ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಸಿರಿಗೆರೆಯ ಮಲೇಶಂಕರದ ಶ್ರೀ ಮಲೇಶಂಕರ ದೇವಸ್ಥಾನದ ಶ್ರೀ ಸ್ವಾಮಿಯ ಮಹಾರಥೋತ್ಸವ ಏ.14ರಿಂದ 16ರ ವರೆಗೆ ಜರುಗಲಿದೆ.
ಏ.14ರ ಬೆಳಿಗ್ಗೆಯಿಂದ ಶ್ರೀ ಗಣಪತಿ ಪೂಜೆ, ಪುಣ್ಯಾಹ, ನಂದಿಧ್ವಜಾರೋಹಣ, ರಾತ್ರಿ ಯಾಗಶಾಲಾ ಪ್ರವೇಶ, ಅಂಕುರಾರ್ಪಣೆ, ಕಂಕಣ ಬಂಧನ, ಬೇರಿತಾಡನ ಹಾಗೂ ಬಲಿ ಆರಂಭೋತ್ಸವ ನಡೆಯಲಿದೆ ಎಂದು ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಜಿ. ಹನುಮಂತಪ್ಪ ಇಂದು ಮೀಡಿಯಾ ಹೌಸ್ನಲ್ಲಿ ನಡೆದ ಪತ್ರಿಕಾ ಗೋಷ್ಠಿಯಲ್ಲಿ ತಿಳಿಸಿದರು.

ಭಕ್ತಾದಿಗಳ ಎಲ್ಲಾ ಕಾರ್ಯಕ್ರಮಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ತನು ಮನ ಧನ ಸಹಕಾರ ನೀಡಿ ಶ್ರೀ ಸ್ವಾಮಿಯ ಕೃಪೆಗೆ ಪಾತ್ರರಾಗಬೇಕೆಂದು ಮನವಿ ಮಾಡಿದರು.
ಪತ್ರಿಕಾಗೋಷ್ಠಿಯಲ್ಲಿ ಸಮಿತಿಯ ಪ್ರಮುಖರಾದ ಸದಾಶಿವ, ಹೆಚ್.ಡಿ. ಶಿವಪ್ಪ, ಶಿವರುದ್ರಪ್ಪ, ಹನುಮಂತಪ್ಪ ಇನ್ನಿತರರು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news








Discussion about this post