ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ನಗರದ ಗ್ರಾಮ ದೇವತೆ, ಐತಿಹಾಸಿಕ ಕೋಟೆ ಶ್ರೀಮಾರಿಕಾಂಬಾ ದೇವಿ ಜಾತ್ರೆಯ #Kote Shri Marikamba Fair ಹಿನ್ನೆಲೆಯಲ್ಲಿ ಫೆ.24ರಿಂದ 28ರವರೆಗೂ ವಾಹನ ದಟ್ಟಣೆ ನಿರ್ವಹಿಸಲು ನಗರದ ಹಲವು ಪ್ರದೇಶಗಳಲ್ಲಿ ವಾಹನ ಸಂಚಾರ ಮಾರ್ಗದಲ್ಲಿ ಬದಲಾವಣೆ #Change in traffic route ಮಾಡಲಾಗಿದೆ.
ಈ ಕುರಿತಂತೆ ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ #DC Prabhulinga Kavalikatti ಅವರು ಆದೇಶ ಹೊರಡಿಸಿದ್ದು, ಮಾರಿಕಾಂಬಾ ಜಾತ್ರೆಯ ಭಾಗವಾಗಿ ರಾಜಬೀದಿ ಉತ್ಸವ, ಕುಸ್ತಿ ಪಂದ್ಯಾವಳಿ, ಹಲವು ರೀತಿಯ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ. ಈ ಹಿನ್ನೆಲೆಯಲ್ಲಿ ವಾಹನ ದಟ್ಟಣೆ ಉಂಟಾಗಲಿದೆ. ಹೀಗಾಗಿ, ಮುಂಜಾಗ್ರತಾ ಕ್ರಮವಾಗಿ ದಟ್ಟಣೆ ನಿವಾರಿಸಲು ಹಾಗೂ ಜಾತ್ರೆಗೆ ಬರುವವರಿಗೆ ತೊಂದರೆಯಾದAತೆ ಕ್ರಮ ಕೈಗೊಳ್ಳಲಾಗಿದ್ದು, ವಾಹನ ಸಂಚಾರ ಮಾರ್ಗದಲ್ಲಿ ಬದಲಾವಣೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.
ಶ್ರೀ ಮಾರಿಕಾಂಬಾ ದೇವಸ್ಥಾನದ ಸುತ್ತಮುತ್ತಲ 500 ಮೀಟರ್ ವ್ಯಾಪ್ತಿಯಲ್ಲಿ ಎಲ್ಲಾ ವಾಹನಗಳ ಸಂಚಾರವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.
ಫೆಬ್ರವರಿ 24 ರಿಂದ 28 ರವರೆಗೆ ಹೊಳೆಬಸ್ ಸ್ಟಾಪ್ನಿಂದ ಬೆಕ್ಕಿನ ಕಲ್ಮಠದ ಮೂಲಕ ರಾಮಣ್ಣ ಶ್ರೇಷ್ಠಿ ಪಾರ್ಕ್’ವರೆಗೆ ವಾಹನ ಸಂಚಾರ ಮತ್ತು ನಿಲುಗಡೆಗೆ ಅವಕಾಶ ಇರುವುದಿಲ್ಲ.
ಫೆ.24 ರಂದು ನಸುಕಿನ 3 ಗಂಟೆಯಿಂದ ರಾತ್ರಿ 11 ಗಂಟೆಯವರೆಗೆ ರಾಮಣ್ಣ ಶ್ರೇಷ್ಠಿ ಪಾರ್ಕ್’ನಿಂದ ಗಾಂಧಿ ಬಜಾರ್ ಹಾಗೂ ಶಿವಪ್ಪ ನಾಯಕ ಸರ್ಕಲ್ ಸುತ್ತಮುತ್ತಲಿನ ರಸ್ತೆಗಳಲ್ಲಿ ವಾಹನ ಸಂಚಾರಕ್ಕೆ ನಿರ್ಬಂಧ ಇರುತ್ತದೆ.
ಸವಳಂಗ ಮತ್ತು ಶಿಕಾರಿಪುರ ಕಡೆಯಿಂದ ಬರುವ ವಾಹನಗಳು ಆಲ್ಕೊಳ ಹಾಗೂ ಸಾಗರ ರಸ್ತೆ ಮೂಲಕ ಸಂಚರಿಸಬೇಕು.
ಈ ಸಂಚಾರ ಬದಲಾವಣೆ ನಿಯಮಗಳು ಪೊಲೀಸ್ ವಾಹನಗಳು, ಅಂಬುಲೆನ್ಸ್ ಹಾಗೂ ತುರ್ತು ಸೇವಾ ವಾಹನಗಳಿಗೆ ಅನ್ವಯಿಸುವುದಿಲ್ಲ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
