ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ನಗರದ ನವುಲೆ ಬಡಾವಣೆಯಲ್ಲಿ ಮನೆಗಳ್ಳತನ ನಡೆದಿದ್ದು, ಚಿನ್ನ, ಬೆಳ್ಳಿ ಆಭರಣ ಹಾಗೂ ನಗದು ಹಣವನ್ನು ಕಳ್ಳತನ ಮಾಡಲಾಗಿದೆ ಎಂದು ವರದಿಯಾಗಿದೆ.
ಇಲ್ಲಿನ ಕುರುಬರ ಬೀದಿಯ ಮನೆಯೊಂದರಲ್ಲಿ ಯಾರೂ ಇಲ್ಲದ ವೇಳೆ ಬಾಗಿಲಿನ ಬೀಗ ಮುರಿದು, ಕಪಾಟು ಒಡೆದು ಕಳ್ಳತನ ಮಾಡಲಾಗಿದೆ.
Also read: ಪುಸ್ತಕ ಪ್ರಿಯರಿಗೆ ಸಿಹಿಸುದ್ಧಿ | ಕ್ರಿಯೇಟಿವ್ ಪುಸ್ತಕ ಮನೆಯಲ್ಲಿ ಸಿಗಲಿಗೆ ಶೇ.50ರವರೆಗೂ ರಿಯಾಯ್ತಿ
25 ಸಾವಿರ ರೂ. ನಗದು, ಚಿನ್ನ, ಬೆಳ್ಳಿ ಆಭರಣಗಳು ಸೇರಿ ಒಟ್ಟು 74,650 ರೂ. ಮೌಲ್ಯದ ವಸ್ತುಗಳು ಕಳ್ಳತನವಾಗಿದೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.
ವಿನೋಬನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post