ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಜೂ.20ರಿಂದ 3ದಿನಗಳ ಕಾಲ ಕಲ್ಲಗಂಗೂರು ಶ್ರೀರಾಮಕೃಷ್ಣ ವಿವೇಕಾನಂದ ಆಶ್ರಮದಲ್ಲಿ ಆಶ್ರಮದ #Shri Ramakrishna Vivekanandashram ಸ್ಥಾಪನೆಯ 19ನೇಯ ವಾರ್ಷಿಕೋತ್ಸವದ ಅಂಗವಾಗಿ ಯುವ ಸಮ್ಮೇಳನ ಹಾಗೂ ವಿಶೇಷ ಉಪನ್ಯಾಸಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಆಶ್ರಮದ ಶ್ರೀ ವಿನಯಾನಂದ ಸರಸ್ವತಿ ಸ್ವಾಮೀಜಿಯವರು ತಿಳಿಸಿದರು.
ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಆಧ್ಯಾತ್ಮ ಬೆಳವಣ ಗೆಯಲ್ಲಿ ತನ್ನದೇ ಆದ ಪಾತ್ರವನ್ನು ವಹಿಸುತ್ತಿರುವ ಶ್ರೀರಾಮಕೃಷ್ಣ ವಿವೇಕಾನಂದ ಆಶ್ರಮವು 2005ರಲ್ಲಿ ಇಲ್ಲಿ ಆರಂಭವಾಗಿದ್ದು, ಇಲ್ಲಿಯವರೆಗೂ ಹಲವಾರು ಧಾರ್ಮಿಕ, ಆಧ್ಯಾತ್ಮಿಕ, ಸಾಮಾಜಿಕ ಮತ್ತು ಶೈಕ್ಷಣ ಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಬಂದಿದೆ ಎಂದು ಮಾಹಿತಿ ನೀಡಿದರು.

ಪ.ಪೂ.ಸ್ವಾಮಿ ವಿನಯಾನಂದ ಸರಸ್ವತಿ, ಪ.ಪೂ.ಸ್ವಾಮಿ ಪ್ರಕಾಶಾನಂದಜೀ ಮತ್ತು ಪ.ಪೂ. ಶ್ರೀ ಜ್ಞಾನಂದ ಸ್ವಾಮೀಜಿಯವರು ದಿವ್ಯಾ ಸಾನಿಧ್ಯವನ್ನು ವಹಿಸಲಿದ್ದಾರೆ ಎಂದು ಅವರು ತಿಳಿಸಿದರು.

ಶಿವಮೊಗ್ಗ ಮಹಾನಗರ ಪಾಲಿಕೆ ಆಯುಕ್ತರಾದ ಮಾಯಣ್ಣಗೌಡರವರು ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ.
ಜೂ.21ರ ಶುಕ್ರವಾರ ಸಂಜೆ 5.30ಕ್ಕೆ ವಿಪ್ರ ಟ್ರಸ್ಟ್ನಲ್ಲಿ ಹರಿಹರದ ರಾಮಕೃಷ್ಣ ವಿವೇಕಾನಂದಶ್ರಾಮದ ಸ್ವಾಮಿ ಶಾರದೇಶಾನಂದಜೀ ಮಹಾರಾಜ್ರವರು ಶ್ರೀ ಶಾರದಾ ದೇವಿಯವರ ಜೀವನ ಮತ್ತು ಸಾಧನೆಯ ಕುರಿತು ಪ್ರವಚನ ನೀಡಲಿದ್ದಾರೆ. ಶಾಸಕರಾದ ಎಸ್.ಎನ್.ಚನ್ನಬಸಪ್ಪ ಮುಖ್ಯ ಅತಿಥಿಗಳಾಗಿ ಆಗಮಿಸುವರು. ಪ.ಪೂ.ಶ್ರೀ ವಿನಾಯನಂದ ಸ್ವಾಮೀಜಿ, ಪ್ರಕಾಶನಂದಸ್ವಾಮೀಜಿ ಮತ್ತು ಶ್ರೀಜ್ಞಾನನಂದ ಸ್ವಾಮೀಜಿಯವರು ಉಪಸ್ಥಿತರಿರುವರು ಎಂದು ತಿಳಿಸಿದರು.

ಈ ಎಲ್ಲಾ ಕಾರ್ಯಕ್ರಮಗಳಲ್ಲಿ ಪ್ರತಿನಿತ್ಯ ವೇದಘೋಷ, ಶ್ರೀ ಲಲಿತಾ ಸಹಸ್ರನಾಮ ಪಾರಾಯಣ, ಭಾಗವಾನ್ ನಾಮ ಸಂಕೀರ್ತನ ಮೊದಲಾದ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಕರ್ನಾಟಕ ಸಂಘದ ಅಧ್ಯಕ್ಷರಾದ ಎಂ.ಎನ್.ಸುAದರರಾಜ್, ದಾನಿಗಳಾದ ಡಾ.ಚಿಕ್ಕಸ್ವಾಮಿ, ಸೂರ್ಯನಾರಾಯಣ, ರೇಣುಕೇಶ್, ನಾಗೇಂದ್ರ ಶಿರೂರ್ಕರ್, ಶ್ರೀಕಾಂತ ಮೊದಲಾದವರು ಇದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news









Discussion about this post