ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ರಾಹುಲ್ ಗಾಂಧಿ #Rahul Gandhi ಸೇರಿದಂತೆ ರಾಜ್ಯ ಕಾಂಗ್ರೆಸ್ ಹುಚ್ಚರ ಸಂತೆಯಾಗಿದೆ ಎಂದು ಶಾಸಕ ಎಸ್.ಎನ್. ಚನ್ನಬಸಪ್ಪ #MLA Channabasappa ಹರಿಹಾಯ್ದರು.
ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೆ ಈಗಾಗಲೇ ಸುಪ್ರೀಂ ಕೋರ್ಟ್ ಛೀಮಾರಿ ಹಾಕಿದೆ. ಭಾರತ ದೇಶದಲ್ಲಿ ದೇಶಕ್ಕೆ ಪೂರಕವಾಗಿ ನೀವು ವರ್ತಿಸುತ್ತಿಲ್ಲ ಎಂದು ಕಟು ಮಾತಿನಲ್ಲಿ ಎಚ್ಚರಿಸಿದೆ. ಚೀನಾದ ವಿಷಯಕ್ಕೆ ಸಂಬಂಧಿಸದಿಂತೆ ಕಾಂಗ್ರೆಸ್ ಯಾವಾಗಲು ಸುಳ್ಳು ಹೇಳುತ್ತಲೇ ಬಂದಿದೆ. ಅದನ್ನೇ ರಾಹುಲ್ ಗಾಂಧಿ ಅವರು ಕೂಡ ಮುಂದುವರೆಸಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇನ್ನು ರಾಜ್ಯದಲ್ಲಿ ಕಾರ್ಮಿಕ ಸಚಿವ ಸಂತೋಷ್ ಲಾಡ್ ಕೂಡ ಮನಸಿಗೆ ಬಂದಂತೆ ಮಾತನಾಡುತ್ತಾರೆ. ಪ್ರಧಾನಿ ಮೋದಿ ಅವರ ಬಗ್ಗೆ ಮಾತನಾಡುವ ಯೋಗ್ಯತೆ ಈ ಲಾಡ್ ಅವರಿಗೆ ಇಲ್ಲ. ಮೋದಿ ಜಗತ್ತಿನಲ್ಲಿಯೇ ಹೆಸರಾದವರು. ಕಾರ್ಮಿಕರ ಸಮಸ್ಯೆಗಳನ್ನು ಹೇಳಲು ಮತ್ತು ಅದನ್ನು ನಿವಾರಿಸಲು ಅವರು ಶಿವಮೊಗ್ಗಕ್ಕೆ ಬಂದಿದ್ದರು. ಆದರೆ ಅದನ್ನು ಬಿಟ್ಟು ಮೋದಿ ಅವರ ಬಗ್ಗೆ ದೇಶದ ಜಿಡಿಪಿ ಮತ್ತು ಡಿಮಾನಿಟೈಸೇಷನ್ ಬಗ್ಗೆ ಮಾತನಾಡುತ್ತಾರೆ. ಮೋದಿ ಅವರ ಬಗ್ಗೆ ಮಾತನಾಡುವಾಗ ಅವರು ಎಚ್ಚರಿಕೆಯಿಂದಿರಬೇಕು ಎಂದರು.

ಕೆ.ಎಸ್.ಆರ್.ಟಿ.ಸಿ. ನೌಕರರ ಮುಷ್ಕರ ಒಂದು ರೀತಿಯಲ್ಲಿ ಸರ್ಕಾರಿ ಪ್ರಾಯೋಜಿತವಾಗಿದೆ. ಈ ರೀತಿಯ ಮುಷ್ಕರ ಮಾಡಿ ಸಮಸ್ಯೆಯನ್ನು ದೊಡ್ಡದು ಮಾಡಿ ಹಣ ಕೊಡಲಾಗದೇ ಶಕ್ತಿ ಯೋಜನೆಯನ್ನೇ ನಿಲ್ಲಿಸುವ ಹುನ್ನಾರವಿದು ಎನಿಸುತ್ತದೆ. ರಾಜ್ಯ ಸರ್ಕಾರ ಈ ವಿಷಯದಲ್ಲಿ ನೌಕರರ ಸಮಸ್ಯೆ ಬಗೆಹರಿಸುವತ್ತ ಗಮನಹರಿಸಬೇಕು ಎಂದರು.
ಟಿಪ್ಪು ವಿವಾದಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಅವರು ಮೈಸೂರು ಸಾಮ್ರಾಜ್ಯವನ್ನು ದೇವರಾಜ ಅರಸು ಅವರು ಕರ್ನಾಟಕ ಎಂದು ನಾಮಕರಣ ಮಾಡಿದ್ದರು. ಈಗಿನ ಸರ್ಕಾರವಾಗಿದ್ದರೆ ಟಿಪ್ಪು ಸಾಮ್ರಾಜ್ಯ ಎಂದು ಹೆಸರಿಡುತ್ತಿದ್ದರು ಎಂದು ವ್ಯಂಗ್ಯವಾಡಿದ ಅವರು ಒಬ್ಬ ನರಹಂತಕ ಟಿಪ್ಪುವನ್ನು ವೈಭವೀಕರಿಸುತ್ತಿರುವುದನ್ನು ನೋಡಿದರೆ ಇವರು ಇನ್ನೆಷ್ಟು ದಿನ ಓಲೈಕೆ ರಾಜಕಾರಣ ಮಾಡುತ್ತಾರೆ ಎಂದು ಪ್ರಶ್ನೆಮಾಡಿದರು.

ರಾಹುಲ್ ಗಾಂಧಿ ಅವರು ಸೇರಿದಂತೆ ಕಾಂಗ್ರೆಸ್ ನಾಯಕರು ಮನಸ್ಸಿಗೆ ಬಂದಂತೆ ಮಾತನಾಡುತ್ತಿದ್ದಾರೆ. ಇವರು ತಮ್ಮ ಮಾತುಗಳನ್ನು ತಿದ್ದಿಕೊಳ್ಳಬೇಕು. ಇವಿಎಂ ಬಗ್ಗೆ ಕಾಂಗ್ರೆಸ್ ನವರು ಮಾತನಾಡುತ್ತಾರೆ. ಕರ್ನಾಟಕದ ಫಲಿತಾಂಶದ ಬಗ್ಗೆ ಏಕೆ ಮಾತನಾಡುತ್ತಿಲ್ಲ? ಚುನಾವಣಾ ಆಯೋಗಕ್ಕೂ ಇವರಿಗೆ ಗೌರವವಿಲ್ಲ. ಕಾಂಗ್ರೆಸ್ ನ ಭೌತಿಕತೆಯೇ ದಿವಾಳಿಯಾಗಿದೆ ಎಂದು ಟೀಕಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಪ್ರಮುಖರಾದ ಜಗದೀಶ್, ಮಾಲತೇಶ್, ಅಣ್ಣಪ್ಪ ಕೆ.ವಿ., ಕೆ.ಜಿ. ಕುಮಾರಸ್ವಾಮಿ, ವಿನ್ಸೆಂಟ್ ರೋಡ್ರಿಗಸ್ ಇದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news









Discussion about this post