Thursday, November 20, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ ಸೊರಬ

ಸೊರಬ | ಸೋರುತ್ತಿವೆ ಕೊಠಡಿಗಳು, ಜೀವಭಯದಲ್ಲೇ ಪಾಠ ಕೇಳುವ ಅನಿವಾರ್ಯತೆಯಲ್ಲಿ ಮಕ್ಕಳು

ಶಿಕ್ಷಣ ಸಚಿವರ ಕ್ಷೇತ್ರದಲ್ಲಿನ ವಿದ್ಯಾರ್ಥಿಗಳ ಗೋಳು ದೇವರಿಗೇ ಪ್ರೀತಿ | ಪರಿಹಾರ ದೊರೆಯುವುದೇ?

July 20, 2024
in ಸೊರಬ
0 0
0
Share on facebookShare on TwitterWhatsapp
Read - 3 minutes

ಕಲ್ಪ ಮೀಡಿಯಾ ಹೌಸ್  |  ಸೊರಬ  |

ಹೆಸರಿಗಷ್ಟೇ ಶಿಕ್ಷಣ ಸಚಿವರ ಕ್ಷೇತ್ರ. ಆದರೆ, ಇಲ್ಲಿನ ಈ ಒಂದು ಶಾಲೆಯಲ್ಲಿ ಜೀವ ಒತ್ತಯಿಟ್ಟು ಪಾಠ ಕೇಳಬೇಕಾದ ಅನಿವಾರ್ಯತೆಯಲ್ಲಿರುವ ವಿದ್ಯಾರ್ಥಿಗಳ ಗೋಳು ಮಾತ್ರ ದೇವರಿಗೆ ಪ್ರೀತಿ…

ಹೌದು… ಇದು ಸೊರಬ #Soraba ತಾಲೂಕಿನ ಶಂಕ್ರಿಕೊಪ್ಪ ಸರ್ಕಾರಿ ಪ್ರಾಥಮಿಕ ಶಾಲೆಯ ಹಾಗೂ ಮಕ್ಕಳು ಮಳೆಗಾಲದಲ್ಲಿ ಎದುರಿಸುತ್ತಿರುವ ಸಮಸ್ಯೆಯಿದು. ಮಳೆಗಾಲವನ್ನು #Winter ಆನಂದಿಸಬೇಕಾದ ಈ ಶಾಲೆಯ ಮಕ್ಕಳಿಗೆ ಈ ಕಾಲವೇ ಸಂಕಷ್ಟ ತಂದೊಡ್ಡಿದೆ. ಇದಕ್ಕೆ ಕಾರಣ ಶಾಲೆಯ ಕೊಠಡಿಗಳು ಸೋರುತ್ತಿರುವುದು.

ಜಿಲ್ಲೆ ಸೇರಿದಂತೆ ತಾಲೂಕಿನಲ್ಲೂ ನಿರಂತರವಾಗಿ ಕಳೆದ ಕೆಲ ದಿನಗಳಿಂದ ಮಳೆ ಸುರಿಯುತ್ತಿದ್ದು, ಕೊಠಡಿಗಳು ಸೋರುತ್ತಿವೆ. ತಾಲೂಕಿನ ಶಂಕ್ರಿಕೊಪ್ಪ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ 35ಕ್ಕೂ ಹೆಚ್ಚು ಮಕ್ಕಳು ಓದುತ್ತಿದ್ದಾರೆ. ಆದರೆ ವಿಪರೀತವಾಗಿ ಮಳೆಗೆ ಮಕ್ಕಳು ಶಾಲೆಯಲ್ಲಿ ಪರದಾಡುವ ಸ್ಥಿತಿ ಇಲ್ಲಿ ಬಾಧಿಸುತ್ತಿದೆ.

Also read: ಮನೆ ಊಟಕ್ಕಾಗಿ ದರ್ಶನ್ ನ್ಯಾಯಾಲಯದ ಮೊರೆ: ಹೈಕೋರ್ಟ್ ಆದೇಶವೇನು?
ಒಂದಡೆ ಕೊಠಡಿಗಳು ಕಳಪೆ ಕಾಮಗಾರಿಯಿಂದ ಸೋರಿದರೆ, ಇನ್ನೊಂದಡೆ ಮಳೆ ನೀರು ಕೋಣೆಯೊಳಗೆ ಬೀಳುವುದರಿಂದ ಮಕ್ಕಳು ಮಳೆ ನೀರಲ್ಲಿಯೇ ಪಾಠ ಕೇಳುತ್ತಿದ್ದಾರೆ.

ಯಾವಾಗ ಕಟ್ಟಡ ನಿರ್ಮಾಣವಾಗಿತ್ತು?
ಎಸ್’ಎಸ್’ಎ ಯೋಜನೆಯಡಿಯಲ್ಲಿ #SSAScheme 2019-20ರಲ್ಲಿ ಶಾಲೆಯ ಮುಖ್ಯೋಪಾಧ್ಯಾಯರು ಹಾಗೂ ಎಸ್’ಡಿಎಂಸಿ #SDMC ಖಾತೆಯ ಮೂಲಕ ಜಂಟಿಯಾಗಿ ಈ ಶಾಲಾ ಕೊಠಡಿಯ ಕಟ್ಟಡ ನಿರ್ಮಾಣ ಆರಂಭಗೊಂಡು, 2011-12ರಲ್ಲಿ ಪೂರ್ಣ ಪ್ರಮಾಣದಲ್ಲಿ ಮುಕ್ತಾಯಗೊಂಡಿತ್ತು.

ಈ ಕೊಠಡಿಯ ಕಟ್ಟಡ ನಿರ್ಮಾಣಕ್ಕೆ 3.80 ಲಕ್ಷ ರೂ. ವೆಚ್ಚ ಮಾಡಲಾಗಿತ್ತು. ಆದರೆ, 2012-13ರಿಂದಲೇ ಮಳೆಗಾಲದಲ್ಲಿ ಕಟ್ಟಡದ ಒಳಗೆ ನೀರು ಸಿಡಿಯಲು ಆರಂಭವಾಗಿತ್ತು. ಅದು ಮಕ್ಕಳಿಗೆ ಮಳೆಗಾಲದಲ್ಲಿ ಸಮಸ್ಯೆಯಾಗಿ ಪರಿಣಮಿಸಿತು.

ಜೀವ ಭಯದಲ್ಲಿಯೇ ಪಾಠ ಕೇಳುವ ಸ್ಥಿತಿ ಎದುರಾಗಿದೆ. ಕೊಠಡಿ ಸೋರಿ ವಿದ್ಯುತ್ ಗ್ರೌಂಡಿಂಗ್ ಆಗಿ ದೊಡ್ಡ ಅನಾಹುತಕ್ಕೆ ಎಡೆಮಾಡಿಕೊಡುವ ಸಾಧ್ಯತೆಯಿದೆ. ಹೀಗಾಗಿ ಸಂಬಂಧಿಸಿದ ಅಧಿಕಾರಿಗಳು ಶೀಘ್ರ ಹೊಸ ಕೊಠಡಿ ನಿರ್ಮಾಣ ಮಾಡಿಕೊಡಬೇಕು.
-ರಶ್ಮಿ, ವಿದ್ಯಾರ್ಥಿನಿ

ಇನ್ನೊಂದೆಡೆ, 2022-23ರಲ್ಲಿ ಪಂಚಾಯ್ತಿ ಕಾರ್ಯಾಲಯ ಶಕುನವಳ್ಳಿ ವತಿಯಿಂದ ಸುಮಾರು 70 ಮೀಟರ್’ಗಳಷ್ಟು ಕಾಂಪೌಂಡ್ ಗೋಡೆಯನ್ನು ಅಂದಾಜು 3 ಲಕ್ಷ ರೂ.ಗಳಲ್ಲಿ ನಿರ್ಮಾಣ ಎಂದು ಫಲಕ ಮಾತ್ರ ಇದೆ. ಆದರೆ, ಕಾಂಪೌಂಡ್ ಗೋಡೆ ಮಾತ್ರ ಕಾಣೆಯಾಗಿದೆ. ಕಾಂಪೌಂಡ್ ನಿರ್ಮಾಣದ ಕೆಲಸ ಉದ್ಯೋಗ ಖಾತ್ರಿ ಯೋಜನೆಯಡಿ 2 ವರ್ಷಗಳ ಹಿಂದೆ ನೀಡಿದ್ದರೂ ಇನ್ನು ನಿರ್ಮಾಣಗೊಂಡಿಲ್ಲ ಎನ್ನುವುದೂ ಸಹ ಆರೋಪವಾಗಿದೆ.

ಈ ಕಟ್ಟಡದ ದುಸ್ಥಿತಿಯ ಕುರಿತಾಗಿ ಕಳೆದ 3 ವರ್ಷಗಳಿಂದ ಜನಪ್ರತಿನಿಧಿಗಳು ಹಾಗೂ ಸಂಬಂಧಿಸಿದ ಅಧಿಕಾರಿಗಳಿಗೆ ಮಾಹಿತಿ ನೀಡಿ, ಹೊಸ ಕೊಠಡಿಗಳ ನಿರ್ಮಾಣ ಹಾಗೂ ಸೋರುತ್ತಿರುವ ಕೊಠಡಿಗಳ ದುರಸ್ಥಿಗೆ ಕ್ರಮ ಕೈಗೊಂಡಿಲ್ಲ ಎನ್ನುವುದು ಗ್ರಾಮಸ್ಥರ ಆರೋಪವಾಗಿದೆ.

ಇನ್ನು, ಶೌಚಾಲಯ ಕೊಠಡಿಗಳ ಗೋಡೆ ಬಿರುಕು ಬಿಟ್ಟಿದ್ದು ಯಾವಾಗ ಕುಸಿದು ಬೀಳುತ್ತೋ ಅನ್ನೋ ಆತಂಕ ಮಕ್ಕಳನ್ನು ಕಾಡುತ್ತಿದೆ. ಕೊಠಡಿಯ ಗೋಡೆ ಮೇಲೆ ನೀರಿಳಿದು ವಿದ್ಯುತ್ ಮೀಟರ್ ಸುತ್ತ ಆವರಿಸಿದೆ. ಶಾಲಾ ಬಾಗಿಲು ಕಬ್ಬಿಣದಾಗಿದ್ದು, ಮಕ್ಕಳಿಗೆ ಕರೆಂಟ್ ತಗುಲುವ ಸಾಧ್ಯತೆ ಹೆಚ್ಚಿದೆ.ಕಳಪೆ ಕಾಮಗಾರಿ, ಭ್ರಷ್ಟಾಚಾರ?
ಇನ್ನು ಕೆಲವು ವರ್ಷಗಳ ಹಿಂದೆ ನಿರ್ಮಾಣವಾದ ಈ ಶಾಲಾ ಕೊಠಡಿಗಳು ಸೋರುತ್ತಿವೆ. ಶೌಚಾಲಯ ಬಿರುಕುಬಿಟ್ಟು ಬೀಳುವ ಹಂತಕ್ಕೆ ತಲುಪಿವೆ. ಗುತ್ತಿಗೆ ಪಡೆದವರು ಮತ್ತು ಅಧಿಕಾರಿಗಳು ಶಾಮೀಲಾಗಿ, ಕಳಪೆ ಕೊಠಡಿಗಳ ಕಾಮಗಾರಿ ಮಾಡಿದ್ದಾರೆ ಎಂದು ಗ್ರಾಮಸ್ಥರು ಆರೋಪಿಸುತ್ತಾರೆ.

ಕೆಲವೇ ವರ್ಷಗಳ ಹಿಂದೆ ನಿರ್ಮಾಣ ಮಾಡಿರುವ ಕೊಠಡಿಗಳು ಅವೈಜ್ಞಾನಿಕ ಕಾಮಗಾರಿಯಿಂದ ಕೂಡಿದ ಎನ್ನುವುದು ಮೇಲ್ನೋಟಕ್ಕೆ ಖಾತ್ರಿಯಗುತ್ತದೆ.
ಇನ್ನು ಮಕ್ಕಳು ಜೀವ ಭಯದಲ್ಲಿಯೇ ಪಾಠ ಕೇಳುತ್ತಿದ್ದಾರೆ. ಕೊಠಡಿ ಸೋರಿ ವಿದ್ಯುತ್ ಗ್ರೌಂಡಿಂಗ್ ಆಗಿ ದೊಡ್ಡ ಅನಾಹುತಕ್ಕೆ ಎಡೆಮಾಡುವ ಸಾಧ್ಯತೆಯನ್ನು ತಳ್ಳಿ ಹಾಕುವಂತಿಲ್ಲ.

ಇದರೊಂದಿಗೆ ಮಳೆಯಿಂದ ರಕ್ಷಿಸಿಕೊಳ್ಳಲು ತಾತ್ಕಾಲಿಕವಾಗಿ ಟಾಡ್ಪಾಲ್ ಆದರೂ ಒದಗಿಸಿ ಎಂದು ಬೇಡಿಕೆ ಇಟ್ಟರೂ ಅದಕ್ಕೂ ಯಾವುದೇ ಅಧಿಕಾರಿಗಳು ಸ್ಪಂದಿಸಿಲ್ಲ ಎನ್ನುವುದು ಆರೋಪವಾಗಿದೆ.

ಇಲ್ಲಿನ ಅವ್ಯವಹಾರದ ಬಗ್ಗೆ ತನಿಖೆ ನಡೆಸಿದರೆ ದೊಡ್ಡ ಭ್ರಷ್ಟಾಚಾರವೇ ಹೊರಬರುತ್ತೆ ಎಂದು ಎಸ್’ಡಿಎಂಸಿ ಸದಸ್ಯರು ಹೇಳುತ್ತಾರೆ.

ಕೊಠಡಿಗಳ ದುರಸ್ಥಿ, ಹೊಸ ಕೊಠಡಿಗಳ ನಿರ್ಮಾಣಕ್ಕೆ ಸರ್ಕಾರ ಮುಂದಾಗಬೇಕಿದೆ. ಜೊತೆಗೆ ಕಳಪೆ ಗುಣಮಟ್ಟದ ಕೊಠಡಿಗಳ ನಿರ್ಮಾಣ ಮಾಡಿರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ಇಲ್ಲಿನ ಅವ್ಯವಹಾರದ ಬಗ್ಗೆ ತನಿಖೆ ನಡೆಸಿದರೆ ದೊಡ್ಡ ಭ್ರಷ್ಟಾಚಾರವೇ ಹೊರಬರುತ್ತದೆ.
-ಶ್ರೀಕಾಂತ್, ಎಸ್’ಡಿಎಂಸಿ ಸದಸ್ಯರು

Kalahamsa Infotech private limitedಶಿಕ್ಷಣ ಸಚಿವರ ಕ್ಷೇತ್ರದಲ್ಲೇ ಈ ಗೋಳು
ಸರ್ಕಾರಿ ಶಾಲೆಗಳಲ್ಲಿ ಇತ್ತೀಚೆಗೆ ಮಕ್ಕಳ ಸಂಖ್ಯೆ ಕಡಿಮೆಯಾಗುತ್ತಿದೆ. ಸೌಲಭ್ಯಗಳ ಕೊರತೆಯಿಂದ ಅನೇಕರು ಖಾಸಗಿ ಶಾಲೆಗಳತ್ತ ಮುಖ ಮಾಡುತ್ತಿದ್ದಾರೆ. ಹೀಗಿರುವಾಗ ಶಿಕ್ಷಣ ಸಚಿವರು ಪ್ರತಿನಿಧಿಸುವ ಕ್ಷೇತ್ರದ ಒಂದು ಸರ್ಕಾರಿ ಶಾಲೆಯ ಸ್ಥಿತಿಯೇ ಹೀಗಾದರೆ ಹೇಗೆ?

ಹತ್ತಾರು ಭಾಗ್ಯಗಳನ್ನು ನೀಡುತ್ತಿರುವ ಸರ್ಕಾರ, ಮಕ್ಕಳ ಭವಿಷ್ಯವನ್ನು ರೂಪಿಸುವ ಸರ್ಕಾರಿ ಶಾಲೆಗಳ ದುರಸ್ಥಿ ಮತ್ತು ಹೊಸ ಕೊಠಡಿಗಳ ನಿರ್ಮಾಣ ಭಾಗ್ಯವನ್ನು ಕೂಡಾ ನೀಡಬೇಕಾಗಿದೆ. ಆ ಮೂಲಕ ಮಕ್ಕಳು ಭಯಮುಕ್ತ, ಆತಂಕಮುಕ್ತವಾಗಿ ಪಾಠ ಕೇಳುವಂತಹ ಸ್ಥಿತಿ ನಿರ್ಮಾಣ ಮಾಡಬೇಕಿದೆ. ಇನ್ನಾದರೂ ಸರ್ಕಾರ ಈ ಕೊಠಡಿಗಳ ದುರಸ್ಥಿ, ಹೊಸ ಕೊಠಡಿಗಳ ನಿರ್ಮಾಣಕ್ಕೆ ಮುಂದಾಗಬೇಕಿದೆ. ಜೊತೆಗೆ ಕಳಪೆ ಗುಣಮಟ್ಟದ ಕೊಠಡಿಗಳ ನಿರ್ಮಾಣ ಮಾಡಿರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕಾಗಿದೆ.

ಶಿಕ್ಷಣ ಸಚಿವರು ಈ ಬಗ್ಗೆ ಶೀಘ್ರ ಗಮನ ಹರಿಸಿಯಾರೆ?

(ವರದಿ: ಮಧುರಾಮ್, ಸೊರಬ)

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

Tags: Government SchoolGovt Primary SchoolKannada News WebsiteLatest News Kannadaschool roomSDMCShimogaShivamoggaShivamogga NewsSorabaSSC Schemeಎಸ್'ಎಸ್'ಎ ಯೋಜನೆಎಸ್'ಡಿಎಂಸಿಭಾರಿ ಮಳೆಮಳೆಗಾಲಶಾಲಾ ಕೊಠಡಿಶೌಚಾಲಯಸರ್ಕಾರಿ ಪ್ರಾಥಮಿಕ ಶಾಲೆಸರ್ಕಾರಿ ಶಾಲೆಸೊರಬ
Previous Post

ಶಾಸಕ ಡಾ. ಧನಂಜಯ ಸರ್ಜಿ ಮನವಿಗೆ ರಾಜ್ಯ ಸರ್ಕಾರ ಸ್ಪಂದನೆ

Next Post

ಮಲೆನಾಡಿನಲ್ಲಿ ನಿರಂತರ ಮಳೆ | ಜಲಾಶಯಗಳ ಒಳಹರಿವು ಹೆಚ್ಚಳ | ನೀರಿನ ಮಟ್ಟ ಎಷ್ಟಿದೆ?

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಮಲೆನಾಡಿನಲ್ಲಿ ನಿರಂತರ ಮಳೆ | ಜಲಾಶಯಗಳ ಒಳಹರಿವು ಹೆಚ್ಚಳ | ನೀರಿನ ಮಟ್ಟ ಎಷ್ಟಿದೆ?

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಬೆಂಗಳೂರು | 21 ವಿದ್ಯಾರ್ಥಿಗಳ ನೃತ್ಯಾರೋಹಣ ಸಂಪನ್ನ

November 20, 2025

ಮೂಲಭೂತ ಸೌಕರ್ಯ ನಿರ್ವಹಣೆಯಲ್ಲಿ ಸಂಪೂರ್ಣ ವಿಫಲ: ಕೆ.ಬಿ. ಪ್ರಸನ್ನಕುಮಾರ್ ಆಕ್ರೋಶ

November 19, 2025

ಜಾತ್ಯತೀತತೆ, ಸೌಹಾರ್ದತೆ ಒಳಗೊಂಡ ಕನ್ನಡ ಪ್ರಜ್ಞೆ ದಾರಿದೀಪವಾಗಲಿ: ಬರಗೂರು ರಾಮಚಂದ್ರಪ್ಪ ಆಶಯ

November 19, 2025

ಅಮಾಯಕರ ಮೇಲೆ ಹಲ್ಲೆ | ಆರೋಪಿಗಳ ಬಂಧನಕ್ಕೆ ರಾಷ್ಟ್ರಭಕ್ತರ ಬಳಗ ಆಗ್ರಹ

November 19, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕಾನೂನು ಕಲ್ಪ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಬೆಂಗಳೂರು | 21 ವಿದ್ಯಾರ್ಥಿಗಳ ನೃತ್ಯಾರೋಹಣ ಸಂಪನ್ನ

November 20, 2025

ಮೂಲಭೂತ ಸೌಕರ್ಯ ನಿರ್ವಹಣೆಯಲ್ಲಿ ಸಂಪೂರ್ಣ ವಿಫಲ: ಕೆ.ಬಿ. ಪ್ರಸನ್ನಕುಮಾರ್ ಆಕ್ರೋಶ

November 19, 2025

ಜಾತ್ಯತೀತತೆ, ಸೌಹಾರ್ದತೆ ಒಳಗೊಂಡ ಕನ್ನಡ ಪ್ರಜ್ಞೆ ದಾರಿದೀಪವಾಗಲಿ: ಬರಗೂರು ರಾಮಚಂದ್ರಪ್ಪ ಆಶಯ

November 19, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!