ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ನಗರದ ಭಜನಾ ಪರಿಷತ್, ಶ್ರೀ ಪ್ರಸನ್ನ ಗಣಪತಿ ದೇವಸ್ಥಾನದ ಅರ್ಚಕವೃಂದ, ಸಂಸ್ಕಾರ ಪ್ರತಿಷ್ಠಾನ ಇವರ ಸಂಯುಕ್ತಾಶ್ರಯದಲ್ಲಿ ಲೋಕ ಕಲ್ಯಾಣಕ್ಕಾಗಿ ರವೀಂದ್ರನಗರದ ಪ್ರಸನ್ನ ಗಣಪತಿ (ಬಲಮುರಿ) ದೇವಸ್ಥಾನದಲ್ಲಿ ಏ.30ರಂದು ಬೆಳಿಗ್ಗೆ 11 ಗಂಟೆಗೆ ‘ಶ್ರೀ ರುದ್ರಹೋಮ’ವನ್ನು ನಡೆಸಲಾಗುವುದು ಎಂದು ದೇವಸ್ಥಾನದ ಪ್ರಧಾನ ಅರ್ಚಕ ಆ.ಪ. ರಾಮಭಟ್ಟರು ಹೇಳಿದರು.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು,, ಲೋಕಕಲ್ಯಾಣಾರ್ಥವಾಗಿ ನಡೆಯುತ್ತಿರುವ ಶತಕೋಟಿ ಓಂ ನಮಃ ಶಿವಾಯ ಜಪ ಯಜ್ಞ ಅಂಗವಾಗಿ ರುದ್ರಹೋಮ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಹರಿಹರಪುರ ಶ್ರೀ ಕ್ಷೇತ್ರದ ಶ್ರೀ ಸ್ವಯಂ ಪ್ರಕಾಶ ಸಚ್ಚಿದಾನಂದ ಸರಸ್ವತಿ ಮಹಾಸ್ವಾಮಿಗಳ ಕೃಪಾಶೀರ್ವಾದದೊಂದಿಗೆ ಈ ಕಾರ್ಯಕ್ರಮ ನಡೆಯಲಿದೆ ಎಂದರು.
ಏ.30ರ ಬೆಳಿಗ್ಗೆ 8 ಗಂಟೆಗೆ ಗಣಪತಿ ಪೂಜೆ, ಗೋ ಪೂಜೆ, ಹೋಮ ಮುಂತಾದ ಪೂಜಾ ಕಾರ್ಯಕ್ರಮಗಳು ನಡೆಯುತ್ತವೆ. 11 ಗಂಟೆಗೆ ಶ್ರೀ ರುದ್ರಹೋಮ, ಮಹಾಪೂರ್ಣಾಹುತಿ ನಡೆಯಲಿದೆ. 11.30ಕ್ಕೆ ಕಾರ್ಕಳದ ವಾಗ್ಮಿ ಆದರ್ಶ ಗೋಕಲೆಯವರಿಂದ ಧಾರ್ಮಿಕ ಉಪನ್ಯಾಸವಿರುತ್ತದೆ ಎಂದರು.
Also read: ಪಠ್ಯಕ್ರಮದ ಭಾಗವಾಗಿ ಬೈಬಲ್ ಅಧ್ಯಯನಕ್ಕೆ ಒತ್ತಾಯ: ಖಾಸಗಿ ಶಾಲೆಗೆ ನೋಟಿಸ್ ಜಾರಿ
ಭಜನಾ ಪರಿಷತ್ನ ಕಾರ್ಯದರ್ಶಿ ಶಬರೀಶ್ ಕಣ್ಣನ್ ಮಾತನಾಡಿ, ಸೃಷ್ಠಿಯಲ್ಲಿ ರುದ್ರದೇವನ ಪಾತ್ರ ಮಹತ್ವದಾಗಿದೆ. ರುದ್ರಹೋಮ ಮಾಡುವುದರಿಂದ ಪಶು, ಪಕ್ಷಿ, ಪ್ರಾಣಿ ಆದಿಯಾಗಿ ಸಕಲ ಮನುಕುಲಕ್ಕೂ ಅತಿ ಅಗತ್ಯ ಹಾಗೂ ಅವಶ್ಯಕವಾಗಿ ಒಳಿತು ಉಂಟಾಗುತ್ತದೆ. ಪ್ರಾಪಂಚಿಕ ಅಡ್ಡಿ ಆತಂಕಗಳು ಈಶ್ವರನ ಉಪಾಸನೆ ಮಾಡುವುದರಿಂದ ನಿವಾರಣೆಯಾಗುತ್ತವೆ. ಇಹಪರಗಳಲ್ಲಿ ಸುಖ ಪ್ರಾಪ್ತವಾಗುತ್ತದೆ ಎಂದರು.
ಈ ರುದ್ರಹೋಮ ಜಪಯಜ್ಞದಲ್ಲಿ ಶಿವಮೊಗ್ಗ ಹಾಗೂ ರಾಜ್ಯದ ಹಲವು ಜಿಲ್ಲೆಗಳಿಂದ ಭಗವದ್ಭಕರು ನೂರಾರು ಸಂಖ್ಯೆಯಲ್ಲಿ ಭಾಗವಹಿಸುತ್ತಿದ್ದಾರೆ. ಶೀವಮೊಗ್ಗದ ಭಕ್ತರು ಅತಿ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಪರಮೇಶ್ವರನ ಕೃಪೆಗೆ ಪಾತ್ರರಾಗಬೇಕು ಎಂದರು.
ಪತ್ರಿಕಾಗೋಷ್ಠಿಯಲ್ಲಿ ಭಜನಾ ಪರಿಷತ್ನ ಉಪಾಧ್ಯಕ್ಷ ಎನ್.ಶ್ರೀಧರ್, ದೇವಸ್ಥಾನ ಸಮಿತಿಯ ಮುಖ್ಯಸ್ಥ ಉಮಾಪತಿ, ಸತೀಶ್ ಇದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post