ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಆಯನೂರಿನ ಸರ್ಕಾರಿ ಶಾಲೆಯ ಶಿಕ್ಷಕರೊಬ್ಬರಲ್ಲಿ ಮಂಗನಕಾಯಿಲೆ (ಕೆಎಫ್ಡಿ) ಪತ್ತೆಯಾಗಿದೆ.
ಇದೇ ತಿಂಗಳಲ್ಲಿ ಕಂಡುಬಂದ ಎರಡನೇ ಪ್ರಕರಣ ಇದು. ಶಾಲೆಯ ಶಿಕ್ಷಕ ರಾಘವೇಂದ್ರ ಅವರಲ್ಲಿ ಸೋಂಕು ಪತ್ತೆಯಾಗಿದ್ದು, ಮಣಿಪಾಲದ ಆಸ್ಪತ್ರೆಗೆ ದಾಖಲಿಸಲಾಗಿದೆ.
ಅವರು ಒಂದು ವಾರದಿಂದ ಶಿವಮೊಗ್ಗದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಒಂದೇ ತಿಂಗಳಲ್ಲಿ ಎರಡನೇ ಪ್ರಕರಣ ಪತ್ತೆಯಾಗಿರುವುದು ಮಲೆನಾಡಿಗರಲ್ಲಿ ಆತಂಕ ಮೂಡಿಸಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post