಸಾಗರ ಮಾರಿಕಾಂಬಾ ಜಾತ್ರೆಗೆ ಯಶವಂತಪುರ-ತಾಳಗುಪ್ಪ 2 ಸ್ಪೆಷಲ್ ರೈಲುಗಳು | ಹೀಗಿದೆ ಡೀಟೇಲ್ಸ್

January 31, 2026
ಫೆ.7, 8ರಂದು ಮಾರಿಕಾಂಬಾ ಕ್ರಿಕೆಟ್ ಪಂದ್ಯಾವಳಿ

ಫೆ.7, 8ರಂದು ಮಾರಿಕಾಂಬಾ ಕ್ರಿಕೆಟ್ ಪಂದ್ಯಾವಳಿ

February 5, 2026
ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರ ಆರೋಪ | ಅಬಕಾರಿ ಸಚಿವರ ರಾಜೀನಾಮೆಗೆ ಬಿಜೆಪಿ ಅಗ್ರಹ

ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರ ಆರೋಪ | ಅಬಕಾರಿ ಸಚಿವರ ರಾಜೀನಾಮೆಗೆ ಬಿಜೆಪಿ ಅಗ್ರಹ

February 5, 2026
ಶಿವಮೊಗ್ಗ | ನಾರಾಯಣ ಸೂಪರ್ ಸ್ಪೆಷಾಲಿಟಿ ಕ್ಲಿನಿಕ್’ನಲ್ಲಿ ಉಚಿತ ಮೂಳೆ ಸಾಂದ್ರತೆ ತಪಾಸಣಾ ಶಿಬಿರ

ಶಿವಮೊಗ್ಗ | ನಾರಾಯಣ ಸೂಪರ್ ಸ್ಪೆಷಾಲಿಟಿ ಕ್ಲಿನಿಕ್’ನಲ್ಲಿ ಉಚಿತ ಮೂಳೆ ಸಾಂದ್ರತೆ ತಪಾಸಣಾ ಶಿಬಿರ

February 5, 2026
ಕೃಷಿ ತ್ಯಾಜ್ಯದಿಂದ ನವೀನ ಪ್ಯಾಕೇಜಿಂಗ್ ಪರಿಹಾರ ಅಭಿವೃದ್ಧಿಪಡಿಸಲು ಅಮೆಜಾನ್ – ಐಐಟಿ ರೂರ್ಕಿ ಸಹಭಾಗಿತ್ವ

ಕೃಷಿ ತ್ಯಾಜ್ಯದಿಂದ ನವೀನ ಪ್ಯಾಕೇಜಿಂಗ್ ಪರಿಹಾರ ಅಭಿವೃದ್ಧಿಪಡಿಸಲು ಅಮೆಜಾನ್ – ಐಐಟಿ ರೂರ್ಕಿ ಸಹಭಾಗಿತ್ವ

February 5, 2026
ಅಮಚವಾಡಿ 2 ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಬೆಳ್ಳಿ ಮಹೋತ್ಸವ ಸಂಭ್ರಮ

ಅಮಚವಾಡಿ 2 ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಬೆಳ್ಳಿ ಮಹೋತ್ಸವ ಸಂಭ್ರಮ

February 5, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL