No Result
View All Result
Indriya - Krithi Shetty - Brand Ambassador
English Articles

Indriya announces Krithi Shetty as Brand Ambassador for Southern Markets

by kalpa News
August 14, 2026
0

Kalpa Media House  |  Bengaluru  | Indriya, Aditya Birla Jewellery, announced actor Krithi Shetty as its Brand Ambassador, ahead of...

Read moreDetails
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
Olectra Deploys 4,000 Electric Buses in India Milestone

Olectra Creates History | First Company in India to Deploy 4,000 Electric Buses

July 31, 2026
  • Advertise With Us
  • Grievances
  • About Us
  • Contact Us
Friday, August 14, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಜು.7ರಂದು ಎಸ್‍ಐಆರ್ ಪರಿಷ್ಕರಣೆ ಸಹಾಯವಾಣಿ ಕೇಂದ್ರ ಉದ್ಘಾಟನೆ: ಕೆ.ಎಸ್. ಈಶ್ವರಪ್ಪ

kalpa News by kalpa News
July 4, 2026
in ಶಿವಮೊಗ್ಗ
0
ಶಿವಮೊಗ್ಗ | ಗೋಸಂರಕ್ಷಣೆಗೆ ಆರಂಭವಾಗಲಿದೆ ಗೋವರ್ಧನಾ, ಏನಿದರ ರೂಪುರೇಷೆ?
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  | ಶಿವಮೊಗ್ಗ |

ರಾಷ್ಟ್ರಭಕ್ತರ ಬಳಗ ಮತ್ತು ಶ್ರೀ ಶನೈಶ್ಚರ ದೇವಾಲಯ ಸಮಿತಿ ಟ್ರಸ್ಟ್‍ವತಿಯಿಂದ ಜು.7ರ ಸೋಮವಾರ ಬೆಳಿಗ್ಗೆ 10 ಗಂಟೆಗೆ ಶುಭಮಂಗಳ ಸಮುದಾಯ ಭವನದ ಆವರಣದಲ್ಲಿ ಎಸ್‍ಐಆರ್ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ ಸೇವಾ ಕೇಂದ್ರ ಮತ್ತು ಸಹಾಯವಾಣಿ ಕೇಂದ್ರ ಉದ್ಘಾಟನೆಗೊಳ್ಳಲಿದೆ ಎಂದು ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ.

ಅವರು ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಕರ್ನಾಟಕದಲ್ಲಿ ಮತದಾರರ ವಿಶೇಷ ಪರಿಷ್ಕರಣೆ ಪ್ರಾರಂಭವಾಗಿ ಒಂದು ವಾರ ಪೂರೈಸುತ್ತಿದೆ. ಆದರೆ ರಾಜ್ಯ ಸರ್ಕಾರ ಮತ್ತು ರಾಜ್ಯ ಚುನಾವಣಾ ಆಯೋಗದ ನಿರ್ಲಕ್ಷ್ಯದಿಂದ ರಾಜ್ಯ ಹಲವು ಕಡೆ ಎನ್ಯೂಮರೇಷನ್ ಫಾರಂ ವಿತರಣೆಯಲ್ಲಿ ಮತ್ತು ಭರ್ತಿಮಾಡುವಲ್ಲಿ ಅಕ್ರಮ ನಡೆಯುತ್ತಿದೆ. ನಿಯಮದ ಪ್ರಕಾರ ಬಿಎಲ್‍ಓಗಳು ಮತದಾರರ ಮನೆ ಬಾಗಿಲಿಗೆ ಫಾರಂಗಳನ್ನು ತಲುಪಿಸಿ, ಅವರ ಇರುವಿಕೆಯನ್ನು ಪರಿಶೀಲಿಸಿ ಭರ್ತಿಮಾಡಲು ಹೇಳಬೇಕು. ಆದರೆ ಹಲವು ಕಡೆ ಒಂದು ಧರ್ಮದ ಶಾದಿ ಮಹಲ್‍ನಲ್ಲಿ ಒಂದು ಸಮುದಾಯದ ಜನರನ್ನು ಸೇರಿಸಿ ಅವರಿಗೆ ಫಾರಂ ವಿತರಿಸಿ, ಸಾಮೂಹಿಕವಾಗಿ ಭರ್ತಿಮಾಡುತ್ತಿರುವುದು ಆತಂಕಕಾರಿ ವಿಷಯವಾಗಿದ್ದು, ಕೇಂದ್ರ ಚುನಾವಣಾ ಆಯೋಗ ಯಾವ ಉದ್ದೇಶದಿಂದ ಎಸ್‍ಐಆರ್ ಮಾಡುತ್ತಿದೆಯೋ ಅದರ ತದ್ವಿರುದ್ಧವಾಗಿ ಮತದಾರರ ಪಟ್ಟಿಯಲ್ಲಿ ಸೇರಿಸುತ್ತಿರುವ ಕಾನೂನು ಬಾಹಿರ ಚಟುವಟಿಕೆಗಳು ಅವ್ಯಾಹತವಾಗಿ ನಡೆಯುತ್ತಿದ್ದು, ಈ ರೀತಿಯ ಅಕ್ರಮಗಳು ಶಿವಮೊಗ್ಗದಲ್ಲಿ ನಡೆಯದಂತೆ ನಿಗಾವಹಿಸಲು ರಾಷ್ಟ್ರಭಕ್ತರ ಬಳಗದವತಿಯಿಂದ ನಗರದ ಪ್ರತಿಯೊಂದು ಬೂತ್‍ಗಳಲ್ಲೂ ಬಿಎಲ್‍ಎಗಳನ್ನು ನೇಮಿಸಿ, ನೈಜ ಮತ್ತು ಉತ್ಕøಷ್ಟ ಮತದಾರರ ಪಟ್ಟಿಯನ್ನು ತಯಾರಿಸಲು ನಮ್ಮ ಕಾರ್ಯಕರ್ತರು ನೆರವಾಗುತ್ತಿದ್ದಾರೆ ಎಂದರು.

ಅನೇಕ ಕಡೆ ಮದರಸಾ, ಮಸೀದಿ ಮತ್ತು ಕಲ್ಯಾಣ ಮಂದಿರಗಳಲ್ಲಿ ಸಾಮೂಹಿಕವಾಗಿ ಎಸ್‍ಐಆರ್ ಫಾರಂನ್ನು ವಿತರಿಸುತ್ತಿರುವುದು ಎಸ್‍ಐಆರ್ ಪ್ರಕ್ರಿಯೆಗೆ ವಿರುದ್ಧವಾಗಿದ್ದು, ರಾಜ್ಯ ಚುನಾವಣಾ ಆಯುಕ್ತ ಅನ್ಬುಕುಮಾರ್‍ರವರು ಈ ಬಗ್ಗೆ ಪತ್ರಿಕಾ ಸಂದರ್ಶನದಲ್ಲಿ ಒಪ್ಪಿಕೊಂಡಿದ್ದರೂ ಸಹ ಇದೂವರೆಗೆ ಒಬ್ಬರ ಮೇಲೂ ಕ್ರಮ ಜರುಗಿಸಿಲ್ಲ. ಮೂರೇ ದಿನಕ್ಕೆ ಕಾಂಗ್ರೆಸ್ಸಿನ ನಿಜಬಣ್ಣ ಬಯಲಾಗಿದೆ. ರಾಜ್ಯದ ಅನೇಕ ಭಾಗಗಳಲ್ಲಿ ಒಂದೇ ಸಮುದಾಯದ ಮತದಾರರನ್ನು ಗುಡ್ಡೆಹಾಕಿ, ಫಾರಂ ವಿತರಣೆ ಮತ್ತು ಭರ್ತಿಮಾಡುವ ಕೆಲಸ ನಡೆಯುತ್ತಿದೆ. ಈ ಅಕ್ರಮಗಳ ಬಗ್ಗೆ ಗಮನಕ್ಕೆ ತಂದರೂ ಇದೂವರೆಗೂ ಯಾರೊಬ್ಬರ ಮೇಲೂ ಕ್ರಮ ಆಗಿಲ್ಲ. ಅರೆಸ್ಟ್ ಮಾಡಿಲ್ಲ. ಈ ಪ್ರಕ್ರಿಯೆಯಲ್ಲಿ ರಾಜ್ಯ ಸರ್ಕಾರದ ಅಧಿಕಾರಿಗಳೇ ಭಾಗವಹಿಸುತ್ತಿರುವುದರಿಂದ ಅವರಿಗೆ ಕ್ರಮ ಕೈಗೊಳ್ಳಲು ಸಾಧ್ಯವಾಗದಿದ್ದರೆ ರಾಜೀನಾಮೆ ನೀಡಿ ತೆರಳಲಿ. ಇಲ್ಲವಾದಲ್ಲಿ ಕೇಂದ್ರದ ಅಧಿಕಾರಿಗಳನ್ನು ಬಳಸಿಕೊಳ್ಳಿ. ಗೃಹಸಚಿವ ಪ್ರಿಯಾಂಕ್ ಖರ್ಗೆ ಕೂಡ ಸಾಮೂಹಿಕವಾಗಿ ಸಮುದಾಯ ಭವನಗಳಲ್ಲಿ ಎಸ್‍ಐಆರ್ ನಿಯಮಾವಳಿ ಉಲ್ಲಂಘಿಸಿದ್ದು ಕಂಡುಬಂದಲ್ಲಿ ಕಠಿಣಕ್ರಮ ಕೈಗೊಳ್ಳುವುದಾಗಿ ಹೇಳಿದ್ದಾರೆ. ಆದರೆ ಇದೂವರೆಗೂ ಯಾರ ಮೇಲೂ ಕ್ರಮ ಕೈಗೊಂಡಿಲ್ಲ. ಸರ್ಕಾರ ಕೂಡ ಮೌನವಹಿಸಿರುವುದು ಸಂಶಯ ಉಂಟುಮಾಡಿದೆ. ರಾಷ್ಟ್ರಭಕ್ತರ ಬಳಗ ಈ ಅಕ್ರಮಗಳಿಗೆ ಅವಕಾಶ ಕೊಡುವುದಿಲ್ಲ.

-ಕೆ.ಎಸ್. ಈಶ್ವರಪ್ಪ

Also read: ಜುಲೈ 7, 8ರಂದು ಬೆಂಗಳೂರಿನಲ್ಲಿ ಅಖಿಲ ಭಾರತ ಶರಣ ಸಾಹಿತ್ಯ ಸಮ್ಮೇಳನ

ಅಲ್ಲದೆ ಎನ್ಯೂಮರೇಷನ್ ಫಾರಂ ಪಡೆದ ಹಿರಿಯ ನಾಗರೀಕರಿಗೆ, ಕೂಲಿ ಕಾರ್ಮಿಕರಿಗೆ ಕೊಳಗೇರಿ ನಿವಾಸಿಗಳಿಗೆ ಫಾರಂ ಭರ್ತಿಮಾಡಲು ತೊಂದರೆಯಾಗುತ್ತಿದ್ದು, ರಾಷ್ಟ್ರಭಕ್ತರ ಬಳಗ ಮತ್ತು ಶನೈಶ್ಚರ ದೇವಾಲಯ ಸಮಿತಿ ಸಹಯೋಗದೊಂದಿಗೆ ಶುಭ ಮಂಗಳ ಸಮುದಾಯ ಭವನದ ಆವರಣದಲ್ಲಿ ಸೇವಾ ಕೇಂದ್ರವನ್ನು ಆರಂಭಿಸಲಿದ್ದು, ಹಿರಿಯ ವಕೀಲರು, ಖ್ಯಾತ ಸಾಹಿತಿಗಳಾದ ಎಂ.ಆರ್.ಸತ್ಯನಾರಾಯಣ್‍ರವರು ಜುಲೈ 6ರಂದು ಬೆಳಿಗ್ಗೆ 10ಗಂಟೆಗೆ ಈ ಕೇಂದ್ರವನ್ನು ಉದ್ಘಾಟಿಸಿ, ಎಸ್‍ಐಆರ್ ಬಗ್ಗೆ ಮಾಹಿತಿ ನೀಡಲಿದ್ದಾರೆ. ಈ ಸಹಾಯವಾಣಿ ಕೇಂದ್ರವು ಸೆಪ್ಟಂಬರ್ 4ರ ವರೆಗೆ ಕಾರ್ಯಾಚರಿಸಲಿದ್ದು, ಬೆಳಿಗ್ಗೆ 9.00ರಿಂದ ರಾತ್ರಿ 9-00ರ ವರೆಗೆ ಕಾರ್ಯನಿರ್ವಹಿಸಲಿದ್ದು, ಮತದಾರರು ಎನ್ಯೂಮರೇಷನ್ ಫಾರಂ ತುಂಬಲು, 2002ರ ಮತದಾರರ ಪಟ್ಟಿಯ ಮಾಹಿತಿ ಪಡೆಯಲು, ವಿಧಾನಸಭಾ ಕ್ಷೇತ್ರ, ಕ್ರಮ ಸಂಖ್ಯೆ, ಭಾಗಸಂಖ್ಯೆ, ತಮ್ಮ ಬೂತ್‍ನ ಬಿಎಲ್‍ಓ ಅವರ ಹೆಸರು ಮತ್ತು ದೂರವಾಣಿ ಸಂಖ್ಯೆ ವಿವರ ಹಾಗೂ ಎಸ್‍ಐಆರ್ ಬಗೆಗಿನ ಯಾವುದೇ ಮಾಹಿತಿಗಾಗಿ ಖುದ್ಧಾಗಿ ಭೇಟಿ ನೀಡಬಹುದು. ಅಥವಾ ದೂರವಾಣಿ ಮೂಲಕ ಕರೆಮಾಡಿ, ಸಹಾಯಪಡೆಯಬಹುದು ಎಂದರು.
JNNCE Shivamoggaದೂರವಾಣಿ ಸಂಖ್ಯೆ : ಶ್ರೀಕಾಂತ್, ಮೊ.9900855404, ಕುಬೇರಪ್ಪ, ಮೊ.9242415856, ಅರುಣ್, ಮೊ.9663535646, ಹರ್ಷ, ಮೊ.7026892123ಯನ್ನು ಸಂಪರ್ಕಿಸಬಹುದು ಎಂದರು.

ಸುದ್ದಿಗೋಷ್ಠಿಯಲ್ಲಿ ರಾಷ್ಟ್ರಭಕ್ತ ಬಳಗದ ಪ್ರಮುಖರಾದ ಕೆ.ಈ.ಕಾಂತೇಶ್, ಶ್ರೀಕಾಂತ್, ವಿ.ರಾಜು, ಶಿವಾಜಿ, ರಮೇಶ್ ಬಾಬು, ಶ್ರೀನಿವಾಸ್, ಮೋಹನ್ ಜಾದವ್, ಕುಬೇರಪ್ಪ ಮತ್ತಿತರರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news      Kalahamsa Infotech private limited

 

Tags: DCM K S EshwarappaKannada NewsKannada News LiveKannada News Online ShivamoggaKannada WebsiteKannadaNewsWebsiteLatestNewsKannadaLocalNewsMalnadNewsNews in KannadaNews KannadaShimogaShivamoggaNewsSIR revision helpline centreಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share198Tweet124Send
Aniruddha Vasishta S R

Aniruddha Vasishta S R

Editor-in-Chief

Previous Post

ಜುಲೈ 7, 8ರಂದು ಬೆಂಗಳೂರಿನಲ್ಲಿ ಅಖಿಲ ಭಾರತ ಶರಣ ಸಾಹಿತ್ಯ ಸಮ್ಮೇಳನ

Next Post

ಕೇಂದ್ರ ಸಚಿವ ಸಂಪುಟ ಪುನರ್‌ರಚನೆ | ಅಮಿತ್ ಶಾ ಉಪ ಪ್ರಧಾನಿಯಾಗುವ ಸಾಧ್ಯತೆ

kalpa News

kalpa News

Next Post
A report suggests that the Union Cabinet is likely to be reshuffled soon, and Union Home Minister Amit Shah(ಅಮಿತ್ ಶಾ) may be appointed as the Deputy Prime Minister.

ಕೇಂದ್ರ ಸಚಿವ ಸಂಪುಟ ಪುನರ್‌ರಚನೆ | ಅಮಿತ್ ಶಾ ಉಪ ಪ್ರಧಾನಿಯಾಗುವ ಸಾಧ್ಯತೆ

Leave a Reply Cancel reply

Your email address will not be published. Required fields are marked *

No Result
View All Result
Indriya - Krithi Shetty - Brand Ambassador
English Articles

Indriya announces Krithi Shetty as Brand Ambassador for Southern Markets

by kalpa News
August 14, 2026
0

Kalpa Media House  |  Bengaluru  | Indriya, Aditya Birla Jewellery, announced actor Krithi Shetty as its Brand Ambassador, ahead of...

Read moreDetails
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
Olectra Deploys 4,000 Electric Buses in India Milestone

Olectra Creates History | First Company in India to Deploy 4,000 Electric Buses

July 31, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL