ಕಲ್ಪ ಮೀಡಿಯಾ ಹೌಸ್
ಶಿವಮೊಗ್ಗ: ಕೊರೋನಾದಂತಹ ಸಂದರ್ಭದಲ್ಲಿ ಆರ್ಥಿಕವಾಗಿ ದುರ್ಬಲರಾದವರಿಗೆ ಸಹಾಯಹಸ್ತ ನೀಡುವುದು ಮಾನವೀಯತೆ ಗುಣ ಎಂದು ಸಂಸದ ಬಿ.ವೈ. ರಾಘವೇಂದ್ರ ಹೇಳಿದರು.
ಇಂದು ದೈವಜ್ಞ ಕಲ್ಯಾಣ ಮಂದಿರದಲ್ಲಿ ಸಂಸ್ಕೃತಿ ಫೌಂಡೇಷನ್ ವತಿಯಿಂದ ಆಯೋಜಿಸಿದ್ದ ಬಡವರಿಗೆ ಕಿಟ್ ನೀಡುವ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಕೋವಿಡ್ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಸಾವು-ನೋವುಗಳು ಉಂಟಾಗುತ್ತಿವೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಕೋವಿಡ್ ನಿಯಂತ್ರಿಸಲು ಹಗಲು, ರಾತ್ರಿ ಶ್ರಮಿಸುತ್ತಿವೆ. ಜಿಲ್ಲೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್. ಈಶ್ವರಪ್ಪ ಅವರು ಕೋವಿಡ್ ನಿಯಂತ್ರಣಕ್ಕಾಗಿ ಓಡಾಡುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ನಾವೆಲ್ಲರೂ ತುಂಬಾ ಎಚ್ಚರಿಕೆಯಿಂದ ಹೆಜ್ಜೆ ಇಡಬೇಕಾಗಿದೆ ಎಂದರು.
ಸಂಸ್ಕೃತಿ ಫೌಂಡೇಷನ್ ಬಡವರಿಗೆ ಆಹಾರದ ಕಿಟ್ಗಳನ್ನು ನೀಡುವ ಮೂಲಕ ಮಾನವೀಯತೆ ಮೆರೆದಿದೆ. ಸಂಘ-ಸಂಸ್ಥೆಗಳು ಒಳ್ಳೆಯ ರೀತಿಯಲ್ಲಿ ಕೆಲಸ ಮಾಡುತ್ತಿರುವುದು ಸ್ವಾಗತಾರ್ಹ ವಿಷಯವಾಗಿದ್ದು, ಇಂತಹ ಸಂಸ್ಥೆಗಳು ಮತ್ತಷ್ಟು ಹೆಚ್ಚಾಗಲಿ ಎಂದು ಅವರನ್ನು ಅಭಿನಂದಿಸಿದರು.
ಸಂಸ್ಕೃತಿ ಫೌಂಡೇಷನ್ನ ಸದಸ್ಯ ಪ್ರವೀಣ್ ಮಾತನಾಡಿ, ಇಂದು 200 ಕುಟುಂಬಗಳಿಗೆ ಆಹಾರದ ಕಿಟ್ ನೀಡಲಾಗುತ್ತಿದೆ. ಕೊರೋನಾದ ಸಂದರ್ಭದಲ್ಲಿ ಅತ್ಯಂತ ಕಷ್ಟದಲ್ಲಿರುವವರನ್ನು ಫೌಂಡೇಷನ್ ಗುರುತಿಸಿದೆ. ಅವರಿಗೆ ಕಿಟ್ ನೀಡಲಾಗುವುದು. ಇದರ ಹಿಂದೆ ಇತರೆ ಸಂಸ್ಥೆಗಳು ಕೂಡ ಸಹಾಯ ಮಾಡಿವೆ ಎಂದರು,
ಈ ಸಂದರ್ಭದಲ್ಲಿ ಸೂಡಾ ಅಧ್ಯಕ್ಷ ಎಸ್ಎಸ್. ಜ್ಯೋತಿಪ್ರಕಾಶ್, ಸಂಸ್ಕೃತಿ ಫೌಂಡೇಶನ್ ಅಧ್ಯಕ್ಷ ರೋಹಿತ್ ರಂಗಸ್ವಾಮಿ, ಉಪಾಧ್ಯಕ್ಷರಾದ ಪ್ರದೀಪ್, ಉಮೇಶ್, ಸದಸ್ಯರಾದ ಉಲ್ಲಾಸ್, ಸುಬ್ಬರಾವ್, ಶರಣ್, ಸುಮನ್, ಪ್ರವೀಣ್ ಸೇರಿದಂತೆ ಹಲವರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post