Friday, November 14, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ

ಶಿವಮೊಗ್ಗ | ಸರ್ಕಾರಿ ಅಧಿಕಾರಿ, ಸಿಬ್ಬಂದಿ ಮೇಲೆ ಹಲ್ಲೆ ಮಾಡಿದರೆ ನಿರ್ದಾಕ್ಷಿಣ್ಯ ಕ್ರಮ | ಡಿಸಿ ಖಡಕ್ ಎಚ್ಚರಿಕೆ

August 21, 2025
in ಶಿವಮೊಗ್ಗ
0 0
0
Share on facebookShare on TwitterWhatsapp
Read - 3 minutes

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಸೇವಾನಿರತ ಸರ್ಕಾರಿ ಇಲಾಖೆಗಳ ಅಧಿಕಾರಿ, ಸಿಬ್ಬಂಧಿಗಳ ಮೇಲೆ ಹಲ್ಲೆ ಮಾಡುವವರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕಾನೂನು ಕ್ರಮ ಕೈಗೊಳ್ಳಲಾಗುವುದು. ಸರ್ಕಾರಿ ನೌಕರರು ಯಾವುದೇ ಆತಂಕಗಳಿಲ್ಲದೇ ನಿರ್ಭೀತಿಯಿಂದ ಪ್ರಮಾಣಿಕವಾಗಿ ಜನಸಾಮಾನ್ಯರ ಸೇವೆಗೆ ಸಮರ್ಪಿಸಿಕೊಳ್ಳುವಂತೆ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ #DC Gurudatta Hegade ಅವರು ಹೇಳಿದರು.

ಅವರು ಇಂದು ತಮ್ಮ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಸರ್ಕಾರಿ ನೌಕರರ ಕುಂದು-ಕೊರತೆ, ಸಮಸ್ಯೆ, ಸೇವಾ ಸೌಲಭ್ಯಗಳ ತ್ವರಿತ ಸ್ಪಂದನೆಗಾಗಿ ರಚಿಸಲಾಗಿರುವ ಜಿಲ್ಲಾ ಮಟ್ಟದ ಜಂಟಿ ಸಮಾಲೋಚನಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು.
ನೌಕರರಿಗೆ ತಮ್ಮ ಕಾರ್ಯಕ್ಷೇತ್ರದಲ್ಲಿ ಯಾವುದೇ ಅಭದ್ರತೆ ಕಾಡದಂತೆ ನೋಡಿಕೊಳ್ಳಬೇಕಾದುದು ಹಾಗೂ ವ್ಯವಸ್ಥೆಗೆ ಪೂರಕವಾಗಿ ಸಹಕರಿಸಬೇಕಾದುದು ನಾಗರೀಕರೆಲ್ಲರ ಕರ್ತವ್ಯವಾಗಿದೆ. ಸಾರ್ವಜನಿಕ ಜೀವನದಲ್ಲಿ ಕಾರ್ಯನಿರ್ವಹಿಸುವ ನೌಕರರಿಗೆ ಸೂಕ್ತ ರಕ್ಷಣೆ ಸಿಗಬೇಕು. ಕರ್ತವ್ಯ ನಿರ್ವಹಿಸುವ ಸಂದರ್ಭದಲ್ಲಿ ನೌಕರರ ಮೇಲೆ ಸಲ್ಲದ ಕಾರಣಕ್ಕೆ ಹಲ್ಲೆಗೆ ಮುಂದಾಗುವುದು, ಅನುಚಿತವಾಗಿ ವರ್ತಿಸುವುದನ್ನು ಗಂಭೀರವಾಗಿ ಪರಿಗಣಿಸಿ, ಸೂಕ್ತ ದಂಡನೆಗೆ ಗುರುಪಡಿಸಲಾಗುವುದು ಎಂದರು.

ಇತ್ತೀಚಿನ ದಿನಗಳಲ್ಲಿ ಆರ್.ಟಿ.ಐ. ಅರ್ಜಿಗಳನ್ನು ಸಲ್ಲಿಸಿ, ಅಧಿಕಾರಿಗಳಿಗೆ ಇನ್ನಿಲ್ಲದಂತೆ ಕಾಡುವುದು, ಬೇಡಿಕೆ ಸಲ್ಲಿಸುವುದು, ಸೇವಾ ಕ್ಷೇತ್ರದಲ್ಲಿ ಅನಗತ್ಯ ಕಿರಿಕಿರಿ ಉಂಟು ಮಾಡುತ್ತಿರುವುದು ಕಂಡುಬರುತ್ತಿದೆ. ಅಲ್ಲದೇ ಪತ್ರಿಕೆಗಳಲ್ಲಿ ಆಧಾರರಹಿತ ಆರೋಪ ಮಾಡುವುದಲ್ಲದೇ ಅಸಂವಿಧಾನಿಕ ಪದಗಳ ಬಳಕೆ ಮಾಡುತ್ತಿರುವುದನ್ನೂ ಸಹ ಗಂಭೀರವಾಗಿ ಪರಿಗಣಿಸಲಾಗುವುದು. ಅಂತಹ ವ್ಯಕ್ತಿಗಳ ವಿರುದ್ಧ ಮೊಕದ್ದಮೆ ದಾಖಲಿಸಿ, ಕಾನೂನು ಕ್ರಮ ಕೈಗೊಳ್ಳುವುದು ಅನಿವಾರ್ಯವಾಗಲಿದೆ ಎಂದರು.
ಜಿಲ್ಲೆ, ನಗರ ಮತ್ತು ಪಟ್ಪಣ ಪ್ರದೇಶಗಳಲ್ಲಿ ನೌಕರರ ಬೇಡಿಕೆಗನುಗುಣವಾಗಿ ವಸತಿ ಗೃಹಗಳು ದೊರೆಯುತ್ತಿಲ್ಲ. ಅಲ್ಲದೇ ಹಲವು ದಶಕಗಳ ಹಿಂದೆ ನಿರ್ಮಾಣಗೊಂಡಿರುವ ಅನೇಕ ವಸತಿ ಗೃಹಗಳು ದುರಸ್ತಿ ಕಾಣದಿರುವುದನ್ನು ಕೂಡ ಗಮನಿಸಲಾಗಿದೆ. ಲಭ್ಯವಿರುವ ವಸತಿಗೃಹಗಳ ಹಂಚಿಕೆಯಲ್ಲಿ ಅನುಸರಿಸಬೇಕಾದ ಕ್ರಮಗಳ ಕುರಿತು ಚರ್ಚಿಸಿದ ಅವರು, ವಸತಿಗೃಹಗಳ ದುರಸ್ತಿ ಬಗ್ಗೆ ಲೋಕೋಪಯೋಗಿ ಇಲಾಖಾ ಅಧಿಕಾರಿಗಳೊಂದಿಗೆ ಚರ್ಚಿಸಿ ಅಗತ್ಯ ಕ್ರಮಕ್ಕೆ ಸೂಚಿಸಲಾಗುವುದು ಎಂದರು.

ರಾಜ್ಯ ಸರ್ಕಾರಿ ನೌಕರರ ಆರೋಗ್ಯ ಸುರಕ್ಷತೆಗಾಗಿ ಜಾರಿಯಾಗಿರುವ ನಗದು ರಹಿತ ಆರೋಗ್ಯ ಸೇವೆ ಒದಗಿಸುವ ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆಯ ಸಮರ್ಪಕ ಅನುಷ್ಟಾನದಿಂದಾಗಿ ಸಾವಿರಾರು ಕುಟುಂಬಗಳು ಉತ್ತಮ ಗುಣಮಟ್ಟದ ಚಿಕಿತ್ಸೆ ಪಡೆಯಲು ಸಾಧ್ಯವಾಗಲಿದೆ. ಈ ಮಹತ್ವಾಕಾಂಕ್ಷಿ ಯೋಜನೆಯಡಿ ಜಿಲ್ಲೆಯಲ್ಲಿ ವಿವಿಧ ಇಲಾಖೆಗಳ 16000 ನೌಕರರು ಹಾಗೂ ಅವರ ಕುಟುಂಬದ ಸದಸ್ಯರು ನಗದು ರಹಿತ ಆರೋಗ್ಯ ಸೌಲಭ್ಯವನ್ನು ಪಡೆದುಕೊಳ್ಳಲಿದ್ದಾರೆ. ಸರ್ಕಾರಿ ನೌಕರರಿಗೆ ದುಬಾರಿ ವೆಚ್ಚದ ಮಾರಣಾಂತಿಕ ಕಾಯಿಲೆಗಳು ಹಾಗೂ ಶಸ್ತ್ರ ಚಿಕಿತ್ಸೆ ಸೇರಿದಂತೆ ಬಹುತೇಕ ಕಾಯಿಲೆಗಳಿಗೆ ಉಚಿತ ಚಿಕಿತ್ಸೆ ದೊರೆಯಲಿದೆ ಎಂದರು.
ಈ ಯೋಜನೆಯಡಿ ಜಿಲ್ಲಾ ಕೇಂದ್ರಗಳಲ್ಲಿನ ಅನೇಕ ಆಸ್ಪತ್ರೆಗಳು ಆರೋಗ್ಯ ಸೇವೆ ಒದಗಿಸಲು ಈವರೆಗೆ ನೋಂದಣಿಯಾಗದಿರುವುದು ಕಂಡುಬಂದಿದೆ.  ನಗರದ ಪ್ರತಿಷ್ಠಿತ ಆಸ್ಪತ್ರೆಗಳ ಮುಖ್ಯಸ್ಥರೊಂದಿಗೆ ಚರ್ಚಿಸಿ, ಯೋಜನಾ ವ್ಯಾಪ್ತಿಗೊಳಪಟ್ಟು ಒಪ್ಪಂದ ಮಾಡಿಕೊಂಡು ನೌಕರರಿಗೆ ಅವರ ಕುಟುಂಬದ ಅವಲಂಬಿತರಿಗೆ ಆರೋಗ್ಯ ಸೇವೆ ಒದಗಿಸಲು ಮುಂದಾಗುವಂತೆ ಮನವಿ ಮಾಡಿಕೊಳ್ಳಲಾಗುವುದು ಎಂದರು.

ಸಭೆಯಲ್ಲಿ ಉಪಸ್ಥಿತರಿದ್ದ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಆರ್.ಮೋಹನ್ಕುಮಾರ್ಅವರು ಮಾತನಾಡಿ, ಕಾಲಕಾಲಕ್ಕೆ ಬದಲಾಗುತ್ತಿರುವ ಆಡಳಿತ ವ್ಯವಸ್ಥೆಗೆ ಪೂರಕವಾಗಿ ನೌಕರರೂ ಕೂಡ ಹೊಂದಿಕೊಳ್ಳಬೇಕಾಗಿದೆ. ಸೇವಾವಧಿಯಲ್ಲಿ ನೌಕರರಿಗೆ ಹೊಸದಾಗಿ ಅನುಷ್ಠಾನಗೊಳ್ಳುವ ವಿವಿಧ ಯೋಜನೆಗಳು, ಕಾಯ್ದೆಗಳ ಪೂರ್ಣ ಜ್ಞಾನ ಇರಬೇಕು. ಯೋಜನೆಗಳನ್ನು ಜನಸಾಮಾನ್ಯರಿಗೆ ತಲುಪಿಸುವಲ್ಲಿ ನೌಕರರಿಗೂ ಅರಿವು ಇರಬೇಕಾದುದು ಅಗತ್ಯ. ಈ ದಿಸೆಯಲ್ಲಿ ವಿವಿಧ ಯೋಜನೆಗಳು, ಕಾಯ್ದೆಗಳ ಅನುಷ್ಠಾನದ ಕುರಿತು ತರಬೇತಿ ಕಾರ್ಯಾಗಾರಗಳನ್ನು ಜಿಲ್ಲಾಡಳಿತ ಮತ್ತು ಆಡಳಿತ ಸುಧಾರಣಾ ಇಲಾಖೆ, ಜಿಲ್ಲಾ ತರಬೇತಿ ಸಂಸ್ಥೆಗಳ ಮೂಲಕ ಆಯೋಜಿಸಬೇಕು ಎಂದವರು ನುಡಿದರು. ಜಿಲ್ಲಾಧಿಕಾರಿಗಳು ಅಗತ್ಯ ತರಬೇತಿ ಕಾರ್ಯಾಗಾರಗಳನ್ನು ಆಯೋಜಿಸಲು ಸೂಚಿಸಲಾಗುವುದು ಎಂದರು.
ವಿವಿಧ ಇಲಾಖೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ನೌಕರರು ವರ್ಗಾವಣೆಗೊಂಡು ಜಿಲ್ಲೆಗೆ ಬಂದಲ್ಲಿ ಅವರ ಮಕ್ಕಳ ಶಿಕ್ಷಣ ಮುಂದುವರೆಸಲು ಶಾಲಾ ದಾಖಲಾತಿಗಾಗಿ ತೆರಳಿದಾಗ, ಪ್ರವೇಶ ನಿರಾಕರಿಸುವುದು ಸಾಮಾನ್ಯ ಸಂಗತಿಯಾಗಿದೆ. ಶಾಲಾ ಆಡಳಿತ ಮಂಡಳಿಯವರಿಗೆ ದಾಖಲಾತಿಗಾಗಿ ಸೂಕ್ತ ಮಾರ್ಗದರ್ಶನ ನೀಡುವಂತೆ ಆರ್.ಮೋಹನ್ ಕುಮಾರ್ ಮನವಿ ಮಾಡಿದರು.

ಸಭೆಯಲ್ಲಿ ಜಿಲ್ಲಾ ಮಟ್ಟದ ಜಂಟಿ ಸಮಾಲೋಚನಾ ಸಮಿತಿಯ ಸದಸ್ಯ ಕಾರ್ಯದರ್ಶಿ ಹಾಗೂ ಅಪರ ಜಿಲ್ಲಾಧಿಕಾರಿ ಸಿದ್ಧಲಿಂಗ ರೆಡ್ಡಿ, ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ ಶ್ರೀಮತಿ ಸುಜಾತಾ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಉಪನಿರ್ದೇಶಕ ಮಂಜುನಾಥ ಸ್ವಾಮಿ, ಆರ್.ಪಾಪಣ್ಣ, ಡಾ. ಹಿರೇಮಠ್, ಪ್ರೌಢಶಾಲಾ ಶಿಕ್ಷಕರ ಸಂಘದ ರಾಜ್ಯಾಧ್ಯಕ್ಷ ಸಿದ್ದಬಸಪ್ಪ, ಉಮೇಶ್ ಸೇರಿದಂತೆ ನೌಕರರ ಸಂಘದ ಪದಾಧಿಕಾರಿಗಳು, ಎಲ್ಲಾ ತಾಲೂಕು ಘಟಕಗಳ ಅಧ್ಯಕ್ಷರುಗಳು ಹಾಗೂ ನಗರದ ಖಾಸಗಿ ಆಸ್ಪತ್ರೆಗಳ ಆಡಳಿತಾಧಿಕಾರಿಗಳು ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     
http://kalpa.news/wp-content/uploads/2025/08/VID-20250820-WA0058.mp4
http://kalpa.news/wp-content/uploads/2024/04/VID-20240426-WA0008.mp4

Tags: DC Gurudatta HegadeKannada NewsKannada News LiveKannada News Online ShivamoggaKannada WebsiteKannadaNewsWebsiteLatestNewsKannadaLocalNewsMalnadNewsNews in KannadaNews KannadaShimogaShivamoggaNewsಜಿಲ್ಲಾಧಿಕಾರಿ ಗುರುದತ್ತ ಹೆಗಡೆಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Previous Post

ಆ.22 – 24 | ನಾಟ್ಯಾರಾಧನಾ ರಾಷ್ಟ್ರೀಯ ನೃತ್ಯ ಮಹೋತ್ಸವ

Next Post

ರಸ್ತೆ ದಾಟುತ್ತಿದ್ದ ವ್ಯಕ್ತಿಗೆ ವಾಹನ ಡಿಕ್ಕಿ | ಗಂಭೀರ ಗಾಯ | ಆಸ್ಪತ್ರೆಗೆ ದಾಖಲು

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ರಸ್ತೆ ದಾಟುತ್ತಿದ್ದ ವ್ಯಕ್ತಿಗೆ ವಾಹನ ಡಿಕ್ಕಿ | ಗಂಭೀರ ಗಾಯ | ಆಸ್ಪತ್ರೆಗೆ ದಾಖಲು

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಏನಿದು ಬಿಹಾರದ ಅಭಿವೃದ್ಧಿಗೆ `ಮೈ’ ಫಾರ್ಮುಲಾ? ಮತದಾರರನ್ನು ಅಭಿನಂದಿಸಿದ ಮೋದಿ ಹೇಳಿದ್ದೇನು?

November 14, 2025

ಬಿಹಾರ್ ಚುನಾವಣೆ ಫಲಿತಾಂಶ | ಕರ್ನಾಟಕದಲ್ಲಿಯೂ ಬಿಜೆಪಿ ಸಾಧನೆ ಮುಂದುವರಿಸಲು ಪ್ರೇರಣೆ | ಬಿಎಸ್‌ವೈ

November 14, 2025

ಕಲಾರಸಿಕರ ಮನಸೂರೆಗೊಂಡ ಕಲಾಗ್ರಾಮದ ಯಶಸ್ವಿ ನೃತ್ಯ ಪ್ರದರ್ಶನ

November 14, 2025

ವೈಜ್ಞಾನಿಕ ಬೇಸಾಯ ಕ್ರಮದಿಂದ ಶುಂಠಿ ಬೆಳೆಯಲ್ಲಿ ಉತ್ತಮ ಕೃಷಿ ಸಾಧ್ಯ

November 14, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕಾನೂನು ಕಲ್ಪ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಏನಿದು ಬಿಹಾರದ ಅಭಿವೃದ್ಧಿಗೆ `ಮೈ’ ಫಾರ್ಮುಲಾ? ಮತದಾರರನ್ನು ಅಭಿನಂದಿಸಿದ ಮೋದಿ ಹೇಳಿದ್ದೇನು?

November 14, 2025

ಬಿಹಾರ್ ಚುನಾವಣೆ ಫಲಿತಾಂಶ | ಕರ್ನಾಟಕದಲ್ಲಿಯೂ ಬಿಜೆಪಿ ಸಾಧನೆ ಮುಂದುವರಿಸಲು ಪ್ರೇರಣೆ | ಬಿಎಸ್‌ವೈ

November 14, 2025

ಕಲಾರಸಿಕರ ಮನಸೂರೆಗೊಂಡ ಕಲಾಗ್ರಾಮದ ಯಶಸ್ವಿ ನೃತ್ಯ ಪ್ರದರ್ಶನ

November 14, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!