ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಅಯೋಧ್ಯೆಯನ್ನು Ayodhya ರಾಮಲಲ್ಲಾ Ramalalla ಪ್ರತಿಷ್ಠಾಪನೆ ಹಿನ್ನೆಲೆಯಲ್ಲಿ ನಗರದ ಶಿವಪ್ಪನಾಯಕ ವೃತ್ತದಲ್ಲಿ ಬಿಜೆಪಿ ಹಾಗೂ ಹಿಂದೂ ಸಂಘಟನೆಗಳು ಸಿಹಿ ಹಂಚುವ ವೇಳೆ ಮುಸ್ಲಿಂ ಮಹಿಳೆಯೊಬ್ಬರು ಅಲ್ಲಾಹು ಅಕ್ಬರ್ ಎಂದು ಘೋಷಣೆ ಕೂಗಿರುವ ಘಟನೆ ನಡೆದಿದೆ.
ಶಿವಪ್ಪ ನಾಯಕ ವೃತ್ತದಲ್ಲಿ ರಾಮೋತ್ಸವದ ಹಿನ್ನೆಲೆಯಲ್ಲಿ ಸಿಹಿ ಹಂಚಿ ಸಂಭ್ರಮಿಸಿ, ಜೈಶ್ರೀರಾಮ್ Jai Shri Ram ಎಂದು ಘೋಷಣೆ ಕೂಗುತ್ತಿದ್ದರು. ಈ ವೇಳೆ ಬಂದ ಓರ್ವ ಮುಸ್ಲಿಂ ಮಹಿಳೆ ಅಲ್ಲಾಹು ಅಕ್ಬರ್ ಎಂದು ಘೋಷಣೆ ಕೂಗಿದ್ದಾರೆ. ಅಲ್ಲದೇ, ನೀವು ಮೋದಿ ಪರ ಕೆಲಸ ಮಾಡುತ್ತಿದ್ದೀರಿ ಎಂದು ಪೊಲೀಸರ ವಿರುದ್ಧವೇ ಕೂಗಾಟ ನಡೆಸಿದ್ದಾರೆ.
Also read: ಪ್ರಾಣಪ್ರತಿಷ್ಠಾಪನೆ ನೇರ ಪ್ರಸಾರಕ್ಕೆ ಅಡ್ಡಿ ಮಾಡದಿರಿ: ತಮಿಳುನಾಡಿಗೆ ಸುಪ್ರೀಂ ಕೋರ್ಟ್ ಚಾಟಿ
ಮಹಿಳೆಯ ವರ್ತನೆಯ ಹಿನ್ನೆಲೆಯಲ್ಲಿ ಬಿಜೆಪಿ ಹಾಗೂ ಹಿಂದೂ ಕಾರ್ಯಕರ್ತರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಪೊಲೀಸರು ಆಕೆಯನ್ನು ವಶಕ್ಕೆ ಪಡೆದಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news


















