ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಶಿವಮೊಗ್ಗ: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ನಗರದ ಸಿಟಿ ಕರಾಟೆ ಅಸೋಸಿಯೇಷನನ್ನು ನಿರ್ಲಕ್ಷಿಸುತ್ತಿದೆ ಎಂದು ಆರೋಪಿಸಿ ಶಿವಮೊಗ್ಗ ಸಿಟಿ ಕರಾಟೆ ಅಸೋಸಿಯೇಷನ್ ನೇತೃತ್ವದಲ್ಲಿ ಇಂದು ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು.
9 ವರ್ಷಗಳಿಂದ ನೆಹರೂ ಕ್ರೀಡಾಂಗಣದಲ್ಲಿ ಉಚಿತವಾಗಿ ಕರಾಟೆ ತರಬೇತಿ ನೀಡುತ್ತ ಬಂದಿದೆ. ಸ್ಮಾರ್ಟ್ ಸಿಟಿ ಕಾಮಗಾರಿ ಆರಂಭವಾದ ನಂತರ ಕ್ರೀಡಾಂಗಣದ ಹೊರಗಡೆಯೆ ತರಬೇತಿ ನೀಡಲಾಗುತ್ತಿತ್ತು. ಈಗ ಕ್ರೀಡಾಂಗಣದ ನೂತನ ಕಟ್ಟಡದಲ್ಲಿ ನಮಗೆ ಸ್ಥಳಾವಕಾಶ ನೀಡುತ್ತಿಲ್ಲ. ಹಾಗೂ ಸ್ಮಾರ್ಟ್ ಸಿಟಿ ಕಾಮಗಾರಿಗೆ ಸಂಬಂಧಪಟ್ಟ ಸಭೆಗಳಿಗೆ ಕರಾಟೆ ಸಂಘದ ಪದಾಧಿಕಾರಿಗಳನ್ನು ಆಹ್ವಾನಿಸದೆ, ಸಂಸ್ಥೆಯನ್ನು ಸಂಪೂರ್ಣ ನಿರ್ಲಕ್ಷಿಸಲಾಗುತಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.
ನಮಗೆ ಜಾಗವಿಲ್ಲದೆ ತುಂಬಾ ತೊಂದರೆಯಾಗಿದೆ. ಈಗಿರುವ ಹೊಸ ಕಟ್ಟಡದಲ್ಲೇ ನಮ್ಮ ಸಂಘಕ್ಕೆ ಸ್ಥಳಾವಕಾಶ ನೀಡಬೇಕು ಮತ್ತು ಸ್ಮಾರ್ಟ್ಸಿಟಿ ಕಾಮಗಾರಿಗೆ ಸಂಬಂಧಪಟ್ಟ ಸಭೆಗಳಿಗೆ ನಮ್ಮ ಸಂಘದ ಪದಾಧಿಕಾರಿಗಳಿಗೆ ಆಹ್ವಾನ ನೀಡಬೇಕು ಎಂದು ಮನವಿಯಲ್ಲಿ ಒತ್ತಾಯಿಸಿದ್ದಾರೆ.
ಶಿವಮೊಗ್ಗ ಸಿಟಿ ಕರಾಟೆ ಅಸೋಸಿಯೇಷನ್ ಅವರ ಈ ಪ್ರತಿಭಟನೆಗೆ ರಾಜ್ಯ ನಾಗರೀಕರ ರಕ್ಷಣಾ ಸಮಿತಿ ಬೆಂಬಲ ವ್ಯಕ್ತಪಡಿಸಿದೆ. ಈ ಸಂದರ್ಭದಲ್ಲಿ ಸಿಟಿ ಕರಾಟೆ ಅಸೋಸಿಯೇಷನ್ ಜಿಲ್ಲಾಧ್ಯಕ್ಷ ಶಿವಮೊಗ್ಗ ವಿನೋದ್, ನಾಗರೀಕ ರಕ್ಷಣಾ ಸಮಿತಿಯ ಪ್ರಧಾನ ಕಾರ್ಯದರ್ಶಿ ರಾಘವೇಂದ್ರ ಸೇರಿದಂತೆ ಹಲವರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post