ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ತುಂಗಾ ನದಿ #Tunga river ಗಾಜನೂರು ಡ್ಯಾಮ್ ನ #Gajnur Dam ಎಲ್ಲಾ ಗೇಟ್ಗಳನ್ನು ತೆರೆದಿದ್ದು ಅಧಿಕ ಪ್ರಮಾಣದ ನೀರು ಹೊರಗೆ ಹರಿಸಿರುವುದರಿಂದ ನದಿ ಪಾತ್ರದ ಜನರಿಗೆ ಆತಂಕ ಶುರುವಾಗಿದೆ.
ನೆನ್ನೆ ರಾತ್ರಿಯಿಂದಲೆ ಪಾಲಿಕೆ ವತಿಯಿಂದ ಧ್ವನಿವರ್ಧಕದ ಮೂಲಕ ನದಿಪಾತ್ರದ ಜನರಿಗೆ ಮುನ್ನೆಚ್ಚರಿಕೆ ನೀಡಲಾಗುತ್ತಿದ್ದು ನೀರಿನ ಹರಿವಿನಲ್ಲಿ ಇನ್ನೂ ಹೆಚ್ಚಳವಾದರೆ ಕೆಲವೊಂದು ಪ್ರದೇಶಗಳಿಗೆ ನೀರು ನುಗ್ಗುವ ಸಾಧ್ಯತೆ ಇದೆ.
ನಗರದ ಶಾಂತಮ್ಮ ಲೇಔಟ್, ಸೀಗೆಹಟ್ಟಿ ಕುಂಬಾರ ಗುಂಡಿ, ರಾಜೀವ್ ಗಾಂಧಿ ಬಡಾವಣೆ, ಆರ್ ಟಿ ನಗರ, ನಿಸರ್ಗ ಬಡಾವಣೆ ಹಾಗೂ ವಿದ್ಯಾನಗರ 13 ಮತ್ತು 14ನೇ ಕ್ರಾಸಿನ ಜನರಿಗೆ ಸುರಕ್ಷಿತ ಸ್ಥಳಕ್ಕೆ ತೆರಳಲು ಸೂಚಿಸಲಾಗಿದೆ.
Also read: ಪೂಜಾರಿ ಎಂದು ಹೆಸರು ಹೇಳಿಕೊಂಡು ಮಹಿಳೆ ಮೇಲೆ ಅತ್ಯಾಚಾರ: ಆರೋಪಿ ಬಂಧನ
ನಗರದ ರಿವರ್ ಫ್ರೆಂಟ್ ಭವನ, ಬಾಪೂಜಿನಗರ ಸರ್ಕಾರಿ ಶಾಲೆ, ರಾಮಣ್ಣ ಶ್ರೇಷ್ಟಿ ಪಾರ್ಕ್, ಸೀಗೆಹಟ್ಟಿ ಸರ್ಕಾರಿ ಶಾಲೆಯಲ್ಲಿ ಈಗಾಗಲೇ ಪಾಲಿಕೆ ವತಿಯಿಂದ ಕಾಳಜಿ ಕೇಂದ್ರವನ್ನು ತೆರೆಯಲಾಗಿದ್ದು, ನಿನ್ನೆ ರಾತ್ರಿ 15 ಕುಟುಂಬಗಳಿಗೆ ಆಹಾರ ನೀಡಲಾಗಿದೆ ಎಂದು ಮಹಾನಗರ ಪಾಲಿಕೆ ಮೂಲಗಳು ತಿಳಿಸಿವೆ.
ತಡರಾತ್ರಿಯವರೆಗೆ ಪಾಲಿಕೆ ಆಯುಕ್ತರೇ ಖುದ್ದಾಗಿ ತಗ್ಗುಪ್ರದೇಶಗಳಿಗೆ ಭೇಟಿ ನೀಡಿ ಪರಿಸ್ಥಿತಿಯನ್ನು ಅವಲೋಕಿಸಿ ಅಧಿಕಾರಿಗಳಿಗೆ ಸೂಕ್ತ ಕ್ರಮಕ್ಕೆ ಸೂಚಿಸಿದ್ದಾರೆ. ಶಾಸಕ ಚನ್ನಬಸಪ್ಪನವರು ಗಾಜನೂರು ಡ್ಯಾಂಗೆ ಮತ್ತು ನೀರು ಸರಬರಾಜು ಘಟಕಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಿ, ಅಧಿಕಾರಿಗಳಿಗೆ ಸೂಕ್ತ ನಿರ್ದೇಶನ ನೀಡಿದ್ದಾರೆ.
ಕೃಷ್ಣರಾಜೇಂದ್ರ ನೀರು ಸರಬರಾಜು ಘಟಕದಲ್ಲಿ ತೀವ್ರ ಮಳೆಯಿಂದಾಗಿ ನೀರಿನ ಮಟ್ಟ ಹೆಚ್ಚಳವಾದ ಕಾರಣ ಮೋಟಾರ್ ಮುಳುಗಿ ಹೋಗಿದ್ದು, ಎರಡು ಮೂರು ದಿನ ನೀರು ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ ಎಂದು ಜಲಮಂಡಳಿಯ ಅಧಿಕಾರಿಗಳು ತಿಳಿಸಿದ್ದಾರೆ.
ಯಾವುದೇ ಆತಂಕದ ಪರಿಸ್ಥಿತಿ ಎದುರಾದರೂ ಕೂಡ ಮಹಾನಗರ ಪಾಲಿಕೆ ಸನ್ನದ್ಧವಾಗಿದೆ ಎಂದು ಪಾಲಿಕೆಯ ಆಯುಕ್ತರು ಹೇಳಿಕೆ ನೀಡಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post