ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ರಾಜ್ಯ ಸರ್ಕಾರ ಸಂಪೂರ್ಣ ಅಂಗವಿಕಲವಾಗಿದೆ ಎಂದು ರಾಷ್ಟ್ರಭಕ್ತ ಬಳಗದ ಸಂಚಾಲಕ ಕೆ.ಎಸ್. ಈಶ್ವರಪ್ಪ #K S Eshwarappa ಟೀಕಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಸರ್ಕಾರಕ್ಕೆ ಕಣ್ಣೀಲ್ಲ, ಕಿವಿಯಿಲ್ಲ, ಹೃದಯವೂ ಇಲ್ಲ, ಬರೀ ಗೊಂದಲಮಯವಾಗಿದೆ. ಪರಸ್ಪರ ಅವರವರ ಹೇಳಿಕೆಗಳೇ ವಿಚಿತ್ರವಾಗಿವೆ. ಜಾತಿ ಗಣತಿ ಹೆಸರಿನಲ್ಲಿ ಹಿಂದೂ ಧರ್ಮವನ್ನೇ ಒಡೆಯಲು ನೋಡಿದರು. ವೀರಶೈವ ಧರ್ಮದಲ್ಲಿ ಭಿನ್ನಾಭಿಪ್ರಾಯ ಹುಟ್ಟಿಸಿದರು. ಅಭಿವೃದ್ಧಿ ಸಂಪೂರ್ಣ ಕುಂಠಿತಗೊಂಡಿದೆ ಎಂದರು.

ಒಂದು ಕಡೆ ಡಿಕೆಶಿ ಬೆಂಬಲಿಗರು, ಮತ್ತೊಂದು ಕಡೆ ಸಿದ್ದರಾಮಯ್ಯ ಬೆಂಬಲಿಗರು ಅವರವರೇನಾನು ಮುಖ್ಯಮಂತ್ರಿಯಾಗುತ್ತೇನೆ, ನಾನು ಮುಖ್ಯಮಂತ್ರಿ ಸ್ಥಾನದಿಂದ ಇಳಿಯುವುದಿಲ್ಲ ಎಂಬ ಮಾತುಗಳು ಕೇಳಿಬರುತ್ತಿದೆ. ಹೈಕಮಾಂಡ್ ನಾಯಕರು ಬಾಯಿ ಬಿಡುತ್ತಿಲ್ಲ ಎಂದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news











Discussion about this post