No Result
View All Result
SWR to run special trains for Good Friday, Easter rush
English Articles

Regulation, Diversion and Rescheduling of Trains in the Solapur–Wadi Section

by ಕಲ್ಪ ನ್ಯೂಸ್
June 1, 2026
0

Kalpa Media House  |  Hubballi  | Due to technical works being carried out in the Solapur–Wadi section, temporary regulation, diversion...

Read moreDetails
ಒಂದು ವರ್ಷ ಪೂರ್ಣಗೊಳಿಸಿದ ಹೆಣ್ಣೂರು ಸ್ಪರ್ಶ್ ಆಸ್ಪತ್ರೆ | ಮಲ್ಟಿಸ್ಪೆಷಾಲಿಟಿ ಆರೈಕೆಯ ಪ್ರತಿಬಿಂಬ

Hennur Sparsh Hospital Completes One Year | A Reflection of Multispecialty Care

May 25, 2026
ಸ್ಯಾಂಡಲ್ವುಡ್ ಸಲಗ-ರಚಿತಾ ರಾಮ್ ನಟಿಸಿರುವ ‘ಲ್ಯಾಂಡ್ ಲಾರ್ಡ್’ ಇದೇ ಶನಿವಾರ ಜೀ ಕನ್ನಡದಲ್ಲಿ

Duniya Vijay, Rachita Ram & Raj B. Shetty’s Landlord Premieres This Saturday on Zee Kannada

May 22, 2026
ನೇಮಕಾತಿ ಪ್ರಕ್ರಿಯೆ ಕಠಿಣ | ತೆರೆಮರೆಯ ಪ್ರತಿಭೆಗಳನ್ನು ಹುಡುಕಲು ಎಐ ಮೊರೆ: ಲಿಂಕ್ಡ್‌ ಇನ್

LinkedIn shares Bengaluru’s Top Companies for career growth in 2026

May 20, 2026
GE Aerospace to Invest ₹100 Crore in Pune Facility, Boosting India Manufacturing

GE Aerospace to Invest ₹100 Crore in Pune Facility, Boosting India Manufacturing

May 20, 2026
  • Advertise With Us
  • Grievances
  • About Us
  • Contact Us
Monday, June 1, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

10 ಕೋಟಿ ರೂ. ಲಾಭದಲ್ಲಿ ಶಿವಮೊಗ್ಗ ಡಿಸಿಸಿ ಬ್ಯಾಂಕ್ | ಆರ್.ಎಂ. ಮಂಜುನಾಥ ಗೌಡ ಮಾಹಿತಿ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
September 10, 2024
in ಶಿವಮೊಗ್ಗ
0
10 ಕೋಟಿ ರೂ. ಲಾಭದಲ್ಲಿ ಶಿವಮೊಗ್ಗ ಡಿಸಿಸಿ ಬ್ಯಾಂಕ್ | ಆರ್.ಎಂ. ಮಂಜುನಾಥ ಗೌಡ ಮಾಹಿತಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ #DCC Bank 2023-24ನೇ ಸಾಲಿನಲ್ಲಿ 10.58 ಕೋಟಿ ರೂ. ನಿವ್ವಳ ಲಾಭ ಗಳಿಸಿದ್ದು, 2025ರ ಮಾರ್ಚ್ ಅಂತ್ಯಕ್ಕೆ 25 ಕೋಟಿ ರೂ. ನಿವ್ವಳ ಲಾಭ ಗಳಿಸುವ ಗುರಿ ಹೊಂದಲಾಗಿದೆ ಎಂದು ಬ್ಯಾಂಕ್ ಅಧ್ಯಕ್ಷ ಡಾ. ಆರ್.ಎಂ. ಮಂಜುನಾಥಗೌಡ #R M Manjunath Gowda ತಿಳಿಸಿದರು.

ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, 2023-24ನೇ ಸಾಲಿನಲ್ಲಿ ಒಟ್ಟು 17.99 ಕೋಟಿ ರೂ. ಲಾಭ ಗಳಿಸಿದೆ. ಷೇರು ಬಂಡವಾಳ 138.98 ಕೋಟಿ ರೂ. ಹಾಗೂ ನಿಧಿಗಳು 67.46 ಕೋಟಿ ರೂ. ಹಾಗೂ ದುಡಿಯುವ ಬಂಡವಾಳ 2332.29 ಕೋಟಿ ರೂ. ಇದ್ದು, 1462.78 ಕೋಟಿ ರೂ. ಠೇವಣಿ ಸಂಗ್ರಹಣೆಯಾಗಿದೆ ಎಂದರು.
2023-24ನೇ ಸಾಲಿನಲ್ಲಿ ಶೂನ್ಯ ಬಡ್ಡಿ ದರದಲ್ಲಿ ಅಲ್ಪಾವಧಿ ಕೃಷಿ ಬೆಳೆ ಸಾಲವನ್ನು 104250 ರೈತರಿಗೆ 1010.20 ಕೋಟಿ ರೂ. ಸಾಲ ಹಂಚಿಕೆ ಮಾಡಲಾಗಿದೆ. ಈ ಪೈಕಿ 3581 ಹೊಸ ರೈತರಿಗೆ 43.04 ಕೋಟಿ ರೂ. ಹಾಗೂ ಹೆಚ್ಚುವರಿ ಸಾಲ 6683 ರೈತರಿಗೆ 33.68 ಕೋಟಿ ರೂ. ಸಾಲ ವಿತರಣೆ ಮಾಡಿದ್ದು, ಶೇ. 108.96ರಷ್ಟು ಪ್ರಗತಿಯಾಗಿದೆ. ಆ. 24ರ ಅಂತ್ಯದವರೆಗೆ ಒಟ್ಟು 37672 ರೈತರಿಗೆ ಒಟ್ಟು 417.85 ಕೋಟಿ ರೂ. ಸಾಲ ಹಂಚಿಕೆ ಮಾಡಲಾಗಿದ್ದು, ಸಾಲ ವಸೂಲಾತಿ ಶೇ. 99.07ರಷ್ಟು ಇದೆ ಎಂದರು.

Also read: ಭದ್ರಾವತಿ | ಪತ್ರಕರ್ತ ಮಹಾಲಿಂಗಪ್ಪ ನಿಧನ

ಸ್ವಸಹಾಯ ಸಂಘಗಳಿಗೆ 2023-24ನೇ ಸಾಲಿನಲ್ಲಿ 73.33 ಕೋಟಿ ರೂ. ಸಾಲ ವಿತರಿಸಿದ್ದು, ಶೇ. 100ರಷ್ಟು ಪ್ರಗತಿಯಲ್ಲಿದೆ. 2024ರ ಆಗಸ್ಟ್ ಅಂತ್ಯದವರೆಗೆ ಒಟ್ಟು 680 ಸ್ವಸಹಾಯ ಸಂಘಗಳಿಗೆ 29.53 ಕೋಟಿ ರೂ. ಸಾಲ ಹಂಚಿಕೆ ಮಾಡಲಾಗಿದ್ದು, ಸಾಲ ವಸೂಲಾತಿಯಲ್ಲಿ ಶೇ. 99ರಷ್ಟು ಇದೆ ಎಂದರು.

ಹಾಲು ಉತ್ಪಾದಕ ಸಹಕಾರ ಸಂಘದ ಸದಸ್ಯರಿಗೆ ಡಿಸಿಸಿ ಬ್ಯಾಂಕ್ ನಲ್ಲಿ ಉಳಿತಾಯ ಖಾತೆ ತೆರೆಯಲು ಅವಕಾಶ ನೀಡಿದ್ದು, ಬ್ಯಾಂಕ್ ನಿಂದ ಈಗಾಗಲೇ ಹಲವು ಸೌಲಭ್ಯಗಳನ್ನು ಸದಸ್ಯರಿಗೆ ಒದಗಿಸಲಾಗುತ್ತಿದೆ. ರಾಜ್ಯ ಸರ್ಕಾರದ ಯೋಜನೆಯಂತೆ ಶೂನ್ಯ ಬಡ್ಡಿದರದಲ್ಲಿ ಪಶುಸಂಗೋಪನೆ ಉದ್ದೇಶಕ್ಕೆ 3008 ಸದಸ್ಯರಿಗೆ 6.53 ಕೋಟಿ ರೂ. ಸಾಲ ನೀಡಲಾಗಿದೆ. ಬ್ಯಾಂಕ್ ಶಾಖೆಗಳ ಮೂಲಕ 15231 ವ್ಯಕ್ತಿಗಳಿಗೆ 519.16 ಕೋಟಿ ರೂ. ಕೃಷಿಯೇತರ ಸಾಲ ವಿತರಿಸಲಾಗಿದೆ ಎಂದರು.
ರೈತರ ಮತ್ತು ಗ್ರಾಹಕರ ಮನೆ ಬಾಗಿಲಿಗೆ ಬ್ಯಾಂಕಿಂಗ್ ಯೋಜನೆಯ ರೀತ್ಯ ಮೊಬೈಲ್ ವಾಹನದ ಸೌಲಭ್ಯ ಜಾರಿಗೆ ತರಲಾಗಿದ್ದು, ಮೊಬೈಲ್ ವ್ಯಾನ್‍ನಲ್ಲಿ ಎಟಿಎಂ ಅಳವಡಿಸಿದ್ದು ಈಗಾಗಲೇ ಮೊಬೈಲ್ ವ್ಯಾನ್ ಜಿಲ್ಲೆಯ ಎಲ್ಲಾ ಹಳ್ಳಿ ಹಳ್ಳಿಗಳಲ್ಲೂ ಸಂಚರಿಸುತ್ತಿದೆ. ಹಾಲು ಉತ್ಪಾದಕ ಸಂಘದ ಸದಸ್ಯರು ಮತ್ತು ಗ್ರಾಹಕರು ನಮ್ಮ ಬ್ಯಾಂಕಿನ ಎಟಿಎಂ ಕಾರ್ಡ್ ಮುಖಾಂತರ ಹಣ ಡ್ರಾ ಮಾಡಬಹುದಾಗಿದೆ ಎಂದರು.

ಬ್ಯಾಂಕ್ ಮೊಬೈಲ್ ಆ್ಯಪ್ ಅನ್ನು ಬಿಡುಗಡೆ ಮಾಡಿದ್ದು, ಈ ಆ್ಯಪ್ ಮೂಲಕ ಬ್ಯಾಂಕ್ ನ ಗ್ರಾಹಕರು ಖಾತೆಗಳ ಬ್ಯಾಲೆನ್ಸ್, ಮಿನಿ ಪಾಸ್ ಬುಕ್, ಬ್ಯಾಂಕ್ ಸಾಮಾನ್ಯ ಮಾಹಿತಿಗಳು, ಪಾಸಿಟಿವ್ ಪೇ ಸಿಸ್ಟಂನಡಿಯಲ್ಲಿ ಗ್ರಾಹಕರು ನೀಡಿದ ಚೆಕ್ ವಿವರಗಳನ್ನು ಪಡೆಯಬಹುದಾಗಿದೆ ಎಂದರು.

2024-25ನೇ ಸಾಲಿನಲ್ಲಿ ಶೂನ್ಯ ಬಡ್ಡಿದರದಲ್ಲಿ ಅಲ್ಪಾವಧಿ ಕೃಷಿ ಬೆಳೆ ಸಾಲವನ್ನು 1.20 ಲಕ್ಷ ರೈತರಿಗೆ 1200 ಕೋಟಿ ರೂ. ಹಾಗೂ ಶೇ. 3ರ ಬಡ್ಡಿದರದಲ್ಲಿ 1500 ರೈತರಿಗೆ 80 ಕೋಟಿ ರೂ. ಮಧ್ಯಮಾವಧಿ ಕೃಷಿ ಸಾಲ ನೀಡುವ ಹಾಗೂ 2100 ಸ್ವಸಹಾಯ ಸಂಘಗಳಿಗೆ 100 ಕೋಟಿ ರೂ. ಸಾಲ ವಿತರಿಸುವ ಮತ್ತು 1600 ಕೋಟಿ ರೂ. ಠೇವಣಿ ಸಂಗ್ರಹಿಸುವ ಗುರಿ ಹೊಂದಲಾಗಿದೆ ಎಂದರು.

ಜಿಲ್ಲೆಯ ಗ್ರಾಹಕರ ಅನುಕೂಲಕ್ಕಾಗಿ ಭದ್ರಾವತಿ ತಾಲೂಕಿನ ಕಲ್ಲಿಹಾಳ್, ಸೊರಬ ತಾಲೂಕಿನ ಜಡೆ ಹಾಗೂ ಶಿಕಾರಿಪುರ ತಾಲೂಕಿನ ಸುಣ್ಣದಕೊಪ್ಪದಲ್ಲಿ ನೂತನ ಶಾಖೆಯನ್ನು ದಸರಾ ಹಬ್ಬದೊಳಗಾಗಿ ಆರಂಭಿಸಲಾಗುವುದು. ಹಾಗೂ ಜಿಲ್ಲೆಯಲ್ಲಿ 19 ನೂತನ ಶಾಖೆ ತೆರೆಯುವ ಬಗ್ಗೆ ಪ್ರಸ್ತಾವನೆಯನ್ನು ಆರ್.ಬಿ.ಐ.ಗೆ ಸಲ್ಲಿಸಲಾಗಿದೆ.

ಕೃಷಿಗೆ ಪ್ರೋತ್ಸಾಹ ಕೊಡುವ ದೃಷ್ಟಿಯಿಂದ ಅಸ್ತಿತ್ವಕ್ಕೆ ಬಂದ ನಬಾರ್ಡ್ ಈಗ ಕೃಷಿಕರನ್ನೇ ಮರೆತಿರುವುದು ವಿಪರ್ಯಾಸವಾಗಿದೆ. ಶೇ. 8.5ರ ದರದಲ್ಲಿ ಎಷ್ಟು ಬೇಕಾದರೂ ಸಾಲ ಕೊಡುವ ನಬಾರ್ಡ್ ರೈತರಿಗಾಗಿ 4.5ರ ಬಡ್ಡಿ ದರದಲ್ಲಿ ಸಾಲ ಕೊಡಲು ಹಿಂದೆ ಮುಂದೆ ನೋಡುತ್ತಿದೆ. ನಬಾರ್ಡ್‍ನಿಂzದ ಪನರ್ ಧನ ಮಂಜೂರಾಗುವುದೇ ಇಲ್ಲ. ಹಾಗಾಗಿ ಅದು ರೈತ ವಿರೋಧಿಯಾಗಿದೆ ಎಂದು ಆರ್.ಎಂ. ಮಂಜುನಾಥಗೌಡ ಆರೋಪಿಸಿದರು.

http://kalpa.news/wp-content/uploads/2024/04/VID-20240426-WA0008.mp4

ಹಾಗೆಯೇ ಸಹಕಾರ ಸಂಘಗಳಲ್ಲಿ ನಿಶ್ಚಿತ ಠೇವಣಿ ಇಡುವ ವೈಯಕ್ತಿಕ ಅಥವಾ ಸಂಘ ಸಂಸ್ಥೆಗಳ ಠೇವಣಿ ಮೊತ್ತಕ್ಕೆ ಕೇಂದ್ರ ಸರ್ಕಾರದ ನಿಯಮಾನುಸಾರ ಜಿ.ಎಸ್.ಟಿ. ತೆರಿಗೆ ಅನ್ವಯಿಸುವುದು ಕಷ್ಟಕರವಾಗಿದೆ. ಅಲ್ಲದೇ, ಜಿ.ಎಸ್.ಟಿ. ಸಹಕಾರಿ ತತ್ವಕ್ಕೆ ಇದು ವಿರೋಧಿಯಾಗಿದೆ. ಇದರಿಂದ ಬ್ಯಾಂಕ್ ಗಳ ಪ್ರಗತಿಗೂ ಧಕ್ಕೆಯಾಗಲಿದೆ. ಸಹಕಾರ ಸಂಘಗಳ ವ್ಯವಹಾರಗಳಿಗೆ ಜಿ.ಎಸ್.ಟಿ. ಹಾಕಬಾರದು ಎಂದು ಕೇಂದ್ರ ಸರ್ಕಾರಕ್ಕೆ ಅವರು ಆಗ್ರಹಿಸಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಬ್ಯಾಂಕ್ ನ ಉಪಾಧ್ಯಕ್ಷ ಎಸ್.ಕೆ. ಮರಿಯಪ್ಪ, ನಿರ್ದೇಶಕರಾದ ಹನುಮಂತು, ಮಹಾಲಿಂಗ ಶಾಸ್ತ್ರಿ, ದುಗ್ಗಪ್ಪಗೌಡ, ಸುಧೀರ್, ಚಂದ್ರಶೇಖರಗೌಡ, ಪರಮೇಶ್, ದಶರಥಗಿರಿ, ಸಹಕಾರ ಸಂಘಗಳ ಉಪನಿಬಂಧಕ ನಾಗಭೂಷಣ್ ಕಲ್ಮನೆ ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news      

 

Tags: DCC BankKannada_NewsKannada_News_LiveKannada_News_Online ShivamoggaKannada_WebsiteKannadaNewsWebsiteLatestNewsKannadaLocalNewsMalnadNewsNews_in_KannadaNews_KannadaR.M. Manjunath GowdaShimogaShivamoggaNewsಆರ್.ಎಂ. ಮಂಜುನಾಥಗೌಡಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share196Tweet123Send
Previous Post

ಭದ್ರಾವತಿ | ಪತ್ರಕರ್ತ ಮಹಾಲಿಂಗಪ್ಪ ನಿಧನ

Next Post

ರೇಣುಕಾಸ್ವಾಮಿ ಹತ್ಯೆ ಪ್ರಕರಣ | ಮಾಧ್ಯಮಗಳಿಗೆ ಹೈಕೋರ್ಟ್ ಮಹತ್ವದ ಸೂಚನೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ರೇಣುಕಾಸ್ವಾಮಿ ಹತ್ಯೆ ಪ್ರಕರಣ | ಮಾಧ್ಯಮಗಳಿಗೆ ಹೈಕೋರ್ಟ್ ಮಹತ್ವದ ಸೂಚನೆ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಮರ ಬಿದ್ದು, ಸಾಗರ ಶಿವಮೊಗ್ಗ ಮಧ್ಯೆ ಹೆದ್ದಾರಿ ಬಂದ್ | ಇಲ್ಲಿದೆ ಪರ್ಯಾಯ ಮಾರ್ಗ

ಮರ ಬಿದ್ದು, ಸಾಗರ ಶಿವಮೊಗ್ಗ ಮಧ್ಯೆ ಹೆದ್ದಾರಿ ಬಂದ್ | ಇಲ್ಲಿದೆ ಪರ್ಯಾಯ ಮಾರ್ಗ

June 1, 2026
ಅಜ್ಜಂಪುರ–ಬೀರೂರು ರೈಲ್ವೆ ಯೋಜನೆಗಳಿಗೆ ಶಂಕುಸ್ಥಾಪನೆ | ಚನ್ನರಾಯಪಟ್ಟಣದಲ್ಲಿ ಹಾಸನ–ಸೊಲ್ಲಾಪುರ ಎಕ್ಸ್‌ಪ್ರೆಸ್‌ಗೆ ಹೆಚ್ಚುವರಿ ನಿಲುಗಡೆ

ಅಜ್ಜಂಪುರ–ಬೀರೂರು ರೈಲ್ವೆ ಯೋಜನೆಗಳಿಗೆ ಶಂಕುಸ್ಥಾಪನೆ | ಚನ್ನರಾಯಪಟ್ಟಣದಲ್ಲಿ ಹಾಸನ–ಸೊಲ್ಲಾಪುರ ಎಕ್ಸ್‌ಪ್ರೆಸ್‌ಗೆ ಹೆಚ್ಚುವರಿ ನಿಲುಗಡೆ

June 1, 2026
ಗುಬ್ಬಿಯಲ್ಲಿ ರಸ್ತೆ ಕೆಳ ಸೇತುವೆ ಶಂಕುಸ್ಥಾಪನೆ | ಒಂದು ವರ್ಷದಲ್ಲಿ ಕಾಮಗಾರಿ ಪೂರ್ಣ | ಸಚಿವ ವಿ. ಸೋಮಣ್ಣ

ಗುಬ್ಬಿಯಲ್ಲಿ ರಸ್ತೆ ಕೆಳ ಸೇತುವೆ ಶಂಕುಸ್ಥಾಪನೆ | ಒಂದು ವರ್ಷದಲ್ಲಿ ಕಾಮಗಾರಿ ಪೂರ್ಣ | ಸಚಿವ ವಿ. ಸೋಮಣ್ಣ

June 1, 2026
SWR to run special trains for Good Friday, Easter rush

Regulation, Diversion and Rescheduling of Trains in the Solapur–Wadi Section

June 1, 2026
ಮಾನವೀಯ ಮೌಲ್ಯಗಳ ಸರದಾರ ಅಂಬರೀಷ್: ಸುರೇಶ್ ಋಗ್ವೇದಿ

ಮಾನವೀಯ ಮೌಲ್ಯಗಳ ಸರದಾರ ಅಂಬರೀಷ್: ಸುರೇಶ್ ಋಗ್ವೇದಿ

June 1, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL