ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಹೊಳೆಹೊನ್ನೂರು ಸಮೀಪದ ಮಂಗೋಟೆಯ ಕೃಷ್ಣಪ್ಪ (69) ತನ್ನ ಎತ್ತುಗಳಿಗೆ ನೀರು ಕುಡಿಸಲು ಹೋಗಿ ಕಾಲು ಜಾರಿ ತುಂಗಭದ್ರಾ ನದಿಗೆ ಬಿದ್ದು ಮುಳುಗಿ ಸಾವನ್ನಪ್ಪಿ ರುವ ಘಟನೆ ನಡೆದಿದೆ.
ಎಂದಿನಂತೆ ರೈತ ಕೃಷ್ಣಪ್ಪ ತನ್ನ ಮಗನೊಂದಿಗೆ ಜಮೀನಿನಲ್ಲಿ ಕೃಷಿ ಕೆಲಸ ಮುಗಿಸಿಕೊಂಡು ಎತ್ತುಗಳಿಗೆ ನೀರು ಕುಡಿಸಲು ನದಿಗೆ ತೆರಳಿದ್ದಾನೆ. ಆ ವೇಳೆ ಕಾಲು ಜಾರಿ ನದಿಗೆ ಬಿದ್ದು ಮುಳುಗಿ ಸಾವನ್ನಪ್ಪಿದ್ದಾನೆ ಎಂದು ತಿಳಿದು ಬಂದಿದ್ದು, ಹೊಳೆಹೊನ್ನೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Also read: ಈಶಾನ್ಯ ರಾಜ್ಯಗಳ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ರೂಪಿಸುತ್ತಿರುವ ಅಮಿತ್ ಶಾ












Discussion about this post