ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ನಗರದ ರಾಗಿಗುಡ್ಡದಲ್ಲಿ ನಿನ್ನೆ ಪೊಲೀಸರ ಮೇಲೆಯೇ ನಡೆದ ಕಲ್ಲು ತೂರಾಟ ಘಟನೆಗೆ ಸಂಬಂಧಿಸಿದಂತೆ ಇದುವರೆಗೂ 30ಕ್ಕೂ ಹೆಚ್ಚು ಮಂದಿಯನ್ನು ವಶಕ್ಕೆ ಪಡೆಯಲಾಗಿದ್ದು, 144 ಸೆಕ್ಷನ್ 144 Section ಜಾರಿ ಮಾಡಲಾಗಿದೆ.
ಘಟನೆಗೆ ಸಂಬಂಧಿಸಿದಂತೆ ಜಿಲ್ಲಾ ರಕ್ಷಣಾಧಿಕಾರಿ ಮಿಥುನ್ ಕುಮಾರ್ SP Mithun Kumar ಮಾಧ್ಯಮಗಳಿಗೆ ಮಾಹಿತಿ ನೀಡಿದ್ದು, ರಾಗಿಗುಡ್ಡದಲ್ಲಿ ಈದ್ ಮಿಲಾದ್ ಮೆರವಣಿಗೆ ಸಂದರ್ಭದಲ್ಲಿ ಕಿಡಿಗೇಡಿಗಳು ಕಲ್ಲು ತೂರಿದ್ದಾರೆ. ಇದರ ನಂತರ ವಾತಾವರಣ ಪ್ರಕ್ಷುಬ್ಧಗೊಂಡಿತ್ತು. ಸ್ಥಳಕ್ಕೆ ಭೇಟಿ ನೀಡಿದಾಗ ಕೆಲವರು ನಮ್ಮ ಮಾತಿಗೆ ಒಪ್ಪಿದರೆ, ಕೆಲವರು ಒಪ್ಪಲಿಲ. ಹುಡುಗರ ಗುಂಪೊಂದು ದಾಂಧಲೆಗೆ ಸಿದ್ಧತೆ ಮಾಡಿಕೊಂಡಿತ್ತು. ಹೀಗಾಗಿ ನಾವು ಹೆಚ್ಚುವರಿ ಬಲ ನಿಯೋಜಿಸಲಾಗಿದೆ ಎಂದರು.
ಪ್ರಸ್ತುರ ಘಟನಾಸ್ಥಳದಲ್ಲಿ 144 ಜಾರಿ ಮಾಡಲಾಗಿದ್ದು, ಈಗ ಪರಿಸ್ಥಿತಿ ಹತೋಟಿಯಲ್ಲಿದೆ. ಯಾವುದೇ ತೊಂದರೆ ಆಗಿಲ್ಲ. ಕೆಲವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಗಾಯಗೊಂಡವರು, ಆಸ್ತಿಪಾಸ್ತಿ ಹಾನಿಗೊಳಗಾದವರು ದೂರು ಕೊಡುವಂತೆ ಸೂಚಿಸಲಾಗಿದೆ ಎಂದು ತಿಳಿಸಿದರು.
Also read: ರಾಗಿಗುಡ್ಡದಲ್ಲಿ ಕಲ್ಲುತೂರಾಟ, ಸೆಕ್ಷನ್ ಜಾರಿ, ಆರ್’ಎಎಫ್ ರೂಟ್ ಮಾರ್ಚ್
ಘಟನೆಯಲ್ಲಿ ಭಾಗಿಯಾಗಿರುವ ಕೆಲವರನ್ನು ಈಗಾಗಲೇ ವಶಕ್ಕೆ ಪಡೆದುಕೊಳ್ಳಲಾಗಿದ್ದು, ಎಷ್ಟು ಜನ ವಶಕ್ಕೆ, ಎಷ್ಟು ದೂರುಗಳು ದಾಖಲಾಗಿವೆ ಎಂಬ ಬಗ್ಗೆ ತದನಂತರದಲ್ಲಿ ತಿಳಿಸಲಾಗುವುದು ಎಂದರು.
ಸಾರ್ವಜನಿಕರು ಸೇರಿದಂತೆ ಪೊಲೀಸರಿಗೂ ಗಾಯಗಳಾಗಿದ್ದು, ಅವರನ್ನೆಲ್ಲ ಆಸ್ಪತ್ರೆಗೆ ದಾಖಲಿಸಲಾಗಿದೆ. ದುಷ್ಕರ್ಮಿಗಳ ಕೃತ್ಯವನ್ನು ವಿಡಿಯೋಗಳಲ್ಲಿ ಪರಿಶೀಲಿಸಲಾಗಿದ್ದು, ತಪ್ಪಿತಸ್ಥರ ಮೇಲೆ ಸೂಕ್ತ ಕ್ರಮ ಕ್ರಮಕೈಗೊಳ್ಳುತ್ತೇವೆ. ಘಟನೆಗೆ ಸಂಬಂಧಿಸಿದಂತೆ ಸಾರ್ವಜನಿಕರೂ ದೂರು ನೀಡಿದ್ದು, ಕೆಲವು ಪೊಲೀಸರೇ ದೂರು ದಾಖಲಿಸಿಕೊಂಡಿದ್ದಾರೆ ಎಂದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post