ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಜಿಲ್ಲೆಯಲ್ಲಿ ಮಾ.21 ರಿಂದ ಏ.04 ರವರೆಗೆ ಎಸ್ಎಸ್ಎಲ್ಸಿ ಪರೀಕ್ಷೆಗಳು #SSLC Exam ನಡೆಯಲಿದ್ದು, ಶಾಂತಿಯುತವಾಗಿ ಮತ್ತು ಪಾರದರ್ಶಕವಾಗಿ ಪರೀಕ್ಷೆಗಳು ನಡೆಯಲು ಅಗತ್ಯವಾದ ಸಕಲ ಸಿದ್ದತೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ಜಿಪಂ ಸಿಇಓ ಹೇಮಂತ್ ಎನ್ ತಿಳಿಸಿದರು.
ಕುವೆಂಪು ರಂಗಮಂದಿರದಲ್ಲಿ ಮಾ.17 ರಂದು ಪರೀಕ್ಷೆಗೆ ನಿಯೋಜಿತಗೊಂಡ ಅಧಿಕಾರಿಗಳೊಂದಿಗೆ ಏರ್ಪಡಿಸಲಾಗಿದ್ದ ಎಸ್ಎಸ್ಎಲ್ಸಿ ಪರೀಕ್ಷೆ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಪರೀಕ್ಷಾ ಕೇಂದ್ರಗಳಲ್ಲಿ ಕುಡಿಯುವ ನೀರು, ಸೂಕ್ತ ಆಸನಗಳ ವ್ಯವಸ್ಥೆ ಸೇರಿದಂತೆ ಮೂಲಭೂತ ಸೌಕರ್ಯಗಳ ಸೂಕ್ತ ವ್ಯವಸ್ಥೆ ಇರುವುದನ್ನು ಬಿಇಓ ಗಳು ಭೇಟಿ ನೀಡಿ ಖಾತ್ರಿ ಪಡಿಸಿಕೊಳ್ಳಬೇಕು.

Also read: ಈ ಕಾರಣಕ್ಕಾಗಿ ಸಿಎಂ ಸಿದ್ದರಾಮಯ್ಯ ಆರ್’ಎಸ್’ಎಸ್’ನ್ನು ಟೀಕಿಸುತ್ತಾರೆ | ಬೊಮ್ಮಾಯಿ ಹೇಳಿದ್ದೇನು?
ದೂರದಿಂದ ಬರುವ ವಿದ್ಯಾರ್ಥಿಗಳಿಗೆ ಸಾರಿಗೆ ವ್ಯವಸ್ಥೆ ಮಾಡಲು ಹಾಗೂ ಪರೀಕ್ಷಾ ಕೇಂದ್ರಗಳಲ್ಲಿ ಓಆರ್ಎಸ್, ಪ್ರಥಮ ಚಿಕಿತ್ಸೆ ಕಿಟ್ ಇರಿಸಿಕೊಳ್ಳಲು ಸೂಚಿಸಲಾಗಿದೆ. ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷಾ ಸಿಬ್ಬಂದಿ ಮತ್ತು ಜಾಗೃತ ದಳ ಅಧಿಕಾರಿಗಳನ್ನು ಹೊರತುಪಡಿಸಿ ಇನ್ನಾವ ಸಾರ್ವಜನಿಕರಿಗೆ, ಸಂಘ ಸಂಸ್ಥೆಗಳಿಗೆ ಪ್ರವೇಶ ಇರುವುದಿಲ್ಲ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news








Discussion about this post