ಕಲ್ಪ ಮೀಡಿಯಾ ಹೌಸ್
ಶಿವಮೊಗ್ಗ: ಧೀಮಂತ ವ್ಯಕ್ತಿತ್ವದ ನಾಯಕರು, ಜನಸಂಘದ ಪ್ರಥಮ ಅಧ್ಯಕ್ಷರಾದ ಶ್ಯಾಮ ಪ್ರಸಾದ್ ಮುಖರ್ಜಿಯವರ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಶಿವಮೊಗ್ಗ ನಗರ ಮಹಿಳಾ ಮೋರ್ಛಾದ ವತಿಯಿಂದ “ವೃಕ್ಷಾರೋಪಣ” ಕಾರ್ಯಕ್ರಮವನ್ನು ಆದರ್ಶನಗರದಲ್ಲಿ ಆಚರಿಸಲಾಯಿತು.
ಈ ಸಂದರ್ಭದಲ್ಲಿ ನಗರಾಧ್ಯಕ್ಷ ಜಗದೀಶ್, ನಿಕಟ ಪೂರ್ವ ಅಧ್ಕಕ್ಷ ನಾಗರಾಜ್, ಮಹಿಳಾ ಮೋರ್ಛಾ ನಗರಾಧ್ಯಕ್ಷೆ ಸುರೇಖ ಮುರಳೀಧರ್, ಮಹಾಪೌರರಾದ ಸುನಿತಾ ಅಣ್ಣಪ್ಪ, ಜಿಲ್ಲಾ ಉಪಾಧ್ಯಕ್ಷೆ ಸುಮಾ, ನಗರ ಮಹಿಳಾ ಮೋರ್ಛಾದ ಪ್ರಧಾನ ಕಾರ್ಯದರ್ಶಿ ರಶ್ಮಿ ಶ್ರೀನಿವಾಸ್, ಆರತಿ ಪ್ರಕಾಶ್, ಕರ್ನಾಟಕ ರಾಜ್ಯ ಕೊಳಚೆ ನಿರ್ಮೂಲನಾ ಸಮಿತಿ ಸದಸ್ಯೆ ಗೀತಾ ರವೀಂದ್ರ ಹಾಗೂ ಮಹಿಳಾ ಮೋರ್ಛಾದ ಸದಸ್ಯೆಯರು ಭಾಗವಹಿಸಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post