Monday, June 9, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ

ಶಿವಮೊಗ್ಗ ಜಿಲ್ಲೆ ರಾಜ್ಯದ ಪ್ರವಾಸೋದ್ಯಮ ಕ್ಷೇತ್ರದ ಆಕರ್ಷಣೀಯ ಕೇಂದ್ರವಾಗಿ ರೂಪುಗೊಳ್ಳಲಿದೆ: ಸಂಸದ ರಾಘವೇಂದ್ರ

ಸಕ್ರೆಬೈಲು ಆನೆಬಿಡಾರದಲ್ಲಿ ದೋಣಿ ವಿಹಾರಕ್ಕೆ ಚಾಲನೆ

July 1, 2022
in ಶಿವಮೊಗ್ಗ
0 0
0
Share on facebookShare on TwitterWhatsapp
Read - 3 minutes

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  |

ಶಿವಮೊಗ್ಗ ಸಮೀಪದ ಸಕ್ರೆಬೈಲು ಆನೆಗಳ ಬಿಡಾರಕ್ಕೆ ಹೊಂದಿಕೊಂಡಂತ್ತಿರುವ ತುಂಗಾ ಜಲಾಶಯದ ಹಿನ್ನೀರಿನ ಪ್ರದೇಶ ಹಾಗೂ ಸುತ್ತಮುತ್ತಲ ಪ್ರದೇಶವನ್ನು ಪ್ರವಾಸಿಗರ ಆಕರ್ಷಣೆಯ ಕೇಂದ್ರವಾಗಿ ಅಭಿವೃದ್ಧಿಪಡಿಸಲು ಕ್ರಿಯಾ ಯೋಜನೆಯೊಂದನ್ನು ರೂಪಿಸಿ ಅನುಷ್ಠಾನಗೊಳಿಸಲಾಗುವುದು ಎಂದು ಸಂಸದ ಬಿ.ವೈ.ರಾಘವೇಂದ್ರ MP Raghavendra ಅವರು ಹೇಳಿದರು.

ಅವರು ಇಂದು ಸಕ್ರೆಬೈಲು ಆನೆಗಳ ಬಿಡಾರಕ್ಕೆ Sakrebailu ಹೊಂದಿಕೊಂಡಿರುವ ತುಂಗಾ ಹಿನ್ನೀರಿನಲ್ಲಿ ಅರಣ್ಯ ವಸತಿ ಮತ್ತು ವಿಹಾರಧಾಮಗಳ ಸಂಸ್ಥೆಯ ವತಿಯಿಂದ ನೂತನವಾಗಿ ಆರಂಭಿಸಲಾಗಿರುವ ದೋಣಿವಿಹಾರವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು. ನಿಕಟಪೂರ್ವ ಮುಖ್ಯಮಂತ್ರಿಗಳಾಗಿದ್ದ ಬಿ.ಎಸ್.ಯಡಿಯೂರಪ್ಪನವರು ಈ ಹಿಂದೆಯೇ ಈ ಪ್ರದೇಶದ ಅಭಿವೃದ್ಧಿಗೆ ಸುಮಾರು 20ಕೋಟಿ ರೂ.ಗಳನ್ನು ಮಂಜೂರು ಮಾಡಿದ್ದು, ಉದ್ದೇಶಿತ ಕಾಮಗಾರಿಗಳನ್ನು ಶೀಘ್ರದಲ್ಲಿ ಆರಂಭಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು. ನಿಗಧಿಪಡಿಸಿದ ಕಾಲಮಿತಿಯಲ್ಲಿ ಇಲ್ಲಿನ ಅಭಿವೃದ್ಧಿ ಕಾಮಗಾರಿಗಳು ಆರಂಭಗೊಳ್ಳದಿರುವ ಬಗ್ಗೆ ಬೇಸರ ವ್ಯಕ್ತಪಡಿಸಿದರು.
ಶಿವಮೊಗ್ಗ ಜಿಲ್ಲೆ ಪ್ರವಾಸೋದ್ಯಮ ಕ್ಷೇತ್ರದಲ್ಲಿ ನಿರೀಕ್ಷೆಗೆ ಮೀರಿದ ಪ್ರಗತಿ ಸಾಧಿಸಲು ವಿಫುಲ ಅವಕಾಶಗಳಿರುವುದನ್ನು ಗುರುತಿಸಲಾಗಿದೆ. 460ಕೋಟಿ ರೂ.ಗಳ ವೆಚ್ಚದಲ್ಲಿ ಅಂಬಾರಗೋಡ್ಲು-ಕಳಸವಳ್ಳಿ ಯೋಜನೆ, 1ಕೋಟಿ ರೂ.ವೆಚ್ಚದಲ್ಲಿ ಹೊಸನಗರದ ಕೋಟೆ, 2ಕೋಟಿ ರೂ.ಗಳ ವೆಚ್ಚದಲ್ಲಿ ಕವಲೇದುರ್ಗ, 2ಕೋಟಿ ರೂ.ಗಳ ವೆಚ್ಚದಲ್ಲಿ ಶಿವಪ್ಪನಾಯಕನ ಅರಮನೆ, ಅಕ್ಕಮಹಾದೇವಿ ಜನ್ಮಸ್ಥಳ ಉಡುಗಣಿ, ವಿಶೇಷವಾಗಿ ವಿಶ್ವವಿಖ್ಯಾತ ಜೋಗ ಜಲಪಾತದ ಅಭಿವೃದ್ಧಿಗೆ ವಿಶೇಷ ಅನುದಾನ ಬಿಡುಗಡೆ ಮಾಡಲಾಗಿದ್ದು, ಈಗಾಗಲೇ ಅಭಿವೃದ್ಧಿ ಕಾಮಗಾರಿಗಳನ್ನು ಆರಂಭಿಸಲಾಗಿದೆ ಎಂದರು.

Also read: ನೂತನ ಶಿಕ್ಷಣ ನೀತಿ ಬಹು ಶಿಸ್ತಿನ ಕಲಿಕಾ ಕ್ರಮ: ರಾಬರ್ಟ್ ಜೋಸ್ ಅಭಿಪ್ರಾಯ

ಅಲ್ಲದೇ ಇಲ್ಲಿನ ಲಯನ್ ಸಫಾರಿಯ ವಿಸ್ತೃತ ಅಭಿವೃದ್ಧಿ ಕಾಮಗಾರಿಗಳಿಗೆ ಕೇಂದ್ರ ಸರ್ಕಾರವು ಅಗತ್ಯ ಅನುದಾನ ಬಿಡುಗಡೆ ಮಾಡಿ ಮಂಜೂರಾತಿ ನೀಡಿದೆ. ಖಾಸಗಿ ಸಹಭಾಗಿತ್ವದಲ್ಲಿ ಕೊಲ್ಲೂರು-ಕೊಡಚಾದ್ರಿ ನಡುವೆ ಸಂಪರ್ಕ ಕಲ್ಪಿಸುವ ಕೇಬಲ್‌ಕಾರ್ ಅಳವಡಿಸುವ 1000 ಕೋ.ವೆಚ್ಚದ ಕಾಮಗಾರಿಗೆ ಮಂಜೂರಾತಿ ದೊರೆತಿದ್ದು, ಟೆಂಡರ್ ಪ್ರಕ್ರಿಯೆ ಪ್ರಗತಿಯಲ್ಲಿದೆ. ಹೊಸನಗರ ಮತ್ತು ಕೊಲ್ಲೂರಿಗೆ 2 ಘಂಟೆಗಳ ಸುದೀರ್ಘ ಹಾದಿಯಿದೆ. ಇದನ್ನು ರಾಷ್ಟ್ರೀಯ ಹೆದ್ದಾರಿಯಾಗಿ ಕೇಂದ್ರ ಸರ್ಕಾರವು ಘೋಷಿಸಿದೆ. ಇದರಿಂದಾಗಿ ಹೊಸನಗರ ಮತ್ತು ಕೊಲ್ಲೂರು ನಡುವೆ ನೇರ ರಸ್ತೆ ಸಂಪರ್ಕ ಕಲ್ಪಿಸಿ 15ನಿಮಿಷದಲ್ಲಿ ಪ್ರಯಾಣ ಪೂರ್ಣಗೊಳಿಸುವ 400ಕೋಟಿ ರೂ.ಗಳ ಯೋಜನೆಗೆ ಸರ್ಕಾರವು ಈಗಾಗಲೆ 150ಕೋಟಿ ರೂ.ಗಳನ್ನು ಬಿಡುಗಡೆಗೊಳಿಸಿದೆ ಎಂದರು.

ಪ್ರಸ್ತುತ ಜಿಲ್ಲೆಯಲ್ಲಿ ಕೈಗೊಂಡಿರುವ ಅಭಿವೃದ್ಧಿ ಕಾರ್ಯಕ್ರಮಗಳಿಂದಾಗಿ ಕೆಲವೇ ವರ್ಷಗಳಲ್ಲಿ ಶಿವಮೊಗ್ಗ ಜಿಲ್ಲೆಯ ಭೌಗೋಳಿಕ ಚಿತ್ರಣವೇ ಬದಲಾಗಿ, ರಾಜ್ಯದ ಪ್ರವಾಸೋದ್ಯಮ ಕ್ಷೇತ್ರದ ಆಕರ್ಷಣೀಯ ಕೇಂದ್ರವಾಗಿ ರೂಪುಗೊಳ್ಳಲಿದೆ. ಮಾತ್ರವಲ್ಲ ದಿನಂಪ್ರತಿ ಸಹಸ್ರಾರು ಸಂಖ್ಯೆಯ ಪ್ರವಾಸಿಗರು ಆಗಮಿಸುವ ನಿರೀಕ್ಷೆ ಇದೆ ಎಂದರು.
ದೂರದೃಷ್ಠಿಯ ಹಾಗೂ ಇಚ್ಚಾಶಕ್ತಿ ಹೊಂದಿರುವ ಜನಪ್ರತಿ ಇದ್ದಲ್ಲಿ ನಿರೀಕ್ಷಿತ ಅಭಿವೃದ್ದಿ ಕಾಮಗಾರಿಗಳನ್ನು ಕೈಗೊಳ್ಳಲು ಸಾಧ್ಯವಾಗಲಿದೆ. ಪ್ರಸ್ತುತ ಸಕ್ರೆಬೈಲಿನ ಹಿನ್ನೀರಿನ ದೋಣಿವಿಹಾರ ಮತ್ತು ಇಲ್ಲಿನ ಪ್ರಾಕೃತಿಕ ಸೊಬಗು ಅತ್ಯಾಕರ್ಷಕವಾಗಿದ್ದು, ಪ್ರವಾಸಿಗರನ್ನು ಸೆಳೆಯುವುದರಲ್ಲಿ ಸಂಶಯವಿಲ್ಲ. ಈ ದೋಣಿ ವಿಹಾರ ಕೇಂದ್ರವು ಅತ್ಯಲ್ಪ ಕಾಲದಲ್ಲಿ ಪೂರ್ಣಪ್ರಮಾಣದಲ್ಲಿ ಅಭಿವೃದ್ಧಿಗೊಂಡು ಕಾರ್ಯನಿರ್ವಹಿಸಲಿದೆ ಎಂದರು.

ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ವಿಧಾನಪರಿಷತ್ ಸದಸ್ಯ ಡಿ.ಎಸ್. ಅರುಣ್ ಮಾತನಾಡಿ, ಪ್ರವಾಸೋದ್ಯಮ ಕ್ಷೇತ್ರದಲ್ಲಿ ದೊಡ್ಡಪ್ರಮಾಣದಲ್ಲಿ ಉದ್ಯೋಗಾವಕಾಶಗಳಿವೆ. ಬಹುತೇಕ ರಾಷ್ಟçಗಳು ಪ್ರವಾಸೋದ್ಯಮವನ್ನೇ ಪ್ರಮುಖ ಆದಾಯದ ಮೂಲವನ್ನಾಗಿ ಅವಲಂಬಿಸಿವೆ ಎಂದರು.
ವಿಧಾನ ಪರಿಷತ್ ಸದಸ್ಯ ಆರ್. ರುದ್ರೇಗೌಡ ಮಾತನಾಡಿ, ಸಂಸದ ದೂರದೃಷ್ಠಿಯ ಚಿಂತನೆ, ಮತ್ತು ಆಲೋಚನೆಗಳ ಫಲಶೃತಿಯಿಂದಾಗಿ ಇಂತಹ ಅನೇಕ ಕಾರ್ಯಕ್ರಮಗಳನ್ನು ರೂಪಿಸಿ, ಅನುಷ್ಠಾನಗೊಳಿಸುವುದು ಸಾಧ್ಯವಾಗಿದೆ ಎಂದರು.

ಸಭೆಯಲ್ಲಿ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರಿ, ಉಪ ಅರಣ್ಯ ಸಂರಕ್ಷಣಾಧಿಕಾರಿ ಐ.ಎಂ.ನಾಗರಾಜ್, ಸಕ್ರೆಬೈಲಿನ ವ್ಯವಸ್ಥಾಪಕ ಎ.ಪಿ.ಕಿರಣ್, ಜಂಗಲ್ ಲಾಡ್ಜಸ್ ಮತ್ತು ರೆಸಾರ್ಟ್ನ ನಿರ್ದೇಶಕ ರಾಜೇಶ್ ಕಾಮತ್, ಜ್ಯೋತಿಪ್ರಕಾಶ್, ಬಳ್ಳೆಕರೆ ಸಂತೋಷ್, ಮಾಲತೇಶ್ ಸೇರಿದಂತೆ ನಿಗಮದ ಸದಸ್ಯರು, ಗ್ರಾ.ಪಂ.ಅಧ್ಯಕ್ಷೆ ಶ್ರೀಮತಿ ಜಯಶ್ರೀ, ಸ್ಥಳೀಯ ಸಂಸ್ಥೆಗಳ ಚುನಾಯಿತ ಪ್ರತಿನಿಧಿಗಳು, ಅಧಿಕಾರಿಗಳು ಹಾಗೂ ಗಣ್ಯರು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Kannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaLocal NewsMP RaghavendraNewsinKannadaNewsKannadaSakrebailuShimogaShivamoggaShivamogga Newsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್ಸಕ್ರೆಬೈಲು ಆನೆಗಳ ಬಿಡಾರಸಂಸದ ಬಿ.ವೈ. ರಾಘವೇಂದ್ರ
Previous Post

ನೂತನ ಶಿಕ್ಷಣ ನೀತಿ ಬಹು ಶಿಸ್ತಿನ ಕಲಿಕಾ ಕ್ರಮ: ರಾಬರ್ಟ್ ಜೋಸ್ ಅಭಿಪ್ರಾಯ

Next Post

ಮಾದಕ ವ್ಯಸನದ ದುಷ್ಪರಿಣಾಮಗಳ ಬಗ್ಗೆ ವಿದ್ಯಾರ್ಥಿಗಳಿಗೆ ಅರಿವು ಅಗತ್ಯ: ನ್ಯಾ. ಮಾನು 

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಮಾದಕ ವ್ಯಸನದ ದುಷ್ಪರಿಣಾಮಗಳ ಬಗ್ಗೆ ವಿದ್ಯಾರ್ಥಿಗಳಿಗೆ ಅರಿವು ಅಗತ್ಯ: ನ್ಯಾ. ಮಾನು 

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಬೈಲಾ ಅಂಗೀಕಾರ ಹಿಂಪಡೆಯುವಂತೆ ಕನ್ನಡ ನಾಡು ನುಡಿ ಜಾಗೃತಿ ಸಮಿತಿ ಆಗ್ರಹ

June 9, 2025

ಪರಿಸರ, ವಿಜ್ಞಾನ ಮಕ್ಕಳ ಬೌದ್ಧಿಕ ಮಟ್ಟ ಸುಧಾರಿಸುವಲ್ಲಿ ಸಹಕಾರಿ: ಡಾ. ಸಿದ್ಧಲಿಂಗಮೂರ್ತಿ

June 9, 2025

ಕೇರಳ | ಸರಕು ಸಾಗಾಣೆ ಹಡಗಿನಲ್ಲಿ ಬೆಂಕಿ: 18 ಸಿಬ್ಬಂದಿಗಳ ರಕ್ಷಣೆ

June 9, 2025

ಭೀಕರ ಅಪಘಾತ | ರೈಲಿನಿಂದ ಬಿದ್ದು ಐವರು ಪ್ರಯಾಣಿಕರು ಸಾವು

June 9, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಬೈಲಾ ಅಂಗೀಕಾರ ಹಿಂಪಡೆಯುವಂತೆ ಕನ್ನಡ ನಾಡು ನುಡಿ ಜಾಗೃತಿ ಸಮಿತಿ ಆಗ್ರಹ

June 9, 2025

ಪರಿಸರ, ವಿಜ್ಞಾನ ಮಕ್ಕಳ ಬೌದ್ಧಿಕ ಮಟ್ಟ ಸುಧಾರಿಸುವಲ್ಲಿ ಸಹಕಾರಿ: ಡಾ. ಸಿದ್ಧಲಿಂಗಮೂರ್ತಿ

June 9, 2025

ಕೇರಳ | ಸರಕು ಸಾಗಾಣೆ ಹಡಗಿನಲ್ಲಿ ಬೆಂಕಿ: 18 ಸಿಬ್ಬಂದಿಗಳ ರಕ್ಷಣೆ

June 9, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!