ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ನಗರದ ಲಷ್ಕರ್ ಮೊಹಲ್ಲಾದಲ್ಲಿ ಆರೋಪಿಯನ್ನು ಹಿಡಿಯಲು ಹೋದ ಪೊಲೀಸ್ ಪೇದೆಯ ಎದೆಗೆ ರೌಡಿಯೊಬ್ಬ ಚಾಕುವಿನಿಂದ ಇರಿದ ಘಟನೆ ವರದಿಯಾಗಿದೆ.
ಆರೋಪಿ ಶಾಹಿದ್ ಖರೇಷಿಯನ್ನು ಲಷ್ಕರ್ ಮೊಹಲ್ಲಾದಲ್ಲಿ ಹಿಡಿಯಲು ಇಬ್ಬರು ಪೊಲೀಸರು ತೆರಳಿದ್ದು ಈ ಸಂದರ್ಭದಲ್ಲಿ ಇಬ್ಬರ ಮೇಲೆ ಹಲ್ಲೆ ಯತ್ನಿಸಿದ ಆರೋಪಿ ಪೊಲೀಸ್ ಪೇದೆ ಗುರು ನಾಯಕ್ ಎದೆಗೆ ಚಾಕುವಿನಿಂದ ಚುಚ್ಚಿದ್ದಾನೆ. ಈ ಘಟನೆಗೆ ನಡೆದ ತಕ್ಷಣವೇ ಶಾಹಿದ್ ಕೋಟೆ ಠಾಣೆಗೆ ಬಂದು ಶರಣಾಗಿದ್ದಾನೆ.
Also read: ‘ಮಾನವೀಯತೆಗಾಗಿ ಯೋಗ’ ಯಶಸ್ವಿಯಾಗಲಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾರೈಕೆ
ಗಾಯಾಳು ಪೊಲೀಸ್ ಪೇದೆಯನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದ್ದು, ಮೆಗ್ಗಾನ್ ಆಸ್ಪತ್ರೆಗೆ ಎಸ್.ಪಿ ಲಕ್ಷ್ಮೀಪ್ರಸಾದ್ ಭೇಟಿ ನೀಡಿ ಪೇದೆಯ ಆರೋಗ್ಯ ವಿಚಾರಿಸಿದ್ದಾರೆ ಎನ್ನಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post