No Result
View All Result
Bengaluru Gets a World-Class Electronics Co-Innovation Hub as Henkel Launches Advanced Application Center
English Articles

Bengaluru Gets a World-Class Electronics Co-Innovation Hub as Henkel Launches Advanced Application Center

by ಕಲ್ಪ ನ್ಯೂಸ್
March 17, 2026
0

Kalpa Media House  |  Bengaluru | Henkel today announced the launch of its Customer Application Center in Bengaluru, reinforcing its...

Read moreDetails
Malnad is a Cultural ‘Gharana’ of Great Minds: Dr. Jayamala at Sahyadri Utsava

Malnad is a Cultural ‘Gharana’ of Great Minds: Dr. Jayamala at Sahyadri Utsava

March 13, 2026
ABB deepens Karnataka footprint with new investments to serve high growth emerging sectors

ABB deepens Karnataka footprint with new investments to serve high growth emerging sectors

March 12, 2026
“Rasamum Rasayanamum- Artistry meets Chemistry”

“Rasamum Rasayanamum- Artistry meets Chemistry”

March 11, 2026
ಕಾನಹಳ್ಳಿಯಲ್ಲಿ ಹಾನಗಲ್ಲಿನ ಕದಂಬ ಹೆಮ್ಮಾಡಿದೇವನ ಅವಧಿಯ ವೀರಗಲ್ಲು ಪತ್ತೆ

T20 World Cup Stars Suryakumar Yadav & Tilak Varma Make Strategic Investment in TRUZON Solar

March 11, 2026
  • Advertise With Us
  • Grievances
  • About Us
  • Contact Us
Wednesday, March 18, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Special Articles

ಮಂಗಳೋತ್ಸವವಾದ ಶ್ರೀ ತ್ಯಾಗರಾಜರ ಆರಾಧನೋತ್ಸವ

ಶ್ರೀ ಗುರುಗುಹ ಸಂಗೀತ ಮಹಾವಿದ್ಯಾಲಯದ 38ನೇ ಗಾನಾರಾಧನೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
February 29, 2020
in Special Articles
0
ಮಂಗಳೋತ್ಸವವಾದ ಶ್ರೀ ತ್ಯಾಗರಾಜರ ಆರಾಧನೋತ್ಸವ
Share on FacebookShare on TwitterShare on WhatsApp

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಅಲ್ಲಿ ಕೇವಲ ರಂಜನೆ ಇರಲಿಲ್ಲ, ಅಂತರಂಗದ ಭಕ್ತಿ ಭಾವ ಪಸರಿಸಿತ್ತು. ಸಂತೋಷ ಮಾತ್ರ ಇರಲಿಲ್ಲ, ಅಂತರಂಗದ ಸಂಭ್ರಮ ಮೇಳೈಸಿತ್ತು. ಮನಸ್ಸಿಗೆ ಆ ಕ್ಷಣದ ಹಿತ ಮಾತ್ರ ವಿರದೇ ಹಲವು ದಿನಗಳ ಕಾಲ ಮೊಗೆದಷ್ಟು ದೊರಕುವ ಆನಂದದ ಘಮಲಿತ್ತು. ಆತ್ಮಾನಂದಕ್ಕೆ ಪಾರವೇ ಇಲ್ಲ ಎಂಬಷ್ಟರ ಮಟ್ಟಿಗಿನ ಅನನ್ಯತೆ ಅದು. ನಾವು ಅನೇಕ ಬಾರಿ ಮನೋರಂಜನೆ ಹುಡುಕಿ ಹೋಗುತ್ತೇವೆ. ಸಂಗೀತದಲ್ಲಿ ದೊರಕುವ ಆನಂದ ಮತ್ತು ಆತ್ಮಾನಂದ ಇವೆಲ್ಲವನ್ನೂ ಮೀರಿದ ಸ್ಥಿತಿ. ಇದು ಶಾಶ್ವತವಾಗಿ ನಿಲ್ಲಬಲ್ಲ, ಮರೆಯಲಾರದ ಮಾನಸೋಲ್ಲಾಸ ನೀಡುವ ಪ್ರಕ್ರಿಯೆ. ಅಂಥದ್ದೊಂದು ಮಹೋತ್ಸವಕ್ಕೆ ಸಾಕ್ಷಿಯಾಗಿದ್ದು ಶಿವಮೊಗ್ಗದ ಶ್ರೀ ಗುರುಗುಹ ಸಂಗೀತ ಮಹಾವಿದ್ಯಾಲಯ ಆಯೋಜಿಸಿದ್ದ ಶ್ರೀ ಪುರಂದರ ದಾಸರ, ಶ್ರೀ ತ್ಯಾಗರಾಜರ ಆರಾಧನಾ ಉತ್ಸವ.
ಹೌದು.

5 ದಿನಗಳ ಮಹೋತ್ಸವದಲ್ಲಿ ಶಾಸೀಯ ಸಂಗೀತ ಕಲಿತ, ಕಲಿಯುತ್ತಿರುವ ವಿದ್ವಾಂಸರು, ವಿದ್ಯಾರ್ಥಿಗಳು ವೇದಿಕೆಯಲ್ಲಿ ಪ್ರೌಢಿಮೆ ಒರೆಗೆ ಹಚ್ಚಿದ್ದು ಒಂದು ಭಾಗ.

ಯುವ ಪ್ರತಿಭೆಗಳ ವಯಲಿನ್ ಸೋಲೋ, ದೇವರ ನಾಮ ಉಚಿತ ಕಲಿಕಾ ಶಿಬಿರದ ಮಾತೆಯರ ಗಾಯನ, ನವರತ್ನ ಮಾಲಿಕೆ ಗೋಷ್ಠಿಗಳ ನಡುವೆಯೇ ಬಾಲ ಪ್ರತಿಭೆ ಚಿನ್ಮಯಿ ನಾಗೇಂದ್ರ ಹಾಡುಗಾರಿಕೆ ಮನೋಜ್ಞವಾಗಿತ್ತು. ಕಲಾಸಾಧನೆಗೆ ಅನಗತ್ಯ ಒತ್ತಡ ಹೇರುವ ರೆಗ್ಯುಲರ್ ಶಾಲೆಗೆ ಗುಡ್ ಬೈ ಹೇಳಿ ನ್ಯಾಷನಲ್ ಓಪನ್ ಸ್ಕೂಲಿಂಗ್‌ನಲ್ಲಿ (ಮುಕ್ತ ಶಿಕ್ಷಣ) ಪರೀಕ್ಷೆಗಳನ್ನು ಕಟ್ಟುತ್ತಲೇ ನಿತ್ಯವೂ ಶಾಸೀಯ ಸಂಗೀತಾಭ್ಯಾಸದಲ್ಲಿ ತೊಡಗಿಕೊಂಡಿರುವ ಈ ಬಾಲಕಿ ಗಾಯನ ಪಕ್ಕವಾದ್ಯದಲ್ಲಿದ್ದ ಹಿರಿಯ ವಿದ್ವಾಂಸರೇ ಮನಸೋಲುವವಷ್ಟರ ಮಟ್ಟಿಗೆ ಪ್ರೌಢವಾಗಿತ್ತು. ನಗರದ ಪ್ರಥಮ ಮಹಿಳಾ ವೈದ್ಯೆ, ವಯೋವೃದ್ಧ ಡಾ. ನಂದಿನಿ ಅಮಿತೋತ್ಸಾಹದಲ್ಲಿ ನಡೆಸಿದ ಸಂಗೀತ ಸೇವೆ, ಯುವ ಪ್ರತಿಭೆಗಳಾದ ಸುಜನಾ, ನಿಧಿ ರಾವ್, ವಿದುಷಿ ಭವಾನಿ ಅನಂತರಾಂ ಮತ್ತು ಸಮ್ಮಿತ್ ನಟೇಶ್ ಗಾಯನಗಳು ತಜ್ಞರ ಮೆಚ್ಚುಗೆಗೆ ಪಾತ್ರವಾದವು. ಇಂತಿಂಥವರೇ ಹಾಡಬೇಕು ಎಂದು ವಿದ್ವಾನ್ ನಾಗರಾಜರ ಆಯ್ಕೆ ಎಂದಮೇಲೆ ಅದರ ಬಗ್ಗೆ ಹೆಚ್ಚು ಹೊಗಳುವ ಅಗತ್ಯವೇ ಇಲ್ಲ. ಇನ್ನು ಪಂಚರತ್ನ ಗೋಷ್ಠಿ ಗಾಯನ, ಪ್ರಾಣಪ್ರತಿಷ್ಠಾಪನೆಗೊಂಡ ತ್ಯಾಗರಾಜರ ಮೂರ್ತಿಗೆ ವಿಶೇಷ ಪೂಜೆ, ಅಭಿಷೇಕ- ಶ್ರೇಷ್ಠದಲ್ಲಿ ಶ್ರೇಷ್ಠ.

ಭಕ್ತಿಯಲ್ಲಿ ಭಾವ, ಆರಾಧನೆಯಲ್ಲಿ ಅತ್ಯಮೂಲ್ಯ ಭಕ್ತಿ, ಆರತಿಯಲ್ಲಿ ಅಮೂರ್ತತೆಯ ದರ್ಶನ, ಅಲಂಕಾರದಲ್ಲಿ ಮಹಾವತಾರದ ಮೂರ್ತಿಯನ್ನು ಕಾಣುವ ಭಾಗ್ಯ.

ಮಂಗಳೋತ್ಸವ
ಇಲ್ಲಿ ಬಹು ಮುಖ್ಯವಾಗಿ ಉಲ್ಲೇಖಿಸಲೆತ್ನಿಸಿದ್ದು ಮಂಗಳವಾದ್ಯ ಕಲಾವಿದರ ಮಹಾಮೇಳದ ಬಗ್ಗೆ.  ಇಡೀ ಉತ್ಸವಕ್ಕೆ ಅತ್ಯಂತ ಕಳೆಗಟ್ಟಿದ ಸಂದರ್ಭವೆಂದರೆ ನಾದಸ್ವರ ವಾದನ ಮತ್ತು ಡೋಲು ಮಹಾಮೇಳ. ಹಾಗಾಗಿಯೇ ಇದು ಎಲ್ಲರೂ ಮಾಡುವ ಆರಾಧನೆ- ಮಹಾ ಉತ್ಸವಕ್ಕಿಂತ ಭಿನ್ನ, ವಿಭಿನ್ನ ಎನಿಸಿದ್ದು. ಅಭಿಮುಖ ಪ್ರಾಕಾರೋತ್ಸವ- ಶ್ರೀ ರಾಮದೇವರ ಮತ್ತು ಶ್ರೀತ್ಯಾಗರಾಜರ ಭವ್ಯ ಮೂರ್ತಿಗಳು ಪಲ್ಲಕ್ಕಿಯಲ್ಲಿ ವಿರಾಜಮಾನರಾಗಿದ್ದರು.

ಪುರುಷರು ರಾಮರನ್ನು, ಯುವತಿಯರು- ಮಾತೆಯರು ಶ್ರೀ ತ್ಯಾಗರಾಜರಮೂರ್ತಿ ಪಲ್ಲಕ್ಕಿನ್ನು ಅಭಿಮುಖವಾಗಿ ಹೊತ್ತಿದ್ದ ಸಂದರ್ಭ. ಜಯನಗರದ ಶ್ರೀ ರಾಮಮಂದಿರದ ಸುತ್ತಲೂ ಇರುವ ರಸ್ತೆಯಲ್ಲಿ 3 ಸುತ್ತು ಪ್ರದಕ್ಷಿಣಾಕಾರವಾಗಿ ಉತ್ಸವ ಹೊರಟಾಗ ಅದನ್ನು ಕಳೆಗಟ್ಟುವಂತೆ ಮಾಡಿದವರು ಶಿವಮೊಗ್ಗ ಜಿಲ್ಲಾ ಮಂಗಳವಾದ್ಯ ಕಲಾವಿದರ ಸಂಘದ ತಂಡದವರು.

ವಿದ್ವಾನ್ ಸುಂದರಮೂರ್ತಿ ಮತ್ತು ತಂಡದವರು ತ್ಯಾಗರಾಜರ ಆರಾಧನೋತ್ಸವದ ಮೂರನೇ ದಿನ ಸೂರ್ಯಾಸ್ತದ ಸಮಯದಲ್ಲಿ ಕಛೇರಿ ನೀಡಿದ್ದಲ್ಲದೇ ಅಭಿಮುಖ ಪ್ರಾಕಾರೋತ್ಸವಕ್ಕೂ ಸೇವೆ ಸಲ್ಲಿಸಿದ್ದು ಬಹುಜನರ ಜನಮನ ಸೆಳೆಯಿತು.

ರಸ್ತೆಯಲ್ಲಿ ಮೂರು ಸುತ್ತು ಪ್ರದಕ್ಷಿಣೆ ಮಾತ್ರವಲ್ಲದೇ ಜಯನಗರ ರಾಮಮಂದಿರದ ಒಳಾಣಗಣದಲ್ಲೂ ಪ್ರಾಕಾರೋತ್ಸವ ಸಂದರ್ಭ ಡೋಲು ಕಲಾವಿದರು ನುಡಿಸಿದ ದಾಸರ ಜನಪ್ರಿಯ ಕೃತಿಗಳಿಗೆ ಆಬಾಲ ವೃದ್ಧರಾಗಿ ಎಲ್ಲರೂ ಹೆಜ್ಜೆ ಹಾಕಿದ್ದು, ವಯಸ್ಸು ಮರೆತು ನರ್ತಿಸಿದ್ದು ಭಕ್ತಿ ಭಾವದ ಪರಾಕಾಷ್ಠೆಯಾಗಿತ್ತು.

ಮುಖ್ಯ ವಾಹಿನಿ ಸೇವೆ
ಮಂಗಳವಾದ್ಯ ಎಂದರೆ ಕೇವಲ ಶುಭ ಸಭೆ, ಸಮಾರಂಭದಲ್ಲಿ ಕೆಲವು ಸಂದರ್ಭಕ್ಕಷ್ಟೇ ಕರೆಸುತ್ತಾರೆ. ಉಳಿದಂತೆ ನಮ್ಮನ್ನು ನಿಕೃಷ್ಟವಾಗಿ ಕಾಣುವ ಸಂದರ್ಭವೇ ಹೆಚ್ಚು. ಕಲಾವಿದರಾಗಿದ್ದರೂ ಹೆಚ್ಚಿನ ಮಾನ್ಯತೆ ಇಲ್ಲದವರಂತೆಯೇ ಇರುವ ಸಮುದಾಯ ನಮ್ಮದು. ಶ್ರೀ ತ್ಯಾಗರಾಜರ ಸೇವೆ ಮಾಡುವಲ್ಲಿ ಮೇಲು ಕೀಳು ಸಲ್ಲ ಎಂದು ನಿರ್ಧರಿಸಿದ ನಾಗರಾಜರು ಕಳೆದ 5 ವರ್ಷಗಳಿಂದ ನಮಗೆ ಕಛೇರಿ ನೀಡಿದ್ದಾರೆ. ಪ್ರಕಾರೋತ್ಸವ ಸೇವೆಯ ಮುಖ್ಯವಾಹಿನಿಯಲ್ಲಿ ನಮ್ಮನ್ನು ಒಗ್ಗೂಡಿಸಿದ್ದಾರೆ. ಇಂಥಾ ಮಹಾನ್ ಯೋಗವನ್ನು ಕರುಣಿಸಿದ ವಿದ್ವಾನ್ ನಾಗರಾಜರಿಗೆ ನಾವು ಎಷ್ಟು ಕೃತಜ್ಞರಾಗಿದ್ದರೂ ಸಾಲದು ಎನ್ನುತ್ತಾರೆ ತವಿಲ್ ವಿದ್ವಾನ್ ಸಿ.ಎಸ್. ರಾಮಕೃಷ್ಣ.

ಸೇವೆಗೆ ತಾರತಮ್ಯವೇಕೆ
ಶ್ರದ್ಧಾ ಭಕ್ತಿಯಿಂದ ಸಂತ ತ್ಯಾಗರಾಜರ ಸೇವೆ ಮಾಡುತ್ತೇವೆ ಎಂದವರಿಗೆ ನಾವು ತಾರತಮ್ಯ ಮಾಡಬಾರದು. ಕಲಾರಾಧನೆಗೆ ಜಾತಿ, ಕುಲ ಅಂತಸ್ತು ಇಲ್ಲವೇ ಇಲ್ಲ. ಹಾಗಿರುವಾಗ ಹತ್ತಾರು ವರ್ಷ ಸಾಧನೆ ಮಾಡಿರುವ ಡೋಲು-ವಾಲಗ, ಸ್ಯಾಕ್ರೋನ್ ಕಲಾವಿದರಿಗೂ ನಮ್ಮ ಉತ್ಸವದಲ್ಲಿ ಮುಕ್ತ ಆಹ್ವಾನವಿದೆ. ಈ ವರ್ಗವನ್ನೂ ದಾಸರ ಸೇವೆಗೆ, ಭಕ್ತಿವಾಹಿನಿಗೆ ಬೆರೆಸಬೇಕು. ನೂರಾರು ಜನರು ಉತ್ಸವ ಪೂರ್ಣ ನರ್ತನ ಸೇವೆಯನ್ನೂ ಮಾಡಲು ಪ್ರೇರೇಪಿಸಿದ ಮಂಗಳವಾದ್ಯ ತಂಡದವರ ಕಲಾಭಿಜ್ಞತೆ ಶ್ರೀ ಸ್ವಾಮಿಗೆ ಸಮರ್ಪಣೆಯಾಗಿದೆ ಎಂದು ಮುಕ್ತಕಂಠದಿಂದ ಹೇಳುತ್ತಾರೆ ವಿದ್ವಾನ್ ನಾಗರಾಜ್.
ಶ್ರೀ ಗುರುಗುಹ ಸಂಗೀತ ಮಹಾವಿದ್ಯಾಲಯದ 38ನೇ ವರ್ಷದ ಶ್ರೀ ತ್ಯಾಗರಾಜರ ಆರಾಧನೋತ್ಸವ ಅದ್ಭುತ, ಆಪ್ಯಾಯ, ಅತ್ಯುಚ್ಚ ಮಟ್ಟದ್ದಾಗಿತ್ತು. ಅಪರೂಪದಲ್ಲಿ ಇದು ಅಪ್ರತಿಮ.

ಲೇಖನ: ಶ್ರೀ ಸುಧಾ

Get in Touch With Us info@kalpa.news Whatsapp: 9481252093

Tags: Guruguha Sangeetha VidhyalayaHindu religionKannada News WebsiteLatestNewsKannadaLord AnjaneyaLord Sri RamaSri Thyagaraja Aradhanaಆರಾಧನೆಶ್ರೀ ಗುರುಗುಹ ಸಂಗೀತ ಮಹಾವಿದ್ಯಾಲಯಶ್ರೀ ತ್ಯಾಗರಾಜರ ಆರಾಧನೋತ್ಸವ
Share231Tweet123Send
Previous Post

ಕೆನರಾ ಬ್ಯಾಂಕ್ ಉಚಿತ ಸ್ವ ಉದ್ಯೋಗ ತರಬೇತಿಗೆ ಅರ್ಜಿ ಆಹ್ವಾನ

Next Post

ಮಾರ್ಚ್ 1ರ ನಾಳೆ ವಿಷ್ಣು ತತ್ವ ವಿನಿರ್ಣಯಃದ ಕುರಿತು ವಿಶೇಷ ಉಪಾನ್ಯಾಸ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಅದ್ಯಪಾಡಿ ಹರಿದಾಸ ಭಟ್ಟರು ಎಂಬ ವಿದ್ವಾಂಸ ಮುಕುಟಮಣಿಗೆ ಸಾಧನೆಯೇ ತಲೆದೂಗಿದೆ

ಮಾರ್ಚ್ 1ರ ನಾಳೆ ವಿಷ್ಣು ತತ್ವ ವಿನಿರ್ಣಯಃದ ಕುರಿತು ವಿಶೇಷ ಉಪಾನ್ಯಾಸ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ಎಸ್‌ಎಸ್‌ಎಲ್‌ಸಿ ಪರೀಕ್ಷೆ ಆರಂಭ: ವಿದ್ಯಾರ್ಥಿಗಳಿಗೆ ಸಚಿವ ಮಧು ಬಂಗಾರಪ್ಪ ಶುಭಹಾರೈಕೆ

ಎಸ್‌ಎಸ್‌ಎಲ್‌ಸಿ ಪರೀಕ್ಷೆ ಆರಂಭ: ವಿದ್ಯಾರ್ಥಿಗಳಿಗೆ ಸಚಿವ ಮಧು ಬಂಗಾರಪ್ಪ ಶುಭಹಾರೈಕೆ

March 18, 2026
ಸಂತುಷ್ಟರಾಗಿ ವರಗಳನ್ನು ನೀಡುವ ಶ್ರೀ ಸತ್ಯ ಸಂತುಷ್ಟ ತೀರ್ಥರು

ಸಂತುಷ್ಟರಾಗಿ ವರಗಳನ್ನು ನೀಡುವ ಶ್ರೀ ಸತ್ಯ ಸಂತುಷ್ಟ ತೀರ್ಥರು

March 18, 2026
ಪ್ರಿಯ ವಿದ್ಯಾರ್ಥಿಗಳೇ, ಇದು ನಿಮ್ಮ ಕನಸಿನ ಹಾದಿಯ ಮೊದಲ ಹೆಜ್ಜೆ!

ಪ್ರಿಯ ವಿದ್ಯಾರ್ಥಿಗಳೇ, ಇದು ನಿಮ್ಮ ಕನಸಿನ ಹಾದಿಯ ಮೊದಲ ಹೆಜ್ಜೆ!

March 18, 2026
ತರೀಕೆರೆ ಸಾಹಿತ್ಯ ಸಮ್ಮೇಳನ ಅಧ್ಯಕ್ಷರಾಗಿ ಬೆಂಗಳೂರು ಆಕಾಶವಾಣಿ ಮುಖ್ಯಸ್ಥ ಶಂಕರ ನಾರಾಯಣ ಆಯ್ಕೆ

ತರೀಕೆರೆ ಸಾಹಿತ್ಯ ಸಮ್ಮೇಳನ ಅಧ್ಯಕ್ಷರಾಗಿ ಬೆಂಗಳೂರು ಆಕಾಶವಾಣಿ ಮುಖ್ಯಸ್ಥ ಶಂಕರ ನಾರಾಯಣ ಆಯ್ಕೆ

March 17, 2026
ಕೌಟುಂಬಿಕ ಬಾಂಧವ್ಯ ಬೆಳೆಸುವಲ್ಲಿ ಯುವ ಜನಾಂಗ ಜಾಗೃತರಾಗಿ: ದಿನೇಶ್ ಕರೆ

ಕೌಟುಂಬಿಕ ಬಾಂಧವ್ಯ ಬೆಳೆಸುವಲ್ಲಿ ಯುವ ಜನಾಂಗ ಜಾಗೃತರಾಗಿ: ದಿನೇಶ್ ಕರೆ

March 17, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL