ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ವಿಶ್ವ ಆನೆ ದಿನಾಚರಣೆ ಹಿನ್ನೆಲೆಯಲ್ಲಿ #World Elephant Day ಇಂದು ಸಕ್ರೆಬೈಲಿನಲ್ಲಿ ಎರಡು ಆನೆ ಮರಿಗಳಿಗೆ ಶಾಸ್ತ್ರೋಕ್ತವಾಗಿ ನಾಮಕರಣ ಕಾರ್ಯಕ್ರಮ ಜರುಗಿತು.
ಪುರೋಹಿತ ಮಧು ಭಟ್ಟರ ನೇತೃತ್ವದಲ್ಲಿ ಸಂಪ್ರದಾಯದಂತೆ ಪೂಜೆ ಸಲ್ಲಿಸಿ, ಅರಣ್ಯ ಇಲಾಖೆಯ ಸಿಸಿಎಫ್ ಹನುಮಂತಪ್ಪ ಹಾಗೂ ಡಿಸಿಎಫ್ ಪ್ರಸನ್ನ ಕೃಷ್ಣ ಪಟಗಾರ್ ಆನೆಯ ಕಿವಿಗೆ ಮೂರು ಬಾರಿ ಹೆಸರು ಹೇಳುವ ಮೂಲಕ ಭಾನುಮತಿಯ ಮರಿಗೆ ಚಾಮುಂಡಿ, ನೇತ್ರಾವತಿ ಮರಿಗೆ ತುಂಗಾ ಎಂದು ನಾಮಕರಣ ಮಾಡಲಾಯಿತು.
ಈ ಸಂದರ್ಭದಲ್ಲಿ ಸಕ್ತೆಬೈಲಿನಲ್ಲಿ ಹಬ್ಬದ ವಾತವರಣ ನಿರ್ಮಾಣವಾಗಿತ್ತು ಹಾಗೂ ಬಿಡಾರದ 23 ಆನೆಗಳಿಗೆ ಬಣ್ಣಗಳಿಂದ ಸಿಂಗರಿಸಲಾಗಿತ್ತು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 




















