ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ರಾಜ್ಯ ವಿಧಾನಸಭಾ ಚುನಾವಣೆಗೆ ಘೋಷಣೆಯಾಗಿರುವ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಅಕ್ರಮ ನಡೆಯದಂತೆ ತಡೆಯಲು ತೆರೆಯಲಾಗಿರುವ ಚೆಕ್ ಪೋಸ್ಟ್’ಗಳಿಗೆ ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ. ಮಿಥುನ್ ಕುಮಾರ್ ಅವರು ತಡರಾತ್ರಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ತಡರಾತ್ರಿ ಎಸ್’ಪಿ ಮಿಥುನ್ ಕುಮಾರ್, ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಅನಿಲ್ ಕುಮಾರ್ ಭೂಮರೆಡ್ಡಿ, ಪೊಲೀಸ್ ಉಪ ಅಧೀಕ್ಷಕರು, ಪೊಲೀಸ್ ವೃತ್ತ ನಿರೀಕ್ಷಕರು, ಪೊಲೀಸ್ ನಿರೀಕ್ಷಕರು ಹಾಗೂ ಪೊಲೀಸ್ ಉಪ ನಿರೀಕ್ಷಕರುಗಳು ತಮ್ಮ ವ್ಯಾಪ್ತಿಯ ಚೆಕ್ ಪೋಸ್ಟ್’ಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Also read: ತೀರ್ಥಹಳ್ಳಿಯಲ್ಲಿ ಹನಿಟ್ರಾಪ್’ಗೆ ಸೆರೆ ಸಿಕ್ಕ ಕಾಡಾನೆ: ಹೇಗಿತ್ತು ಕಾರ್ಯಾಚರಣೆ?
ಇನ್ನು, ಎಸ್’ಪಿ ಮಿಥುನ್ ಕುಮಾರ್ ಅವರು ವಿವಿಧ ಚೆಕ್ ಪೋಸ್ಟ್’ಗಳಿಗೆ ರಾತ್ರಿ ಭೇಟಿ ನೀಡಿ, ಸಿಬ್ಬಂದಿಗಳ ಕಾರ್ಯವೈಖರಿಯನ್ನು ಪರಿಶೀಲಿಸಿದರು. ಚೆಕ್ ಪೋಸ್ಟ್’ಗಳಲ್ಲಿನ ದಾಖಲೆ ಪುಸ್ತಕವನ್ನು ಪರಿಶೀಲಿಸಿದ ಅವರು, ಕಟ್ಟುನಿಟ್ಟಿನ ಪರಿಶೀಲನೆಗೆ ಸಿಬ್ಬಂದಿಗಳಿಗೆ ಸೂಚನೆ ನೀಡಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post