No Result
View All Result
Indian Railway Fine Hike
English Articles

Jan Vishwas Act 2026: Revised Railway Penalty Rules Likely from July 1

by ಕಲ್ಪ ನ್ಯೂಸ್
June 23, 2026
2

Kalpa Media House  | New Delhi | The Indian Railways is set to implement revised penalty provisions under the Jan...

Read moreDetails
International Yoga Day in SWR Bengaluru

SWR | Celebrates International Yoga Day with Enthusiastic Participation

June 23, 2026
MODEL DEMOCRACY AT KRCS

Model Democracy At KRCS | Student Council Election Concluded Successfully

June 22, 2026
Naija Hegde’s Inspiring Rise to Success

From Coast to Glory: Naija Hegde’s Inspiring Rise to Success

June 21, 2026
ಡಾರ್ಲಿಂಗ್ ಕೃಷ್ಣ, ಮಿಲನಾ ನಾಗರಾಜ್ ಅಭಿನಯದ ‘ಲವ್ ಮಾಕ್‌ಟೇಲ್ 3’ ಜೂ.21ರಂದು ಜೀ ಕನ್ನಡದಲ್ಲಿ

Darling Krishna, Milana Nagaraj ’s Love Mocktail 3 Premieres This 21st on Zee Kannada

June 19, 2026
  • Advertise With Us
  • Grievances
  • About Us
  • Contact Us
Wednesday, June 24, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಶಿವಮೊಗ್ಗ | ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಾಗಿ ಸಿಮ್ಸ್ ಮೇಲ್ದರ್ಜೆಗೆ: ಸಚಿವ ಮಧು ಬಂಗಾರಪ್ಪ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
November 9, 2023
in ಶಿವಮೊಗ್ಗ
0
ಕೆಪಿಸಿಸಿ ಒಬಿಸಿ ಮೋರ್ಚಾ ಕಾರ್ಯಾಧ್ಯಕ್ಷರಾಗಿ ಮಧು ಬಂಗಾರಪ್ಪ ಆಯ್ಕೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   | ಶಿವಮೊಗ್ಗ |

ಶಿವಮೊಗ್ಗ ವೈದ್ಯಕೀಯ ವಿಜ್ಞಾನಗಳ ಮಹಾವಿದ್ಯಾಲಯವನ್ನು SIMS ಮೇಲ್ದರ್ಜೆಗೇರಿಸಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯನ್ನಾಗಿ ಪರಿವರ್ತಿಸಲು ಸಾಧ್ಯವಿರುವ ಎಲ್ಲಾ ಕ್ರಮಗಳನ್ನು ಕೈಗೊಂಡು ಜನಸಾಮಾನ್ಯರಿಗೆ ಅತ್ಯಂತ ಕಡಿಮೆ ದರದ ಹಾಗೂ ಗುಣಮಟ್ಟದ ಚಿಕಿತ್ಸಾ ಸೌಲಭ್ಯ ಒದಗಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ರಾಜ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮಧು ಎಸ್. ಬಂಗಾರಪ್ಪ Minister Madhu Bangarappa ಅವರು ಹೇಳಿದರು.

ಅವರು ಇಂದು ಸಿಮ್ಸ್ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ, ಅಲ್ಲಿನ ಆಡಳಿತಾಧಿಕಾರಿಗಳಿಂದ ಮಾಹಿತಿ ಪಡೆದು ಮಾತನಾಡುತ್ತಿದ್ದರು. ಹೃದಯ, ಕಿಡ್ನಿ, ಮೆದುಳು ಮುಂತಾದ ಗಂಭೀರ ಸ್ವರೂಪದ ಕಾಯಿಲೆಗಳಿಗೆ ಜನಸಾಮಾನ್ಯರು ಖರ್ಚುಗಳಿಗೆ ಹೆದರಿ ಚಿಕಿತ್ಸೆ ತೆಗೆದುಕೊಳ್ಳದೇ ನರಳಾಡುತ್ತಿದ್ದಾರೆ. ಅಂತಹವರಿಗೆ ಸುಲಭವಾಗಿ ಚಿಕಿತ್ಸೆ ದೊರೆಯುವಂತಾಗಬೇಕು ಎಂದರು.
ಸಿಮ್ಸ್’ಗೆ ಅಗತ್ಯವಿರುವ ಬಹುತೇಕ ಸೌಲಭ್ಯಗಳನ್ನು ಈಗಾಗಲೇ ಒದಗಿಸಲಾಗಿದೆ. ಅಗತ್ಯವಿರುವ ಇನ್ನಷ್ಟು ಭೌತಿಕ ಕಟ್ಟಡಗಳು, ಮಾನವ ಸಂಪನ್ಮೂಲ ಸೌಲಭ್ಯಗಳ ಒದಗಿಸುವುದರ ಜೊತೆಗೆ ಇನ್ನಷ್ಟು ಅತ್ಯಾಧುನಿಕ ಯಂತ್ರಗಳನ್ನು ಅಳವಡಿಸಿ, ಜನಸಾಮಾನ್ಯರಿಗೆ ಉತ್ತಮ ದರ್ಜೆಯ ಹಾಗೂ ಗುಣಮಟ್ಟದ ಸೇವೆಗಳನ್ನು ಒದಗಿಸುವಂತೆ ಮಾಡುವ ಆಶಯ ತಮ್ಮದಾಗಿದೆ. ಆದ್ದರಿಂದ ಸಿಮ್ಸ್ ಆಡಳಿತಾಧಿಕಾರಿಗಳು ಅಗತ್ಯವಿರುವ ಕಟ್ಟಡಗಳು, ಮಾನವ ಸಂಪನ್ಮೂಲ ಹಾಗೂ ಯಂತ್ರಗಳನ್ನು ಕಲ್ಪಿಸಿಕೊಳ್ಳಲು ಕ್ರಿಯಾಯೋಜನೆಯನ್ನು ರೂಪಿಸಿ, ಸರ್ಕಾರಕ್ಕೆ ಸಲ್ಲಿಸುವಂತೆ ಅವರು ಸೂಚಿಸಿದರು.

ಸಿಮ್ಸ್’ನಲ್ಲಿ ಚಿಕಿತ್ಸೆಗೆ ಆಗಮಿಸುವ ವಿವಿಧ ಕಾಯಿಲೆಗಳನ್ನು ಗುರುತಿಸುವ ಅನೇಕ ಯಂತ್ರಗಳು, ಪರೀಕ್ಷಾ ಲ್ಯಾಬ್’ಗಳನ್ನು ಇನ್ನಷ್ಟು ಉನ್ನತೀಕರಿಸುವುದರ ಜೊತೆಗೆ ಸಿಬ್ಬಂಧಿಗಳನ್ನು ನಿಯೋಜಿಸಬೇಕಾದ ಅಗತ್ಯವಿದೆ. ಕೊರೋನ ಮಾದರಿಯಲ್ಲಿಯೇ ಕೆಎಫ್’ಡಿಯಂತಹ ಮಾರಣಾಂತಿಕ ಕಾಯಿಲೆಗಳ ಪ್ರಾಥಮಿಕ ಸಂಶೋಧನೆಗಳು ಇಲ್ಲಿಯೇ ನಡೆಯುವಂತಾಗಬೇಕು. ಮುಂದಿನ 20 ವರ್ಷಗಳ ದೂರದೃಷ್ಠಿಯನ್ನು ಇಟ್ಟುಕೊಂಡು ಕಾರ್ಯಯೋಜನೆ ರೂಪಿಸುವಂತೆ ಅವರು ಸಲಹೆ ನೀಡಿದರು.
ಸಿಮ್ಸ್’ನಲ್ಲಿ ಗುಣಮಟ್ಟದ ಸೇವೆ ಸಿಗುವಂತೆ ಮಾಡಿದರೆ, ಖಾಸಗಿ ಆಸ್ಪತ್ರೆಯಲ್ಲಿ ಹೆಚ್ಚಿನ ಬೆಲೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿರುವ ಜನಸಾಮಾನ್ಯರು ಸಿಮ್ಸ್’ಗೆ ಧಾವಿಸುತ್ತಾರೆ. ಇದರಿಂದಾಗಿ ಜನರಿಗೆ ಕಡಿಮೆ ದರದಲ್ಲಿ ಉತ್ತಮ ಸೇವೆ ದೊರೆಯಲಿದೆ ಹಾಗೂ ಸಿಮ್ಸö್ನ ಆದಾಯ ಮೂಲವೂ ಹೆಚ್ಚಳವಾಗಿ ನಿರ್ವಹಣೆ ಸುಲಭವಾಗಲಿದೆ. ಈ ವಿಷಯದಲ್ಲಿ ಸಿಮ್ಸ್ ಆಡಳಿತಾಧಿಕಾರಿಗಳು ಹಾಗೂ ಸಿಬ್ಬಂದಿಗಳು ವಿಶೇಷ ಗಮನಹರಿಸಬೇಕಾದ ಅಗತ್ಯವಿದೆ ಎಂದರು.

Also read: ಜಿಲ್ಲೆಯ 3 ನಗರ ಮೂಲಕ ಬೆಂಗಳೂರಿಗೆ ಪಲ್ಲಕ್ಕಿ ಬಸ್ ಸೇವೆ | ಎಲ್ಲಿಂದ? ಟೈಮಿಂಗ್ ಏನು?

ಪ್ರಸ್ತುತ ಸಿಮ್ಸ್’ನಲ್ಲಿ ಸೇವೆ ಸಲ್ಲಿಸುತ್ತಿರುವ ವೈದ್ಯಾಧಿಕಾರಿಗಳು, ಪ್ರಶಿಕ್ಷಣಾರ್ಥಿಗಳು, ಆರೋಗ್ಯ ಸಿಬ್ಬಂಧಿಗಳಿಗೆ ಇನ್ನಷ್ಟು ವಸತಿ ಗೃಹಗಳ ಅಗತ್ಯವಿದೆ. ಅದಕ್ಕಾಗಿ ಹೊಸದೊಂದು ವಸತಿ ಸಮುಚ್ಛಯ ನಿರ್ಮಿಸುವ ಅಗತ್ಯವಿದೆ. ಇನ್ನೂ ಹಲವು ವೈದ್ಯಕೀಯ ವಿಭಾಗಗಳಿಗೆ ಪ್ರತ್ಯೇಕ ಹಾಗೂ ಹೆಚ್ಚುವರಿ ಕಟ್ಟಡಗಳ ಅಗತ್ಯವಿದೆ. ಡಿ.ಗ್ರೂಪ್ ನೌಕರರ ಸೇವೆ ತುರ್ತಾಗಿ ಬೇಕಾಗಿದೆ ಎಂದು ಸಿಮ್ಸ್ ಆಡಳಿತಾಧಿಕಾರಿಗಳು ಸಭೆಯಲ್ಲಿ ಸಚಿವರ ಗಮನಸೆಳೆದರು. ಆಗ ಈ ಎಲ್ಲ ಸೌಲಭ್ಯವನ್ನು ಆದ್ಯತೆಯ ಮೇರೆಗೆ ಒದಗಿಸಲು ಕ್ರಮ ವಹಿಸುವುದಾಗಿ ಹೇಳಿದರು.
ಸರ್ಕಾರಕ್ಕೆ ವಿವಿಧ ಬೇಡಿಕೆಗಳ ಪ್ರಸ್ತಾವನೆ ಜೊತೆಗೆ ತುರ್ತು ಹಾಗೂ ತೀವ್ರ ನಿಗಾ ಘಟಕದ ಸ್ಥಾಪನೆಗೂ ಕ್ರಿಯಾಯೋಜನೆಯನ್ನು ರೂಪಿಸಿ ಸಲ್ಲಿಸುವಂತೆ ಅವರು ಸಿಮ್ಸ್ ಆಡಳಿತಾಧಿಕಾರಿಗಳಿಗೆ ಸೂಚಿಸಿದರು.

ಮೆಗ್ಗಾನ್’ನಲ್ಲಿ McGann ದಾಖಲಾಗುವ ಸಿಬ್ಬಂದಿಗಳ ಜೊತೆಗೆ ಆರೈಕೆಗೆಂದು ಬರುವವರಿಗಾಗಿ ಅತ್ಯಂತ ಕಡಿಮೆ ಹಾಗೂ ಸುಸಜ್ಜಿತ ವಸತಿ ಸೌಲಭ್ಯವನ್ನು ಒದಗಿಸಲು ಪ್ರತ್ಯೇಕ ಕೊಠಡಿಗಳ ಅಗತ್ಯವಿರುವುದನ್ನು ತಿಳಿದಿದ್ದು, ಅದಕ್ಕಾಗಿ ತಾತ್ಕಾಲಿಕ ವ್ಯವಸ್ಥೆ ಒದಗಿಸಲು ಹಾಗೂ ಜನರ ಅನುಕೂಲಕ್ಕಾಗಿ ಗ್ರಂಥಾಲಯ ಸೌಲಭ್ಯವನ್ನು ಕಲ್ಪಿಸಲು ಸೂಚಿಸಿರುವುದಾಗಿ ಅವರು ತಿಳಿಸಿದರು.
ಸಭೆಯಲ್ಲಿ ಜಿಲ್ಲಾಧಿಕಾರಿ ಆರ್. ಸೆಲ್ವಮಣಿ, ಸಿಮ್ಸ್ ನಿರ್ದೇಶಕ ಡಾ. ವಿರೂಪಾಕ್ಷಪ್ಪ, ಮೆಗ್ಗಾನ್ ಜಿಲ್ಲಾ ಅಧೀಕ್ಷಕ ತಿಮ್ಮಪ್ಪ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ರಾಜೇಶ್ ಸುರಗೀಹಳ್ಳಿ ಸೇರಿದಂತೆ ಸಿಮ್ಸ್ ವಿವಿಧ ವಿಭಾಗಗಳ ವೈದ್ಯಾಧಿಕಾರಿಗಳು, ಅಧಿಕಾರಿ-ಸಿಬ್ಬಂದಿಗಳು ಉಪಸ್ಥಿತರಿದ್ದರು.

http://kalpa.news/wp-content/uploads/2023/05/VID-20230516-WA0005.mp4

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Kalahamsa Infotech private limited

Tags: KannadaNewsKannadaNewsLiveKannadaNewsOnline ShivamoggaKannadaNewsWebsiteKannadaWebsiteLatestNewsKannadaLocalNewsMalnadNewsNewsinKannadaNewsKannadaShimogaShivamoggaShivamoggaNewsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಜಿಲ್ಲೆಯ 3 ನಗರ ಮೂಲಕ ಬೆಂಗಳೂರಿಗೆ ಪಲ್ಲಕ್ಕಿ ಬಸ್ ಸೇವೆ | ಎಲ್ಲಿಂದ? ಟೈಮಿಂಗ್ ಏನು?

Next Post

ಅಕ್ರಮ ವಿದ್ಯುತ್ ಸಂಪರ್ಕದ ತಂತಿಗೆ ಬಲಿಯಾಯ್ತು ಗಂಡು ಕಾಡಾನೆ | ದೂರು ದಾಖಲು

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಅಕ್ರಮ ವಿದ್ಯುತ್ ಸಂಪರ್ಕದ ತಂತಿಗೆ ಬಲಿಯಾಯ್ತು ಗಂಡು ಕಾಡಾನೆ | ದೂರು ದಾಖಲು

ಅಕ್ರಮ ವಿದ್ಯುತ್ ಸಂಪರ್ಕದ ತಂತಿಗೆ ಬಲಿಯಾಯ್ತು ಗಂಡು ಕಾಡಾನೆ | ದೂರು ದಾಖಲು

Leave a Reply Cancel reply

Your email address will not be published. Required fields are marked *

No Result
View All Result
Indian Railway Fine Hike
English Articles

Jan Vishwas Act 2026: Revised Railway Penalty Rules Likely from July 1

by ಕಲ್ಪ ನ್ಯೂಸ್
June 23, 2026
2

Kalpa Media House  | New Delhi | The Indian Railways is set to implement revised penalty provisions under the Jan...

Read moreDetails
International Yoga Day in SWR Bengaluru

SWR | Celebrates International Yoga Day with Enthusiastic Participation

June 23, 2026
MODEL DEMOCRACY AT KRCS

Model Democracy At KRCS | Student Council Election Concluded Successfully

June 22, 2026
Naija Hegde’s Inspiring Rise to Success

From Coast to Glory: Naija Hegde’s Inspiring Rise to Success

June 21, 2026
ಡಾರ್ಲಿಂಗ್ ಕೃಷ್ಣ, ಮಿಲನಾ ನಾಗರಾಜ್ ಅಭಿನಯದ ‘ಲವ್ ಮಾಕ್‌ಟೇಲ್ 3’ ಜೂ.21ರಂದು ಜೀ ಕನ್ನಡದಲ್ಲಿ

Darling Krishna, Milana Nagaraj ’s Love Mocktail 3 Premieres This 21st on Zee Kannada

June 19, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL