ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಮಹಾನಗರಪಾಲಿಕೆಯ 2022-23 ನೇ ಸಾಲಿನ ಆಯ-ವ್ಯಯವನ್ನು ತಯಾರಿಸುವ ಬಗ್ಗೆ ಸಾರ್ವಜನಿಕರ ಹಾಗೂ ಸಂಘ-ಸಂಸ್ಥೆಗಳ ಮೊದಲನೇ ಹಂತದ ಪೂರ್ವಭಾವಿ ಸಮಾಲೋಚನಾ ಸಭೆಯನ್ನು ಫೆ.16 ರ ಬೆಳಿಗ್ಗೆ 11 ಗಂಟೆಗೆ ಮಹಾಪೌರರಾದ ಸುನೀತಾ ಅಣ್ಣಪ್ಪ ಇವರ ಅಧ್ಯಕ್ಷತೆಯಲ್ಲಿ ಪಾಲಿಕೆಯ ಸಭಾಂಗಣದಲ್ಲಿ ಆಯೋಜಿಸಲಾಗಿದೆ.
ನಗರದ ನಾಗರೀಕರು ಹಾಗೂ ಸಂಘ-ಸಂಸ್ಥೆಯವರು ಈ ಸಭೆಗೆ ಹಾಜರಾಗಿ ತಮ್ಮ ಸಲಹೆ ಸೂಚನೆಗಳನ್ನು ನೀಡಬೇಕೆಂದು ಪಾಲಿಕೆ ಆಯುಕ್ತ ಚಿದಾನಂದ ಎಸ್ ವಟಾರೆ ಕೋರಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post