ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಇಲ್ಲಿನ ಪಂಚವಟಿ ಕಾಲೋನಿಯಲ್ಲಿರುವ RSS ಕಚೇರಿ #RSS Office ಮಧುಕೃಪಾದಲ್ಲಿ #Madhukripa ಅಗ್ನಿ ಅನಾಹುತ ಸಂಭವಿಸಿದ್ದು, ಅದೃಷ್ಟವಶಾತ್ ಯಾವುದೇ ಅನಾಹುತ ಸಂಭವಿಸಿಲ್ಲ.
ಮಧುಕೃಪದ ಎರಡನೇ ಮಹಡಿಯ ಕೊನೆಯ ಕೊಠಡಿಯಲ್ಲಿ ಅಗ್ನಿ ಕಾಣಿಸಿಕೊಂಡಿದ್ದು, ಯಾವುದೇ ದೊಡ್ಡ ಮಟ್ಟದ ಅನಾಹುತ ಸಂಭವಿಸಿಲ್ಲ.
ಬೆಂಕಿಯ ಜ್ವಾಲೆಗೆ ಕೊಠಡಿಯ ಕೆಲವು ಹಾಸಿಗೆಗಳು, ಪ್ಲಾಸ್ಟಿಕ್ ಕುರ್ಚಿಗಳು ಸುಟ್ಟು ಕರಕಲಾಗಿವೆ. ಅಗ್ನಿ ಶಾಮಕ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಅಗ್ನಿ ಅನಾಹುತಕ್ಕೆ ಕಾರಣ ಏನು ಎಂಬುದು ತಿಳಿದು ಬಂದಿಲ್ಲ. ಹೆಚ್ಚಿನ ಮಾಹಿತಿ ತಿಳಿದುಬರಬೇಕಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post