ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ನಗರದಲ್ಲಿ ವಿವಿಧ ಕಾರಣಗಳಿಂದಾಗಿ ರದ್ದಾಗಿರುವ ಸುಮಾರು 5 ಸಾವಿರ ಬಿಪಿಎಲ್ ಪಡಿತರ ಚೀಟಿಗಳನ್ನು BPL Card ಪುನಃ ಪರಿಶೀಲಿಸಬೇಕು ಎಂದು ಜಿಲ್ಲಾ ಕಾಂಗ್ರೆಸ್ ಮುಖಂಡ ಕೆ. ಚೇತನ್ ಅವರು ಆಹಾರ ಸಚಿವ ಕೆ.ಎಚ್. ಮುನಿಯಪ್ಪ Minister Muniyappa ಅವರಿಗೆ ಮನವಿ ಮಾಡಿದ್ದಾರೆ.
ಬೆಂಗಳೂರಿನ ಆಹಾರ ನಿಗಮದ ಕಚೇರಿಯಲ್ಲಿ ಮೇ 21ರಂದು ಸಚಿವರನ್ನು ಭೇಟಿಯಾಗಿ ಮನವಿ ಸಲ್ಲಿಸಿರುವ ಚೇತನ್ ಅವರು, ಪುನಃ ಪರಿಶೀಲನೆ ನಡೆಸಿ, ಬಡವರಿಗೆ ನ್ಯಾಯ ಒದಗಿಸಿಕೊಡಬೇಕು ಎಂದು ಮನವಿ ಮಾಡಿದ್ದಾರೆ.
ನಗರದ ಹೊರವಲಯ ಗೋಪಾಳಗೌಡ ಬಡಾವಣೆ ಬಳಿ ಆಹಾರ ಇಲಾಖೆಯ ಅನೌಪಚಾರಿಕ ಪಡಿತರ ಕಚೇರಿ ಕಾರ್ಯನಿರ್ವಹಣೆ ಮಾಡುತ್ತಿದೆ. ಸದರಿ ಸ್ಥಳಕ್ಕೆ ತೆರಳಲು ನಾಗರಿಕರು ತೀವ್ರ ತೊಂದರೆ ಪಡುವಂತಾಗಿದೆ. ಸೂಕ್ತ ಸಿಟಿ ಬಸ್ ಗಳ ವ್ಯವಸ್ಥೆಯೂ ಇಲ್ಲದಿರುವುದರಿಂದ ದುಬಾರಿ ಹಣ ತೆತ್ತು ಬಾಡಿಗೆ ವಾಹನಗಳಲ್ಲಿ ಓಡಾಡುವಂತಾಗಿದೆ. ಈ ಹಿನ್ನೆಲೆಯಲ್ಲಿ ಸದರಿ ಕಚೇರಿಯನ್ನು ವಿನೋಬನಗರ ಪೊಲೀಸ್ ಚೌಕಿ ಸರ್ಕಲ್ ಸಮೀಪದ ಪ್ರಾಧಿಕಾರದ ಕಟ್ಟಡಕ್ಕೆ ಸ್ಥಳಾಂತರಿಸಬೇಕು. ಇದರಿಂದ ನಾಗರಿಕರಿಗೆ ಸಾಕಷ್ಟು ಅನುಕೂಲವಾಗಲಿದೆ ಎಂದು ಮನವಿ ಮಾಡಿದ್ದಾರೆ.
Also read: ಅಬ್ಬಬ್ಬಾ! ಒಂದು ದೇಶ-ಒಂದು ಚುನಾವಣೆ ನಡೆದರೆ ಉಳಿತಾಯವಾಗುವ ಹಣವೆಷ್ಟು ಗೊತ್ತಾ?
ಭೇಟಿ, ಮನವಿಯ ಪ್ರಮುಖಾಂಶಗಳು:
- ವಿವಿಧ ಕಾರಣಗಳಿಂದ ಶಿವಮೊಗ್ಗದಲ್ಲಿ 5000 ಬಿಪಿಎಲ್ ಪಡಿತರ ಚೀಟಿ ರದ್ದು
- ಬಡವರು, ಕೂಲಿ ಕಾರ್ಮಿಕರ ಕಾರ್ಡ್’ಗಳು ರದ್ದು
- ಪುನಃ ಪರಿಶೀಲನೆ ನಡೆಸಿ, ಬಡವರಿಗೆ ನ್ಯಾಯ ಒದಗಿಸಬೇಕು
- ಅಧಿಕಾರಿಗಳಿಂದ ವಸ್ತುಸ್ಥಿತಿಯ ಪರಿಶೀಲನೆ ನಡೆಸಬೇಕು
- ಅರ್ಹ ಫಲಾನುಭವಿಗಳ ಕಾರ್ಡ್’ಗಳನ್ನು ಮತ್ತೆ ಮರು ಚಾಲನೆಗೊಳಿಸಿ
ಸಚಿವರು ಹೇಳಿದ್ದೇನು?
ಚೇತನ್ ಅವರ ಮನವಿಯನ್ನು ಆಲಿಸಿದ ನಂತರ ಮಾತನಾಡಿದ ಸಚಿವ ಮುನಿಯಪ್ಪ, ಈ ಕುರಿತಾಗಿ ಪರಿಶೀಲನೆ ನಡೆಸಿ, ಅಗತ್ಯ ಕ್ರಮಕೈಗೊಳ್ಳುತ್ತೇವೆ. ಅರ್ಹ ಫಲಾನುಭವಿಗಳಿಗೆ ನ್ಯಾಯ ಒದಗಿಸಲಾಗುವುದು ಎಂದು ಭರವಸೆ ನೀಡಿದರು.
ಕಾವೇರಿ ಹ್ಯಾಂಡ್ ಲೂಮ್ ಅಧ್ಯಕ್ಷ ಗಣೇಶ್ ಸೇರಿದಂತೆ ಇತರರು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 

















