ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ನಗರದ ಹೊಸಮನೆ ಬಡಾವಣೆಯಲ್ಲಿ ಕಿಡಿಗೇಡಿಗಳು ನಿನ್ನೆ ರಾತ್ರಿ ತಲ್ವಾರ್, ಮಚ್ಚು ಹಿಡಿದು ಅಟ್ಟಹಾಸ ಮರೆದಿದ್ದು, ಮನೆ ಮುಂದೆ ನಿಲ್ಲಿಸಿದ್ದ ವಾಹನಗಳನ್ನು ಜಖಂಗೊಳಿಸಿರು ಘಟನೆ ನಡೆದಿದೆ.
ಹೊಸಮನೆ ಮೂರನೇ ತಿರುವಿನ ಮಾರಿಕಾಂಬ ದೇವಸ್ಥಾನ ಸಮೀಪದದ ಡಾ. ಬಾಬು ಜಗಜೀವನ್ ರಾಮ್ ಸಮುದಾಯ ಭವನದ ಸುತ್ತಮುತ್ತಲಿನ ಮನೆಗಳ ಎದುರು ನಿಲ್ಲಿಸಿದ್ದ ನಾಲ್ಕು ಕಾರು ಮತ್ತು ಎರಡು ಆಟೋಗಳ ಗಾಜುಗಳನ್ನು ಕಿಡಿಗೇಡಿಗಳು ಪುಡಿ ಪುಡಿ ಮಾಡಿದ್ದಾರೆ.
ಸಂದೇಶ್ ಎಂಬುವವರಿಗೆ ಸೇರಿದ ಕಾರು, ಮಂಜು, ಲಿಂಗರಾಜು ಎಂಬುವವರಿಗೆ ಸೇರಿದ ಆಟೋಗಳು ಮತ್ತು ಸಿದ್ದಪ್ಪ, ಜಗದೀಶ್, ಚಂದ್ರಪ್ಪ ಎಂಬುವವರಿಗೆ ಸೇರಿದ ಬೈಕುಗಳಿಗೆ ಹಾನಿ ಮಾಡಲಾಗಿದೆ. ಅಲ್ಲದೆ ಜಗದೀಶ್ ಎಂಬುವವರ ಅಂಗಡಿ ಬಾಗಿಲಿನ ಬೀಗಕ್ಕೆ ಮಚ್ಚಿನಿಂದ ಹೊಡೆಯಲಾಗಿದೆ ಎಂದು ತಿಳಿದುಬಂದಿದೆ.
ಘಟನಾ ಸ್ಥಳಕ್ಕೆ ಶಾಸಕರ ಚನ್ನಬಸಪ್ಪ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣಕ್ಕೆ ಸಂಬಂಧಪಟ್ಟಂತೆ ದೊಡ್ಡಪೇಟೆ ಪೊಲೀಸರು ಸ್ಥಳಕ್ಕೆ ಆಗಮಿಸಿ ದುಷ್ಕೃತ್ಯಕ್ಕೆ ಸಂಬಂಧಪಟ್ಟಂತೆ ಮಾಹಿತಿ ಸಂಗ್ರಹಿಸಿದ್ದಾರೆ ಎನ್ನಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post