ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ವಿಧಾನ ಪರಿಷತ್ ಸದಸ್ಯ ಡಾ. ಧನಂಜಯ ಸರ್ಜಿ #Dr. Dhananjaya Sarji ಅವರ ಹೆಸರಿನಲ್ಲಿ ನಗರದ ಮೂವರು ಪ್ರಮುಖರಿಗೆ ವಿಷಯುಕ್ತ ಸ್ವೀಟ್ ಬಾಕ್ಸ್ ಕೊರಿಯರ್ #Poisonous Sweet ಮೂಲಕ ರವಾನೆಯಾಗಿರುವ ಆತಂಕಕಾರಿ ಘಟನೆ ನಡೆದಿದ್ದು, ಈ ಕುರಿತಂತೆ ದೂರು ದಾಖಲಾಗಿದೆ.
ಈ ಕುರಿತಂತೆ ಮಾತನಾಡಿರುವ ಡಾ.ಧನಂಜಯ ಸರ್ಜಿ, ಎನ್’ಇಎಸ್ ಸಂಸ್ಥೆಯ ಕಾರ್ಯದರ್ಶಿ ನಾಗರಾಜ್, ವೈದ್ಯರಾದ ಡಾ. ಅರವಿಂದ್ ಹಾಗೂ ಡಾ. ಪವಿತ್ರ ಅವರಿಗೆ ತಮ್ಮ ಹೆಸರಿನಲ್ಲಿ ಸ್ವೀಟ್ ಬಾಕ್ಸ್ ರವಾನೆಯಾಗಿರುವುದು ತಿಳಿದುಬಂದಿದೆ ಎಂದಿದ್ದಾರೆ.

ಈ ಸ್ವೀಟ್ ಬಾಕ್ಸ್’ನಲ್ಲಿ ತಮ್ಮ ಹೆಸರು ಹಾಗೂ ಭಾವಚಿತ್ರ ಮುದ್ರಿಸಿರುವ ನಕಲಿ ಪತ್ರ ಇರಿಸಿರುವುದು ಕಂಡುಬಂದಿದೆ. ಯಾರೋ ಉದ್ದೇಶಪೂರ್ವಕವಾಗಿಯೇ ಈ ದುಷ್ಕೃತ್ಯ ಎಸಗಿದ್ದಾರೆ. ಆರೋಪಿಗಳು ಯಾರು ಎಂಬುದು ಪತ್ತೆ ಮಾಡಿ ಅವರಿಗೆ ಕಠಿಣ ಶಿಕ್ಷೆಯಾಗಬೇಕು ಎಂದು ಆಗ್ರಹಿಸಿದರು.

ಈ ಸಂಬಂಧ ಕೋಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news







Discussion about this post