ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ನಗರದ ನಿವಾಸಿಯೊಬ್ಬರಿಗೆ ಸಲ್ಲಬೇಕಾದ ವೈದ್ಯಕೀಯ ವಿಮಾ ವೆಚ್ಚವನ್ನು ಬಡ್ಡಿ ಸಹಿತ ಮರು ಪಾವತಿ ಮಾಡಬೇಕು ಎಂದು ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗ ಆದಿತ್ಯ ಬಿರ್ಲಾ ಹೆಲ್ತ್ ಇನ್ಷೂರೆನ್ಸ್ ಕಂಪೆನಿಗೆ #Aditya Birla Health Insurance Company ಆದೇಶ ನೀಡಿದೆ.
ಏನಿದು ಪ್ರಕರಣ?
ಎಚ್. ಪ್ರೇಮಾ ಮತ್ತು ಬಿ.ಎಸ್. ಹುಚ್ಚರಾಯಪ್ಪ ದಂಪತಿಗಳು ಆದಿತ್ಯ ಬಿರ್ಲಾ ಹೆಲ್ತ್ ಇನ್ಷೂರೆನ್ಸ್ ಕಂಪೆನಿಯಿಂದ ಆರೋಗ್ಯ ವಿಮಾ ಪಾಲಿಸಿ ಪಡೆದಿದ್ದರು.
ಹೇಮ ಇವರು ನಾರಾಯಣ ಹೃದಯಾಲಯದಲ್ಲಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದು ಸುಮಾರು 3 ಲಕ್ಷ ರೂ.ವರೆಗೆ ವೈದ್ಯಕೀಯ ವೆಚ್ಚ ಭರಿಸಿದ್ದಾರೆ. ವೈದ್ಯಕೀಯ ವೆಚ್ಚವನ್ನು ಪಾಲಿಸಿ ನಿಯಮಗಳ ಪ್ರಕಾರ ಮರು ಪಾವತಿಸುವಂತೆ ಕೋರಿದ್ದಾರೆ.
Also read: ಮೇ 30ರಂದು ನೂರಾರು ಸಂಘಟನೆಗಳಿಂದ ಹಾಸನ ಚಲೋ ಬೃಹತ್ ಪ್ರತಿಭಟನೆ | ಕಾರಣವೇನು?
ಆದರೆ, ವಿಮಾ ಕಂಪನಿಯು ಅರ್ಜಿದಾರರು ವಿಮಾ ಪಾಲಿಸಿ ಪಡೆಯುವ ಪೂವ್ 5 ವರ್ಷಗಳಿಂದ ಸಕ್ಕರೆ ಖಾಯಿಲೆ ಮತ್ತು ಅಧಿಕ ರಕ್ತದ ಒತ್ತಡ ಖಾಯಿಲೆಗಳು ಇರುವ ಸಂಗತಿ ಮಾರೆ ಮಾಚಿದ್ದಾರೆ. ಇದು ವಿಮಾ ಪಾಲಿಸಿಯಾ ನಿಬಂಧನೆಗಳ ಉಲ್ಲಂಘನೆಯಾಗಿರುವುದರಿಂದ, ಅರ್ಜಿದಾರರು ವೈದ್ಯಕೀಯ ಪರಿಹಾರ ಪಡೆಯಲು ಅರ್ಹ ಆಗಿರುವುದಿಲ್ಲ ಎಂದು ತಿಳಿಸಿದ್ದಾರೆ.
ಪ್ರಕರಣ ಸಂಬಂಧ ಆಯೋಗವು ಅರ್ಜಿದಾರರು ಹಾಜರುಪಡಿಸಿರುವ ದಾಖಲೆಗಳನ್ನು ಕೂಲಂಕಷವಾಗಿ ಪರಿಶೀಲಿಸಿ, ಎದುರುದಾರರು ಕೇವಲ ತಾಂತ್ರಿಕ ಕಾರಣಗಳ ಆಧಾರದ ಮೇಲೆ ಅರ್ಜಿದಾರರಿಗೆ ವೈದ್ಯಕೀಯ ವೆಚ್ಚವನ್ನು ಮರುಪಾವತಿಸದಿರುವುದು ಸೇವಾನ್ಯೂನ್ಯತೆ ಎಂದು ಪರಿಗಣಿಸಿ ಪ್ರಕರಣವನ್ನು ಭಾಗಶಃ ಪುರಸ್ಕರಿಸಿದೆ.
ಈ ಹಿನ್ನೆಲೆಯಲ್ಲಿ ಆದಿತ್ಯ ಬಿರ್ಲಾ ವಿಮಾ ಕಂಪೆನಿಯು ಅರ್ಜಿದಾರರಿಗೆ ರೂ.1,76,951 ಗಳ ವೈದ್ಯಕೀಯ ವೆಚ್ಚವನ್ನು ಶೇ.9% ಬಡ್ಡಿ ಸಮೇತ ಮರುಪಾವತಿಸಬೇಕು. ತಮ್ಮ ಸೇವಾ ನ್ಯೂನತೆಯಿಂದಾಗಿ ಉಂಟಾದ ಮಾನಸಿಕ ಹಿಂಸೆ ಮತ್ತು ಹಾನಿಗಳಿಗೆ ಸಂಬಂಧಿಸಿದಂತೆ ಪರಿಹಾರ ಹಾಗೂ ರೂ.30,000 ಗಳನ್ನು ಮತ್ತು ವ್ಯಾಜ್ಯದ ಖರ್ಚು-ವೆಚ್ಚಗಳ ಬಾಬ್ತು ರೂ. 10,000ಗಳನ್ನು ಪಾವತಿಸಬೇಕು ಎಂದು ಆದೇಶಿಸಿದೆ.
ಆಯೋಗದ ಅಧ್ಯಕ್ಷರಾದ ಟಿ. ಶಿವಣ್ಣ, ಸದಸ್ಯರಾದ ಸವಿತಾ ಬಿ. ಪಟ್ಟಣಶೆಟ್ಟಿ, ಬಿ.ಡಿ. ಯೋಗಾನಂದ ಬಾಂಡ್ಯ ಅವರಿದ್ದ ಪೀಠವು ಈ ಆದೇಶ ನೀಡಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post