ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ/ಶಿಕಾರಿಪುರ |
ರಾಜ್ಯ ಸರ್ಕಾರ ಒಳ ಮೀಸಲಾತಿ ಸಂಬAಧ ಕೇಂದ್ರಕ್ಕೆ ನೀಡಿರುವ ಶಿಫಾರಸ್ಸನ್ನು ವಿರೋಧಿಸಿ ಶಿವಮೊಗ್ಗ-ಶಿಕಾರಿಪುರ ನಡುವಿನ ಕುಂಚೇನಹಳ್ಳಿಯಲ್ಲಿ ಗ್ರಾಮಸ್ಥರು ಪ್ರತಿಭಟನೆ ನಡೆಸುತ್ತಿದ್ದು, ಪರಿಣಾಮವಾಗಿ ಹೆದ್ದಾರಿಯಲ್ಲಿ ಟ್ರಾಫಿಕ್ ಜಾಮ್ ಉಂಟಾಗಿದೆ.
ಮೇಲಿನ ಮತ್ತು ಕೆಳಗಿನ ಕುಂಚೇನಹಳ್ಳಿಯ ಮಧ್ಯದಲ್ಲಿರುವ ಗ್ರಾಮ ಪಂಚಾಯ್ತಿ ಕಚೇರಿ ಎದುರು ಬೃಹತ್ ಪ್ರತಿಭಟನೆ ನಡೆಸಲಾಗುತ್ತಿದ್ದು, ಟೈರ್ ಹಾಗೂ ತೆಂಗಿನ ಗರಿಗಳಿಗೆ ಬೆಂಕಿ ಹೆಚ್ಚಿ ರಸ್ತೆ ಬಂದ್ ಮಾಡಲಾಗಿದೆ.
ಬಂಜಾರ ಸಮುದಾಯದ ಧ್ವಜಗಳನ್ನು ಹಿಡಿದು ಸರ್ಕಾರದ ವಿರುದ್ಧ ಘೋಷಣೆ ಕೂಗುತ್ತಿದ್ದಾರೆ. ದಿಢೀರ್ ರಸ್ತೆ ತಡೆಯಿಂದಾಗಿ ಶಿವಮೊಗ್ಗ – ಶಿಕಾರಿಪುರ ಹೆದ್ದಾರಿಯಲ್ಲಿ ವಾಹನಗಳು ಸಾಲುಗಟ್ಟಿ ನಿಂತಿದ್ದು, ಈ ಭಾಗದಲ್ಲಿ ಸಂಚಾರ ದಟ್ಟಣೆ ಉಂಟಾಗಿದೆ. ಸಾರ್ವಜನಿಕ ಹಾಗೂ ಪೊಲೀಸ್ ಇಲಾಖೆಯ ವಾಹನಗಳೂ ಸಹ ರಸ್ತೆಯಲ್ಲಿ ಸಿಲುಕಿಕೊಂಡಿವೆ.
ಭೋವಿ, ಕೊರಚ ಮತ್ತು ಕೊರಮ ತಮಿಳು ಜನಾಂಗ ಬಂಜಾರ ಸಮುದಾಯದ ಪ್ರತಿಭಟನೆಯಲ್ಲಿ ಭಾಗಿಯಾಗಿವೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post