ಕಲ್ಪ ಮೀಡಿಯಾ ಹೌಸ್
ಶಿವಮೊಗ್ಗ: ಮಹಾನಗರ ಪಾಲಿಕೆ ಮಹಾಪೌರರಾದ ಸುನೀತಾ ಅಣ್ಣಪ್ಪ ಅವರು ಇಂದು ಬೊಮ್ಮನಕಟ್ಟೆಗೆ ನೀಡಿ ಅಲ್ಲಿನ ನಿವಾಸಿಗಳ ಸಮಸ್ಯೆಯನ್ನು ಆಲಿಸಿದರು.
ಬೊಮ್ಮನಕಟ್ಟೆಯಲ್ಲಿ ಹಲವಾರು ವರ್ಷಗಳಿಂದ ವಾಸಿಸುತ್ತಿದ್ದು, ಸರಿಯಾದ ದಾಖಲೆ ಪತ್ರಗಳಿಲ್ಲದೆ ಸಮಸ್ಯೆ ಅನುಭವಿಸುತ್ತಿದ್ದೇವೆ ಎಂದು ಅಲ್ಲಿನ ಸ್ಥಳೀಯರು ಕೆಲವು ದಿನಗಳ ಹಿಂದೆ ಪಾಲಿಕೆಗೆ ಆಗಮಿಸಿ ತಮ್ಮ ಸಮಸ್ಯೆಯನ್ನು ಹೇಳಿಕೊಂಡಿದ್ದ ಹಿನ್ನೆಲೆಯಲ್ಲಿ ಮೇಯರ್ ಸುನಿತಾ ಅಣ್ಣಪ್ಪ ಅವರು ಬೊಮ್ಮನಕಟ್ಟೆಗೆ ಭೇಟಿ ನೀಡಿ, ಅಧಿಕಾರಿಗಳನ್ನು ಸ್ಥಳಕ್ಕೆ ಕರೆಸಿ ಅವರ ಸಮಸ್ಯೆಯನ್ನು ಆದಷ್ಟು ಬೇಗ ಬಗೆಹರಿಸಿಕೊಳ್ಳುವಂತೆ ತಿಳಿಸಿದರು.
ಈ ಸಂದರ್ಭದಲ್ಲಿ ಉಪ ಮೇಯರ್ ಶಂಕರ್, ಆಶ್ರಯ ಸಮಿತಿಯ ಅಧ್ಯಕ್ಷ ಶಶಿ, ಪಾಲಿಕೆಯ ಸ್ಥಾಯಿ ಸಮಿತಿಯ ಸದಸ್ಯ ಶಿವಕುಮಾರ್, ಅನಿತ ರವಿಶಂಕರ್, ವಾರ್ಡ್ನ ಸದಸ್ಯರಾದ ಆಶಾ ಚಂದ್ರಪ್ಪ ಹಾಗೂ ನಾಗರಿಕರು ಪಾಲಿಕೆ ಅಧಿಕಾರಿಗಳು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post