ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಬಸ್ ಚಾಲಕನಿಗೆ ಖಾರದಪುಡಿ ಎರಚಿ ಚಾಕುವಿನಿಂದ ಇರಿದಿರುವ ಘಟನೆ ಶರಾವತಿ ನಗರದಲ್ಲಿ ನಡೆದಿದೆ.
ಸಿಟಿ ಬಸ್ ಚಾಲಕ ರವಿ ಕುಮಾರ್ (34) ಚಾಕು ಇರಿತಕ್ಕೆ ಒಳಗಾದವರು ಎಂದು ಗುರುತಿಸಲಾಗಿದ್ದು, ರವಿಕುಮಾರ್ ಅವರಿಗೆ ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ, ಹೆಚ್ಚಿನ ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ತಿಳಿದುಬಂದಿದೆ.
Also read: Uber Driver on the Brink of Death Saved by Doctors from Medicover Hospital Traveling in the Same Car
ಅಡುಗೆ ಕಂಟ್ರಾಕ್ಟರ್ ಅರುಣ್ ಎಂಬಾತ ಹಳೆಯ ದ್ವೇಶದ ಹಿನ್ನಲೆಯಲ್ಲಿ ರವಿಕುಮಾರ್ ಗೆ ಚಾಕು ಇರಿದಿದ್ದಾರೆ ಎನ್ನಲಾಗಿದ್ದು, ಹಲ್ಲೆಯ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.
ಈ ಸಂಬಂಧ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post