ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ನಗರದ ಸೀಗೆಹಟ್ಟಿಯ 30ನೆಯ ವಾರ್ಡ್ ಮಾಕಮ್ಮನ ಬೀದಿಯಲ್ಲಿ ಕಳೆದ ತಿಂಗಳಿನಿಂದ ದಿನಗಳಿಂದ ನಡೆಯುತ್ತಿರುವ ಯುಜಿಡಿ ಹಾಗೂ ರಸ್ತೆ ಕಾಮಗಾರಿಗಾಗಿ ಅಗೆಯಲಾಗಿರುವ ಗುಂಡಿಯಿಂದಾಗಿ ಈ ಭಾಗದ ಜನರ ಜೀವನ ನರಕಸದೃಶವಾಗಿದೆ.
Also Read: ವಿದ್ಯಾರ್ಥಿಗಳು ಸೂಕ್ತ ರೀತಿಯಲ್ಲಿ ತಮ್ಮ ಭವಿಷ್ಯ ರೂಪಿಸಿಕೊಳ್ಳಿ: ಎಸ್ಪಿ ಲಕ್ಷ್ಮಿ ಪ್ರಸಾದ್ ಕಿವಿಮಾತು
ಒಂದು ತಿಂಗಳಿಂದ ಯುಜಿಡಿ ಹಾಗೂ ರಸ್ತೆ ಕಾಮಗಾರಿ ಸಲುವಾಗಿ ದೊಡ್ಡ ಗುಂಡಿಯನ್ನು ತೆಗೆದಿದ್ದು, ಮಳೆಯಿಂದಾಗಿ ನೀರು ತುಂಬಿಕೊಂಡು ಅಕ್ಷರಶಃ ಕೆಸರಗದ್ದೆಯಾಗಿದೆ. ಪರಿಣಾಮವಾಗಿ ಮನೆಯಿಂದ ಯಾರು ಕೂಡ ಹೊರಗೆ ಬಾರದ ಪರಿಸ್ಥಿತಿ ಎದುರಾಗಿದೆ. ವಯಸ್ಸಾದವರಿಗೆ ಆಸ್ಪತ್ರೆಗೆ ಕರೆದುಕೊಂಡು ಹೋಗಲು ಸಹ ಸಾಧ್ಯವಾಗುತ್ತಿಲ್ಲ. ಶಾಲೆ ಆರಂಭವಾಗಿದ್ದು, ಮಕ್ಕಳು ಶಾಲೆಗೆ ಹೋಗಲು ಆಗುತ್ತಿಲ್ಲ ಎಂದು ಸ್ಥಳೀಯರು ಕಿಡಿ ಕಾರಿದ್ದಾರೆ.
Also Read: ಜನರಲ್ಲಿ ಇ-ತ್ಯಾಜ್ಯದ ಬಗ್ಗೆ ವ್ಯಾಪಕ ಅರಿವು ಮೂಡಿಸುವ ಕಾರ್ಯಕ್ರಮಗಳು ಅಗತ್ಯ
ಇದರೊಂದಿಗೆ ಕುಡಿಯುವ ನೀರಿನ ಸರಬರಾಜಿನಲ್ಲೂ ಸಹ ವ್ಯತ್ಯಯವಾಗಿದೆ ಎಂದು ಸ್ಥಳೀಯರು ದೂರಿದ್ದು, ಈ ಸಮಸ್ಯೆಗಳ ಬಗ್ಗೆ ಪಾಲಿಕೆ ಸದಸ್ಯರ ಗಮನಕ್ಕೆ ತಂದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ಅಳಲು ತೋಡಿಕೊಂಡಿದ್ದಾರೆ.
ದುಷ್ಕರ್ಮಿಗಳಿಂದ ಹತ್ಯೆಗೆ ಒಳಗಾದ ಹರ್ಷನ ಕುಟುಂಬಕ್ಕೆ ಸಾಂತ್ವನ ಹೇಳಲು ಬರುತ್ತಿದ್ದ ಪಾಲಿಕೆ ಸದಸ್ಯರು, ಮಂತ್ರಿಗಳು ಈಗ ಕಾಣೆಯಾಗಿದ್ದಾರೆ ಎಂದು ಕಿಡಿ ಕಾರಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post