ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ನಗರದ ಜೈನ್ ಪಬ್ಲಿಕ್ ಶಾಲೆಯ 8ನೇ ತರಗತಿ ವಿದ್ಯಾರ್ಥಿನಿ ಮದಿಹ ಇಬ್ರಾಹಿಂಗೆ ತರೀಕೆರೆ ಓಪನ್ 11ನೇ ರಾಜ್ಯಮಟ್ಟದ ಕರಾಟೆ ಪಂದ್ಯಾವಳಿಯಲ್ಲಿ ಪ್ರಥಮ ಬಹುಮಾನ ಗಳಿಸಿದ್ದು, ಪ್ರಾಂಶುಪಾಲೆ ಪ್ರಿಯದರ್ಶಿನಿ ಅಭಿನಂದನೆ ತಿಳಿಸಿದ್ದಾರೆ.
ವಿದ್ಯಾರ್ಥಿಗಳಲ್ಲಿ ಸೃಜನಶೀಲ ವ್ಯಕ್ತಿತ್ವವನ್ನು ಮೈಗೂಡಿಸಿಕೊಳ್ಳಲು ಹಾಗೂ ಪ್ರಸ್ತುತ ಜಗತ್ತಿಗೆ ಅಗತ್ಯವಿರುವ ಕೌಶಲ್ಯಗಳನ್ನು ಒದಗಿಸಲು ಹಲವಾರು ವೈವಿಧ್ಯಮಯವಾದ ಶಿಕ್ಷಣ ಹಾಗೂ ಶಿಕ್ಷಣದ ಚಟುವಟಿಕೆಗಳನ್ನು ನೀಡುತ್ತಿರುವುದು ಜೈನ್ ಪಬ್ಲಿಕ್ ಸಂಸ್ಥೆಯ ವೈಶಿಷ್ಟ್ಯವಾಗಿದೆ. ಇಂತಹ ರಾಜ್ಯಮಟ್ಟದ ಪ್ರಶಸ್ತಿಯನ್ನು ತನ್ನದಾಗಿಸಿಕೊಳ್ಳಲು ಸಹಕರಿಸಿದ ಪೋಷಕರಿಗೆ ವಿದ್ಯಾರ್ಥಿಗಳಿಗೆ ಶಿಕ್ಷಕ ಹಾಗೂ ಶಿಕ್ಷಕೇತರ ವೃಂದದವರಿಗೆ ಧನ್ಯವಾದ ತಿಳಿಸಿದ್ದಾರೆ.












Discussion about this post