ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಜಿಲ್ಲೆಯಲ್ಲಿ ದಕ್ಷತೆ ಮತ್ತು ಪ್ರಾಮಾಣಿಕತೆಯಿಂದ ಸೇವೆ ಸಲ್ಲಿಸಿದ .ಕೆ .ಬಿ. ಶಿವಕುಮಾರ್ ಅವರನ್ನು ರಾಜ್ಯ ಸರ್ಕಾರ ದಿಢೀರ್ ವರ್ಗಾವಣೆ ಮಾಡಿದ್ದು , ಅವರ ಸ್ಥಾನಕ್ಕೆ ಕೋಲಾರದ ಜಿಲ್ಲಾಧಿಕಾರಿಯಾಗಿದ್ದ ಸೆಲ್ವಮಣಿ (2013 ನೇ ಬ್ಯಾಚಿನ ಐಎಎಸ್ ಅಧಿಕಾರಿ) ರವರನ್ನು ಸರ್ಕಾರ ವರ್ಗಾಯಿಸಿ ಆದೇಶ ನೀಡಿದೆ.
ಇಂದು ಬೆಳಿಗ್ಗೆ ನೂತನ ಜಿಲ್ಲಾಧಿಕಾರಿಯಾಗಿ ಅಧಿಕಾರ ಸ್ವೀಕರಿಸಿದ ಸೆಲ್ವಮಣಿ ಮಾತನಾಡಿ, ಶಿವಕುಮಾರ್ ಅವರು ಜಿಲ್ಲೆಯಲ್ಲಿ ನಿಷ್ಠೆ, ಪ್ರಾಮಾಣಿಕತೆ ಮತ್ತು ದಕ್ಷತೆಯಿಂದ ಸೇವೆ ಸಲ್ಲಿಸಿದ್ದು ಕೆಲವು ಮಾಫಿಯಾಗಳು ಅದರಲ್ಲೂ ಮುಖ್ಯವಾಗಿ ಹುಣಸೋಡು ಕ್ರಷರ್ ಮತ್ತು ಕಲ್ಲು ಮಾಫಿಯಾ ಮತ್ತು ಕೆಲವು ಭೂ ಮಾಫಿಯಾಗಳು ಅವರ ವಿರುದ್ಧ ವರ್ಗಾವಣೆಗೆ ಕಾರ್ಯಾಚರಣೆ ನಡೆಸಿದ್ದಾರೆ ಎಂದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news



















