ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ತಮ್ಮ ಮನೆಯ ಮುಂದೆ ಕಸ ಹಾಕಬೇಡಿ ಎಂದು ಹೇಳಿದ ಕ್ಷುಲ್ಲಕ ಕಾರಣಕ್ಕೆ ಮಹಿಳೆಯೊಬ್ಬರು 67 ವರ್ಷದ ವೃದ್ಧೆಯನ್ನು ಕಂಬಕ್ಕೆ ಕಟ್ಟಿ ಹಲ್ಲೆ ಮಾಡಿರುವ ಘಟನೆ ಸಾಗರ ತಾಲೂಕಿನ ಆನಂದಪುರದಲ್ಲಿ ನಡೆದಿದೆ.
ಈ ಕುರಿತಂತೆ ವರದಿಯಾಗಿದ್ದು, ಆನಂದಪುರ ಸಮೀಪದ ಗೌತಮಪುರ ಗ್ರಾಮದಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಹುಚ್ಚಮ್ಮ ಹಲ್ಲೆಗೊಳಗಾದ ವೃದ್ಧೆ ಎಂದು ಗುರುತಿಸಲಾಗಿದೆ.
ಕಳೆದ ಜೂ.24ರಂದು ಈ ಘಟನೆ ನಡೆದಿದೆ. ಹುಚ್ಚಮ್ಮ ಅವರು ಮನೆಯ ಪಕ್ಕದ ಪ್ರೇಮ ಎಂಬುವರಿಗೆ ನಮ್ಮ ಮನೆಯ ಮುಂಭಾಗ ಕಸವನ್ನು ಹಾಕಬೇಡಿ ಎಂದು ಹೇಳಿದ್ದಾರೆ. ಇದರಿಂದ ಸಿಟ್ಟಿಗೆದ್ದ ಪ್ರೇಮ, ವೃದ್ಧೆಯನ್ನು ಮನೆಯಿಂದ ಎಳೆದುಕೊಂಡು ಬಂದು ಕಂಬಕ್ಕೆ ಕಟ್ಟಿ ಹಲ್ಲೆ ನಡೆಸಿದ್ದಾರೆ.
ಹುಚ್ಚಮ್ಮನ ಪುತ್ರ ಕನ್ನಪ್ಪ ಈ ವಿಚಾರವನ್ನು ಗ್ರಾಮದ ಹಿರಿಯರಿಗೆ ಮುಟ್ಟಿಸಿದ್ದಾರೆ. ಆದರೆ, ಹಿರಿಯರು ಇದನ್ನು ನಿರ್ಲಕ್ಷಿಸಿದ್ದಾರೆ. ಕನ್ನಪ್ಪ ತಾಯಿಯೊಂದಿಗೆ ಆನಂದಪುರ ಪೊಲೀಸ್ ಠಾಣೆಗೆ ತೆರಳಿ ಹಲ್ಲೆ ಮಾಡಿದ ಪ್ರೇಮ, ಆಕೆಯ ಪತಿ ಮಂಜುನಾಥ್, ಪುತ್ರ ದರ್ಶನ್ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post